• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆರೆಸ್ಸೆಸ್ ಸಭೆಯಲ್ಲಿ ಪ್ರಣಬ್ ಭಾಗವಹಿಸಿದ್ದನ್ನು ಎಲ್.ಕೆ.ಆಡ್ವಾಣಿ ಹೇಗೆ ಬಣ್ಣಿಸಿದ್ದಾರೆ ನೋಡಿ!

TNN Correspondent Posted On June 9, 2018
0


0
Shares
  • Share On Facebook
  • Tweet It

ಮಹಾರಾಷ್ಟ್ರದ ನಾಗಪುರದಲ್ಲಿರುವ ಆರೆಸ್ಸೆಸ್ ಮುಖ್ಯ ಕಚೇರಿಯಲ್ಲಿ ನಡೆದ ಆರೆಸ್ಸೆಸ್ ಸಭೆಯಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾಗವಹಿಸಿದ್ದು ಕಾಂಗ್ರೆಸ್ಸಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ ಎಂಬುದಕ್ಕೆ ಹಲವು ಮುಖಂಡರು ನೀಡಿದ ಹೇಳಿಕೆಗಳೇ ಸಾಕ್ಷಿಯಾಗಿವೆ. ಅಷ್ಟರಮಟ್ಟಿಗೆ ಕಾಂಗ್ರೆಸ್ ಪ್ರಣಬ್ ಭೇಟಿ ವಿರುದ್ಧ ಅಸಹಿಷ್ಣುತೆ ತೋರಿಸುತ್ತಿದ್ದಾರೆ.

ಆದರೆ ಪ್ರಣಬ್ ಮುಖರ್ಜಿಯವರ ಹೃದಯ ವೈಶಾಲ್ಯವನ್ನು ಆರೆಸ್ಸೆಸ್ ಸ್ವಾಗತಿಸಿದೆ. ಇದರ ಬೆನ್ನಲ್ಲೇ ಬಿಜೆಪಿ ಹಿರಿಯ ಮುಖಂಡ ಲಾಲ್ ಕೃಷ್ಣ ಆಡ್ವಾಣಿ ಸಹ ಪ್ರಣಬ್ ಭೇಟಿಗೆ ಮೆಚ್ಚುಗೆ ಸೂಚಿಸಿದ್ದು, “ಸಮಕಾಲಿನ ಭಾರತದ ಇತಿಹಾಸದಲ್ಲಿ ಪ್ರಣಬ್ ಮುಖರ್ಜಿ ಭೇಟಿ ಐತಿಹಾಸಿಕ’ ಎಂದು ಬಣ್ಣಿಸಿದ್ದಾರೆ.

ನಾಗಪುರದಲ್ಲಿ ನಡೆದ ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿಯವರು ಭಾಗವಹಿಸಿದ್ದು ಸ್ವಾಗತಾರ್ಹ. ಇದು ಭಾರತದಲ್ಲಿರುವ ಉದಾತ್ತ ಚಿಂತನೆ ಹಾಗೂ ರಾಷ್ಟ್ರೀಯವಾದಕ್ಕೆ ನೀಡುವ ಪ್ರಾಮುಖ್ಯತೆ ಕುರಿತ ಹೃದಯ ವೈಶಾಲ್ಯ ತೋರಿಸುತ್ತದೆ ಎಂದು ಆಡ್ವಾಣಿ ವಿಶ್ಲೇಷಿಸಿದ್ದಾರೆ.

ಆರೆಸ್ಸೆಸ್ ಸಭೆಯಲ್ಲಿ ಪ್ರಣಬ್ ಮುಖರ್ಜಿ ಹಾಗೂ ಮೋಹನ್ ಭಾಗವತ್ ಅವರು ದೇಶದಲ್ಲಿರುವ ಏಕತೆಯ ಪ್ರಾಮುಖ್ಯತೆಯನ್ನು ವಿಶ್ವಕ್ಕೇ ಸಾರಿದ್ದಾರೆ. ಬಹುಸಂಸ್ಕೃತಿ ಮೇಲಿರುವ  ನಂಬಿಕೆ, ವೈವಿಧ್ಯತೆ ಸೇರಿ ಹಲವು ಅಂಶಗಳ ಕುರಿತು ಇಬ್ಬರ ಅಭಿಪ್ರಾಯ ಮೆಚ್ಚಲರ್ಹ ಎಂದು ತಿಳಿಸಿದ್ದಾರೆ.

ಇಂತಹ ಸಭೆಗಳು ಹಾಗೂ ಅವುಗಳಲ್ಲಿ ಭಾಗವಹಿಸುವ ಹೃದಯ ವೈಶಾಲ್ಯದಿಂದ ನಮ್ಮ ದೃಷ್ಟಿಕೋನ ವಿಶಾಲವಾಗುತ್ತದೆ, ಪರಸ್ಪರ ತಿಳಿದುಕೊಳ್ಳುವಿಕೆ ವೃದ್ಧಿಯಾಗುತ್ತದೆ. ಇದರಿಂದ ದೇಶದಲ್ಲಿ ಸಹಿಷ್ಣುತೆ, ಸೌಹಾರ್ದತೆ, ಸಹೋದರತ್ವ ಮನೋಭಾವನೆ ಜಾಸ್ತಿಯಾಗುತ್ತದೆ. ಇಂತಹ ಮಹತ್ ಕಾರ್ಯಕ್ಕೆ ಪ್ರಣಬ್ ಮುಖರ್ಜಿಯವರು ಸಾಕ್ಷಿಯಾಗಿದ್ದಾರೆ ಎಂದು ಎಲ್.ಕೆ.ಆಡ್ವಾಣಿ ಬಣ್ಣಿಸಿದ್ದಾರೆ.

ಆರೆಸ್ಸೆಸ್ ಸಭೆಯಲ್ಲಿ ಪ್ರಣಬ್ ಮುಖರ್ಜಿ ಅವರು ಭಾರತದಲ್ಲಿರುವ ಸಹಿಷ್ಣುತೆ, ವಿವಿಧತೆಯಲ್ಲಿರುವ ಏಕತೆ ಸೇರಿ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದರು. ಮಾಜಿ ರಾಷ್ಟ್ರಪತಿಯವರ ಈ ಭಾಷಣ ದೇಶದ ಗಮನ ಸೆಳೆದಿತ್ತು.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search