• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ

ಅರ್ಜುನ್ ಅಮೃತಾ ಮದುವೆ ಹೇಗಿತ್ತು? ಇಲ್ಲಿದೆ ಅರ್ಜುನ್ ಅಮೃತಾಳ ಜಾತಕ!

TNN Correspondent Posted On July 21, 2017
0


0
Shares
  • Share On Facebook
  • Tweet It

ನಾಯಕಿ ನಾಯಕನ ಬಗ್ಗೆ ಅಪಾರ್ಥ ಮಾಡಿಕೊಳ್ಳುವುದರ ಮೂಲಕ ಸಿನಿಮಾಗೆ ಚಾಲನೆ ಸಿಗುತ್ತದೆ. ಹೀಗೆ ಮೆಲ್ಲನೆ ಸಾಗುವ ಸಿನಿಮಾ ಬೇರೆ ಬೇರೆ ವಿಷಯಗಳನ್ನು ಮೆಲುಕು ಹಾಕುವುದರ ಮೂಲಕ ಪ್ರೇಕಕ್ಷರಲ್ಲಿ ಕುತೂಹಲವನ್ನು ಹೆಚ್ಚು ಮಾಡುತ್ತಾ ಸಾಗುತ್ತದೆ. ಸಿನಿಮಾದಲ್ಲಿ ಕಾಮಿಡಿ, ಬೇಜಾರು, ಖುಷಿ ಎಲ್ಲದರ ಮಿಶ್ರಣವನ್ನು ಸರಿಯಾಗಿ ಒಂದು ಪ್ಯಾಕೇಜ್ ನಲ್ಲಿ ಕೊಡುವುದರ ಮೂಲಕ ಚಿತ್ರದ ನಿರ್ದೇಶಕ ರಘು ಶೆಟ್ಟಿ ಯಶಸ್ವಿಯಾಗಿದ್ದಾರೆ. ಮದುವೆ ಹೇಗೆ ನಡೆಯುತ್ತದೆ? ಯಾರಾ ಮದುವೆ ನಡೆಯುತ್ತದೆ? ಅರ್ಜುನ್ ಅಮೃತಾಳನ್ನು ಮದುವೆ ಆಗುವನೆ ಎಂಬುವ ಕುತೂಹಲವೇ ಚಿತ್ರದ ಕಥಾವಸ್ತು!
ಕೇವಲ ಕಾಮಿಡಿ ಮಾತ್ರವಲ್ಲ ಯಾವುದೇ ಪಾತ್ರವನ್ನು ಸರಿಯಾಗಿ ನಿಭಾಯಿಸಬಲ್ಲೇ ಎಂದು ನಮ್ಮ ತುಳು ಚಿತ್ರ ರಂಗದ ಕುಸುಲ್ದರಸೆ ನವೀನ್ ಡಿ ಪಡೀಲ್ ಏಸ ಚಿತ್ರದ ನಂತರ ಮತ್ತ್ಮೊಮ್ಮೆ ಸಾಬೀತು ಪಡಿಸಿದ್ದಾರೆ.  ಚಿತ್ರದಲ್ಲಿ ಭೋಜ್ ರಾಜ್ ವಾಮಂಜೂರ್, ಅರವಿಂದ್ ಬೋಳಾರ್, ಸತೀಶ್ ಬಂದಾಳೆ, ಉಮೇಶ್ ಮಿಜಾರ್ ಅವರ ಕಾಮಿಡಿ ಚೆನ್ನಾಗಿ ಮೂಡಿ ಬಂದಿದ್ದು ನಿಮ್ಮನ್ನು ನಗಿಸುವುದರಲ್ಲಿ ಎರಡು ಮಾತಿಲ್ಲ. ಚಿತ್ರದ ನಾಯಕ ಅನೂಪ್ ಸಾಗರ್ ನಾಯಕಿ ಆರಾಧ್ಯ ಶೆಟ್ಟಿ ಚೆನ್ನಾಗಿ ನಟಿಸಿದ್ದು ತುಳು ಸಿನಿಮಾ ರಂಗದ ಭರವಸೆಯ ಜೋಡಿ ಎಂದು ಭೇಷ್ ಅನ್ನಿಸಿ ಕೊಂಡಿದ್ದಾರೆ.
ಚಿತ್ರದ ಹಾಡುಗಳು ಹಾಗೂ ಅದರ ಚಿತ್ರೀಕರಣ ಬಹಳಷ್ಟು ಸುಂದರವಾಗಿ ಮೂಡಿಬಂದಿದ್ದು ಚಿತ್ರದ ಕ್ಯಾಮರ ತಂಡದ ಕೆಲಸ ಮೆಚ್ಚಲೇ ಬೇಕು. ಚಿತ್ರದಲ್ಲಿ ನಾಯಕನ ಸ್ನೇಹಿತನಾಗಿ ಕಾಣಿಸಿಕೊಳ್ಳುವ ಅನುರಾಗ್ ಬಂಗೇರ ಉತ್ತಮವಾಗಿ ಅಭಿನಯಿಸಿದ್ದು ತಮ್ಮ ಸಿನಿಮಾ ರಂಗದ ಪ್ರಯಾಣದ ಜವಾಬ್ದಾರಿಯನ್ನು ಹೆಚ್ಚಿಸಿಕೊಂಡಿದ್ದಾರೆ.  ನಾಯಕ-ನಾಯಕಿಯ ಹಾಗೂ ಚಿತ್ರದ ಎಲ್ಲ ಕಲಾವಿದರ ಉಡುಪುಗಳ ವೈವಸ್ಥೆ ಹಾಗೂ ಅದರ ಅಂದ-ಚೆಂದವನ್ನು ಡಿಸೈನರ್ ಮಂತ್ರದ ಜೀವನ ಗಟ್ಟಿ ಹೆಚ್ಚಿಸಿಕೊಟ್ಟಿದಾರೆ.
ಒಟ್ಟಿನಲ್ಲಿ ಕಾಮಿಡಿ ಮಾತ್ರವಲ್ಲದೆ ಸಂತೋಷ, ಬೇಜಾರು, ಸಂಭ್ರವನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ. ತುಳು ಚಿತ್ರರಂಗದಲ್ಲಿ ಕಾಮಿಡಿ ಮಾತ್ರವಲ್ಲದೆ ಇಂತಹ ಸಿನಿಮಾಗಳು ಹೆಚ್ಚಾಗಿ ಬರಬೇಕು ಎನ್ನುವುದು ಸಿನಿಪ್ರಿಯರ ಅನಿಸಿಕೆ. ಪ್ರೇಕ್ಷಕರ ಪ್ರಕಾರ ಸಿನಿಮಾ ಸ್ವಲ್ಪ ಮಟ್ಟಿಗೆ ನಿಧಾನವಾದರು ಸಿನಿಮಾದಲ್ಲಿ ಹೊಸತನವಿದೆ ಅನ್ನುವ ಮಾತು ಕೇಳಿ ಬರುತ್ತಿದೆ. ಅರ್ಜುನ್-ಅಮೃತಾ ಮದುವೆ ನೋಡಲು ಹೋದವರಿಗೆ ಯಾರಾ ಮದುವೆ ನೋಡಲು ಸಿಗುತ್ತದೆ ಅನ್ನುವುದೇ ಚಿತ್ರದ ಕ್ಲೈಮ್ಯಾಕ್ಸ್! ಅಂತು-ಇಂತು ಇಷ್ಟು ದಿನದಿಂದ ಸಿನಿ ಪ್ರಿಯರಲ್ಲಿ ಕುತೂಹಲ ಮೂಡಿಸಿದ್ದ ಚಿತ್ರ ಇಂದು ತೆರೆ ಕಂಡಿದೆ.
0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search