• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಸ್ಲಾಂ ಕುರಿತು ಜಮ್ಮುವಿನಲ್ಲಿ ಈ ಹಿಂದೂವಿಗೆ ಇರುವ ಸಹಿಷ್ಣುತೆ ಕುರಿತು ಯಾರೂ ಏಕೆ ಸುದ್ದಿ ಮಾಡಲ್ಲ?

TNN Correspondent Posted On June 10, 2018
0


0
Shares
  • Share On Facebook
  • Tweet It

ಶ್ರೀನಗರ: ದೇಶದಲ್ಲಿ ಹಿಂದೂಗಳು ಎಂದರೆ ಅಸಹಿಷ್ಣುಗಳು, ಪರ ಧರ್ಮೀಯರನ್ನು ಸಹಿಸುವುದಿಲ್ಲ ಎಂದೇ ಕೆಲವರು ಬಿಂಬಿಸುತ್ತಾರೆ. ದೇಶ, ರಾಷ್ಟ್ರೀಯತೆ ಹಾಗೂ ಪರಧರ್ಮೀಯರ ಸೈರಣೆ ಮಾಡುವುದು ಹಿಂದೂಗಳಿಗೆ ಬರುವುದಿಲ್ಲ ಎಂಬ ಮಿಥ್ಯವನ್ನು ಬಿತ್ತುತ್ತಿದ್ದಾರೆ. ಆದರೆ ಅವರಿಗೇನು ಗೊತ್ತು ಹಿಂದೂಗಳು ಇತಿಹಾಸದಲ್ಲಿ ಎಂದಿಗೂ ಪರ ಧರ್ಮೀಯರ ಮೇಲೆ ದಾಳಿ ಮಾಡಿಲ್ಲ ಎಂದು? ಅಥವಾ ಗೊತ್ತಿದ್ದರೂ ಹಿಂದೂಗಳನ್ನು ಕೆಟ್ಟದಾಗಿ ಬಿಂಬಿಸುತ್ತಾರೇನೋ?

ಆದರೂ ಹಿಂದೂಗಳು ಮಾತ್ರ ಪರ ಧರ್ಮೀಯರನ್ನು, ಪರ ಧರ್ಮವನ್ನು ಗೌರವಿಸುತ್ತಲೇ ಬಂದಿದ್ದಾರೆ. ಈಗ ಹಿಂದೂಗಳ ಇಂಥ ಧರ್ಮ ಸಹಿಷ್ಣುಗೆ ಜಮ್ಮುವಿನಲ್ಲಿ ಜೀವಂತ ನಿದರ್ಶನವೊಂದು ದೊರೆತಿದೆ.

ಹೌದು, ಜಮ್ಮುವಿನಲ್ಲಿ ವಾಸಿಸುತ್ತಿರುವ ಸುರೇಶ್ ಅಬ್ರೋಲ್ ಅವರು ಇಸ್ಲಾಂ ಧರ್ಮದ ಮೇಲಿರುವ ಗೌರವದ ಹಿನ್ನೆಲೆಯಲ್ಲಿ ಇಸ್ಲಾಂ ಹಾಗೂ ಕುರ್ರಾನ್ ಕುರಿತ ಪುರಾತನ ಹಸ್ತಪ್ರತಿ ಸಂಗ್ರಹಿಸಿದ್ದಾರೆ. ಅಷ್ಟೇ ಅಲ್ಲ, ಇತ್ತೀಚೆಗೆ ಜಮ್ಮು-ಕಾಶ್ಮೀರ ಸಾಂಸ್ಕೃತಿಕ ಅಕಾಡೆಮಿ ಆಯೋಜಿಸಿದ್ದ ಇಸ್ಲಾಮಿಕ್ ವಸ್ತು ಪ್ರದರ್ಶನದಲ್ಲಿ ಈ ಹಿಂದೂ ಸಂಗ್ರಹಿಸಿರುವ ಹಸ್ತಪ್ರತಿಗಳು ಎಲ್ಲರ ಗಮನ ಸೆಳೆದಿವೆ.

ಸುರೇಶ್ ಅಬ್ರೋಲ್ ಬರೋಬ್ಬರಿ ಒಂದು ಶತಮಾನದ ಹಿಂದಿನ ಹಸ್ತಪ್ರತಿಗಳನ್ನು ಸಂಗ್ರಹಿಸಿದ್ದು, ಇಸ್ಲಾಂ ಧರ್ಮದ ಪ್ರಾಮುಖ್ಯತೆ, ಇಸ್ಲಾಮಿನ ಸಂದೇಶ ಸಾರುವ ಹಲವು ಹಸ್ತಪ್ರತಿಗಳನ್ನು ಸಂಗ್ರಹಿಸಿದ್ದಾರೆ.

ಆದರೆ ದೇಶದಲ್ಲಿ ಹಿಂದೂಗಳು ಗೋರಕ್ಷಣೆಗೆ ಮುಂದಾದರೆ ಅದನ್ನು ದೌರ್ಜನ್ಯ ಎನ್ನುತ್ತಾರೆ, ಹಿಂದುತ್ವ ಎಂದರೆ ಬೇರೆ ಧರ್ಮದ ಬಗ್ಗೆ ಸೈರಣೆ ಇಲ್ಲದವರು ಎಂದು ಸುಖಾಸುಮ್ಮನೆ ಆರೋಪ ಮಾಡುತ್ತಾರೆ. ಆದರೆ ಇದೇ ಹಿಂದೂವೊಬ್ಬ ಇಸ್ಲಾಂ ಧರ್ಮದ ಮೇಲಿನ ಗೌರವದಿಂದ ಹೀಗೆ ನೂರಾರು ವರ್ಷಗಳ ಹಸ್ತಪ್ರತಿ ಸಂಗ್ರಹಿಸಿ ಸೌಹಾರ್ದತೆ ಮೆರೆದಿರುವ ಕುರಿತು ಬಹುತೇಕ ಮಾಧ್ಯಮಗಳು ವರದಿ ಮಾಡಲ್ಲ. ಯಾವ ಜಾತ್ಯತೀತ, ಪ್ರಗತಿಪರರೂ ಇದನ್ನು ಶ್ಲಾಘಿಸುವುದಿಲ್ಲ.

 

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search