• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅರ್ಜುನ್ ಅಮೃತಾ ಮದುವೆ ಹೇಗಿತ್ತು? ಇಲ್ಲಿದೆ ಅರ್ಜುನ್ ಅಮೃತಾಳ ಜಾತಕ!

TNN Correspondent Posted On July 21, 2017


  • Share On Facebook
  • Tweet It

ನಾಯಕಿ ನಾಯಕನ ಬಗ್ಗೆ ಅಪಾರ್ಥ ಮಾಡಿಕೊಳ್ಳುವುದರ ಮೂಲಕ ಸಿನಿಮಾಗೆ ಚಾಲನೆ ಸಿಗುತ್ತದೆ. ಹೀಗೆ ಮೆಲ್ಲನೆ ಸಾಗುವ ಸಿನಿಮಾ ಬೇರೆ ಬೇರೆ ವಿಷಯಗಳನ್ನು ಮೆಲುಕು ಹಾಕುವುದರ ಮೂಲಕ ಪ್ರೇಕಕ್ಷರಲ್ಲಿ ಕುತೂಹಲವನ್ನು ಹೆಚ್ಚು ಮಾಡುತ್ತಾ ಸಾಗುತ್ತದೆ. ಸಿನಿಮಾದಲ್ಲಿ ಕಾಮಿಡಿ, ಬೇಜಾರು, ಖುಷಿ ಎಲ್ಲದರ ಮಿಶ್ರಣವನ್ನು ಸರಿಯಾಗಿ ಒಂದು ಪ್ಯಾಕೇಜ್ ನಲ್ಲಿ ಕೊಡುವುದರ ಮೂಲಕ ಚಿತ್ರದ ನಿರ್ದೇಶಕ ರಘು ಶೆಟ್ಟಿ ಯಶಸ್ವಿಯಾಗಿದ್ದಾರೆ. ಮದುವೆ ಹೇಗೆ ನಡೆಯುತ್ತದೆ? ಯಾರಾ ಮದುವೆ ನಡೆಯುತ್ತದೆ? ಅರ್ಜುನ್ ಅಮೃತಾಳನ್ನು ಮದುವೆ ಆಗುವನೆ ಎಂಬುವ ಕುತೂಹಲವೇ ಚಿತ್ರದ ಕಥಾವಸ್ತು!
ಕೇವಲ ಕಾಮಿಡಿ ಮಾತ್ರವಲ್ಲ ಯಾವುದೇ ಪಾತ್ರವನ್ನು ಸರಿಯಾಗಿ ನಿಭಾಯಿಸಬಲ್ಲೇ ಎಂದು ನಮ್ಮ ತುಳು ಚಿತ್ರ ರಂಗದ ಕುಸುಲ್ದರಸೆ ನವೀನ್ ಡಿ ಪಡೀಲ್ ಏಸ ಚಿತ್ರದ ನಂತರ ಮತ್ತ್ಮೊಮ್ಮೆ ಸಾಬೀತು ಪಡಿಸಿದ್ದಾರೆ.  ಚಿತ್ರದಲ್ಲಿ ಭೋಜ್ ರಾಜ್ ವಾಮಂಜೂರ್, ಅರವಿಂದ್ ಬೋಳಾರ್, ಸತೀಶ್ ಬಂದಾಳೆ, ಉಮೇಶ್ ಮಿಜಾರ್ ಅವರ ಕಾಮಿಡಿ ಚೆನ್ನಾಗಿ ಮೂಡಿ ಬಂದಿದ್ದು ನಿಮ್ಮನ್ನು ನಗಿಸುವುದರಲ್ಲಿ ಎರಡು ಮಾತಿಲ್ಲ. ಚಿತ್ರದ ನಾಯಕ ಅನೂಪ್ ಸಾಗರ್ ನಾಯಕಿ ಆರಾಧ್ಯ ಶೆಟ್ಟಿ ಚೆನ್ನಾಗಿ ನಟಿಸಿದ್ದು ತುಳು ಸಿನಿಮಾ ರಂಗದ ಭರವಸೆಯ ಜೋಡಿ ಎಂದು ಭೇಷ್ ಅನ್ನಿಸಿ ಕೊಂಡಿದ್ದಾರೆ.
ಚಿತ್ರದ ಹಾಡುಗಳು ಹಾಗೂ ಅದರ ಚಿತ್ರೀಕರಣ ಬಹಳಷ್ಟು ಸುಂದರವಾಗಿ ಮೂಡಿಬಂದಿದ್ದು ಚಿತ್ರದ ಕ್ಯಾಮರ ತಂಡದ ಕೆಲಸ ಮೆಚ್ಚಲೇ ಬೇಕು. ಚಿತ್ರದಲ್ಲಿ ನಾಯಕನ ಸ್ನೇಹಿತನಾಗಿ ಕಾಣಿಸಿಕೊಳ್ಳುವ ಅನುರಾಗ್ ಬಂಗೇರ ಉತ್ತಮವಾಗಿ ಅಭಿನಯಿಸಿದ್ದು ತಮ್ಮ ಸಿನಿಮಾ ರಂಗದ ಪ್ರಯಾಣದ ಜವಾಬ್ದಾರಿಯನ್ನು ಹೆಚ್ಚಿಸಿಕೊಂಡಿದ್ದಾರೆ.  ನಾಯಕ-ನಾಯಕಿಯ ಹಾಗೂ ಚಿತ್ರದ ಎಲ್ಲ ಕಲಾವಿದರ ಉಡುಪುಗಳ ವೈವಸ್ಥೆ ಹಾಗೂ ಅದರ ಅಂದ-ಚೆಂದವನ್ನು ಡಿಸೈನರ್ ಮಂತ್ರದ ಜೀವನ ಗಟ್ಟಿ ಹೆಚ್ಚಿಸಿಕೊಟ್ಟಿದಾರೆ.
ಒಟ್ಟಿನಲ್ಲಿ ಕಾಮಿಡಿ ಮಾತ್ರವಲ್ಲದೆ ಸಂತೋಷ, ಬೇಜಾರು, ಸಂಭ್ರವನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ. ತುಳು ಚಿತ್ರರಂಗದಲ್ಲಿ ಕಾಮಿಡಿ ಮಾತ್ರವಲ್ಲದೆ ಇಂತಹ ಸಿನಿಮಾಗಳು ಹೆಚ್ಚಾಗಿ ಬರಬೇಕು ಎನ್ನುವುದು ಸಿನಿಪ್ರಿಯರ ಅನಿಸಿಕೆ. ಪ್ರೇಕ್ಷಕರ ಪ್ರಕಾರ ಸಿನಿಮಾ ಸ್ವಲ್ಪ ಮಟ್ಟಿಗೆ ನಿಧಾನವಾದರು ಸಿನಿಮಾದಲ್ಲಿ ಹೊಸತನವಿದೆ ಅನ್ನುವ ಮಾತು ಕೇಳಿ ಬರುತ್ತಿದೆ. ಅರ್ಜುನ್-ಅಮೃತಾ ಮದುವೆ ನೋಡಲು ಹೋದವರಿಗೆ ಯಾರಾ ಮದುವೆ ನೋಡಲು ಸಿಗುತ್ತದೆ ಅನ್ನುವುದೇ ಚಿತ್ರದ ಕ್ಲೈಮ್ಯಾಕ್ಸ್! ಅಂತು-ಇಂತು ಇಷ್ಟು ದಿನದಿಂದ ಸಿನಿ ಪ್ರಿಯರಲ್ಲಿ ಕುತೂಹಲ ಮೂಡಿಸಿದ್ದ ಚಿತ್ರ ಇಂದು ತೆರೆ ಕಂಡಿದೆ.
  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search