• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇಸ್ಲಾಂ ಕುರಿತು ಜಮ್ಮುವಿನಲ್ಲಿ ಈ ಹಿಂದೂವಿಗೆ ಇರುವ ಸಹಿಷ್ಣುತೆ ಕುರಿತು ಯಾರೂ ಏಕೆ ಸುದ್ದಿ ಮಾಡಲ್ಲ?

TNN Correspondent Posted On June 10, 2018


  • Share On Facebook
  • Tweet It

ಶ್ರೀನಗರ: ದೇಶದಲ್ಲಿ ಹಿಂದೂಗಳು ಎಂದರೆ ಅಸಹಿಷ್ಣುಗಳು, ಪರ ಧರ್ಮೀಯರನ್ನು ಸಹಿಸುವುದಿಲ್ಲ ಎಂದೇ ಕೆಲವರು ಬಿಂಬಿಸುತ್ತಾರೆ. ದೇಶ, ರಾಷ್ಟ್ರೀಯತೆ ಹಾಗೂ ಪರಧರ್ಮೀಯರ ಸೈರಣೆ ಮಾಡುವುದು ಹಿಂದೂಗಳಿಗೆ ಬರುವುದಿಲ್ಲ ಎಂಬ ಮಿಥ್ಯವನ್ನು ಬಿತ್ತುತ್ತಿದ್ದಾರೆ. ಆದರೆ ಅವರಿಗೇನು ಗೊತ್ತು ಹಿಂದೂಗಳು ಇತಿಹಾಸದಲ್ಲಿ ಎಂದಿಗೂ ಪರ ಧರ್ಮೀಯರ ಮೇಲೆ ದಾಳಿ ಮಾಡಿಲ್ಲ ಎಂದು? ಅಥವಾ ಗೊತ್ತಿದ್ದರೂ ಹಿಂದೂಗಳನ್ನು ಕೆಟ್ಟದಾಗಿ ಬಿಂಬಿಸುತ್ತಾರೇನೋ?

ಆದರೂ ಹಿಂದೂಗಳು ಮಾತ್ರ ಪರ ಧರ್ಮೀಯರನ್ನು, ಪರ ಧರ್ಮವನ್ನು ಗೌರವಿಸುತ್ತಲೇ ಬಂದಿದ್ದಾರೆ. ಈಗ ಹಿಂದೂಗಳ ಇಂಥ ಧರ್ಮ ಸಹಿಷ್ಣುಗೆ ಜಮ್ಮುವಿನಲ್ಲಿ ಜೀವಂತ ನಿದರ್ಶನವೊಂದು ದೊರೆತಿದೆ.

ಹೌದು, ಜಮ್ಮುವಿನಲ್ಲಿ ವಾಸಿಸುತ್ತಿರುವ ಸುರೇಶ್ ಅಬ್ರೋಲ್ ಅವರು ಇಸ್ಲಾಂ ಧರ್ಮದ ಮೇಲಿರುವ ಗೌರವದ ಹಿನ್ನೆಲೆಯಲ್ಲಿ ಇಸ್ಲಾಂ ಹಾಗೂ ಕುರ್ರಾನ್ ಕುರಿತ ಪುರಾತನ ಹಸ್ತಪ್ರತಿ ಸಂಗ್ರಹಿಸಿದ್ದಾರೆ. ಅಷ್ಟೇ ಅಲ್ಲ, ಇತ್ತೀಚೆಗೆ ಜಮ್ಮು-ಕಾಶ್ಮೀರ ಸಾಂಸ್ಕೃತಿಕ ಅಕಾಡೆಮಿ ಆಯೋಜಿಸಿದ್ದ ಇಸ್ಲಾಮಿಕ್ ವಸ್ತು ಪ್ರದರ್ಶನದಲ್ಲಿ ಈ ಹಿಂದೂ ಸಂಗ್ರಹಿಸಿರುವ ಹಸ್ತಪ್ರತಿಗಳು ಎಲ್ಲರ ಗಮನ ಸೆಳೆದಿವೆ.

ಸುರೇಶ್ ಅಬ್ರೋಲ್ ಬರೋಬ್ಬರಿ ಒಂದು ಶತಮಾನದ ಹಿಂದಿನ ಹಸ್ತಪ್ರತಿಗಳನ್ನು ಸಂಗ್ರಹಿಸಿದ್ದು, ಇಸ್ಲಾಂ ಧರ್ಮದ ಪ್ರಾಮುಖ್ಯತೆ, ಇಸ್ಲಾಮಿನ ಸಂದೇಶ ಸಾರುವ ಹಲವು ಹಸ್ತಪ್ರತಿಗಳನ್ನು ಸಂಗ್ರಹಿಸಿದ್ದಾರೆ.

ಆದರೆ ದೇಶದಲ್ಲಿ ಹಿಂದೂಗಳು ಗೋರಕ್ಷಣೆಗೆ ಮುಂದಾದರೆ ಅದನ್ನು ದೌರ್ಜನ್ಯ ಎನ್ನುತ್ತಾರೆ, ಹಿಂದುತ್ವ ಎಂದರೆ ಬೇರೆ ಧರ್ಮದ ಬಗ್ಗೆ ಸೈರಣೆ ಇಲ್ಲದವರು ಎಂದು ಸುಖಾಸುಮ್ಮನೆ ಆರೋಪ ಮಾಡುತ್ತಾರೆ. ಆದರೆ ಇದೇ ಹಿಂದೂವೊಬ್ಬ ಇಸ್ಲಾಂ ಧರ್ಮದ ಮೇಲಿನ ಗೌರವದಿಂದ ಹೀಗೆ ನೂರಾರು ವರ್ಷಗಳ ಹಸ್ತಪ್ರತಿ ಸಂಗ್ರಹಿಸಿ ಸೌಹಾರ್ದತೆ ಮೆರೆದಿರುವ ಕುರಿತು ಬಹುತೇಕ ಮಾಧ್ಯಮಗಳು ವರದಿ ಮಾಡಲ್ಲ. ಯಾವ ಜಾತ್ಯತೀತ, ಪ್ರಗತಿಪರರೂ ಇದನ್ನು ಶ್ಲಾಘಿಸುವುದಿಲ್ಲ.

 

  • Share On Facebook
  • Tweet It


- Advertisement -


Trending Now
ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
Tulunadu News September 26, 2023
ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
Tulunadu News September 26, 2023
Leave A Reply

  • Recent Posts

    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
    • ಅಂದು ಸಿದ್ದು, ಇಂದು ಹರಿ!
    • ಆ ನಿರೂಪಕ ಇದ್ದರೆ ಬರಲ್ಲ ಎನ್ನುವುದು ಶೂರತನವೇ?
    • ಏನಂತ ಚೈತ್ರಾಳಿಗೆ ಅಷ್ಟು ಹಣ ಕೊಟ್ರು ಪೂಜಾರಿ!?
    • ಉತ್ತರಖಂಡದ ಮದರಸಾಗಳಲ್ಲಿ ಇನ್ನು ಸಂಸ್ಕೃತ ಶಿಕ್ಷಣ
    • ಭಾರತ್ ಮಾತಾ ಕೀ ಜೈ ಎಂದು ಮೀಡಿಯಾ ಸೆಂಟರ್ ನಲ್ಲಿ ಉದ್ಘೋಷಣೆ!
  • Popular Posts

    • 1
      ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • 2
      ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • 3
      ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • 4
      ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search