• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಹಾಘಟ್ ಬಂಧನ್ ಗೆ ಬಿತ್ತು ಬಾರಿ ಹೊಡೆತ, ಪಶ್ಚಿಮ ಬಂಗಾಳದಿಂದಲೇ ಬಿಜೆಪಿ ವಿರೋಧಿ ಪಕ್ಷಗಳಿಗೆ ಶಾಕ್

TNN Correspondent Posted On June 10, 2018
0


0
Shares
  • Share On Facebook
  • Tweet It

ಕೊಲ್ಕತ್ತಾ: ದೇಶಾದ್ಯಂತ ಬಿಜೆಪಿ ಅಶ್ವಮೇದದ ವಿಜಯಯಾತ್ರೆಯನ್ನು ಕಟ್ಟಿಹಾಕಲು ಹೊರಟಿರುವ ಕಾಂಗ್ರೆಸ್ ಸೇರಿ ದೇಶದ ಎಲ್ಲ ಮೋದಿ ವಿರೋಧಿ ಪಕ್ಷಗಳು ಸೇರಿ ನಿರ್ಮಿಸುತ್ತಿರುವ ಮಹಾಘಟ್ ಬಂಧನ್ ಗೆ ಅಂಬೇಗಾಲಿಡುವ ಹೊತ್ತಿನಲ್ಲೇ ಬಾರಿ ಹೊಡೆತ ಬಿದ್ದಿದೆ. ಮಹಾಘಟಬಂಧನದ ಬೀಜ ಬಲಿಷ್ಠವಾಗಿ ಬೇರುರೂವಂತೆ ಮಾಡಿದ ಪಶ್ಚಿಮಬಂಗಾಳದ ಮಮತಾ ಬ್ಯಾನರ್ಜಿ ನೆಲದಲ್ಲೇ ಕಾಂಗ್ರೆಸ್, ಸಿಪಿಎಂ ಮತ್ತು ತೃಣಮೂಲ ಕಾಂಗ್ರೆಸ್ ಒಗ್ಗೂಡುವುದು ಕಷ್ಟ ಎಂಬುದನ್ನು ಸಿಪಿಎಂ, ತೃಣಮೂಲ ಕಾಂಗ್ರೆಸ್ ಸ್ಥಳೀಯ ಮುಖಂಡರೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದ ಕಾಂಗ್ರೆಸ್ ಮತ್ತು ಸಿಪಿಎಂ ರಾಜ್ಯ ಘಟಕದ ಮುಖಂಡರು 2019ರ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ತೃಣಮೂಲ ಕಾಂಗ್ರೆಸ್ ಜೊತೆ ಹೊಂದಾಣಿಕೆಯಾಗಲು ಸಾಧ್ಯವಿಲ್ಲ ಎಂಬ ಸ್ಪಷ್ಟ ನುಡಿಗಳನ್ನು ಹೇಳಿದ್ದಾರೆ ಎಂಬ ಸುದ್ದಿಗಳು ಕೇಳಿ ಬಂದಿವೆ.

ಕಾಂಗ್ರೆಸ್ ಹಿರಿಯ ಮುಖಂಡ, ಪಶ್ಚಿಮ ಬಂಗಾಳ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಓಂ ಪ್ರಕಾಶ ಮಿಶ್ರಾ ‘ನಾವು ಯಾವುದೇ ಕಾರಣಕ್ಕೂ ಪ್ರಜಾಪ್ರಭುತ್ವ ಮತ್ತು ಜಾತ್ಯಾತೀತವಾದದ ವಿರೋಧಿಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಎರಡೂ ಪಕ್ಷಗಳು ಕಾಂಗ್ರೆಸ್ ಪಕ್ಷದ ಸಿದ್ಧಾಂತದ ವಿರುದ್ಧ ನಿಲುವು ಹೊಂದಿವೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಪ್ರಜಾಪ್ರಭುತ್ವದ ಕೊಲೆ ಮಾಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಜಿಲ್ಲಾ ಮಟ್ಟದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಲ್ಲೂ ತೃಣಮೂಲ ಕಾಂಗ್ರೆಸ್ ವಿರುದ್ಧ ತೀವ್ರ ಆಕ್ರೋಶವಿದ್ದು, ಅದು 2019ರಲ್ಲಿ ಹೊರ ಹಾಕಲು ಸಿದ್ಧರಾಗಿದ್ದಾರೆ. ಅದರೆ ಇದೇ ವೇಳೆಯಲ್ಲೇ ವಿರೋಧಿಗಳ ಜೊತೆ ಕೈ ಜೋಡಿಸುವುದು ಕಷ್ಟವಾಗುತ್ತದೆ. ಟಿಎಂಸಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಿರಂತರವಾಗಿ ಹಲ್ಲೆಗಳನ್ನು ಮಾಡಿದ್ದಾರೆ. ಆ ಗಾಯಗಳೇ ಇನ್ನು ಮಾಸಿಲ್ಲ. ಅಲ್ಲದೇ ವಿನಾ ಕಾರಣ ನಮ್ಮ ಮೇಲೆ ಪ್ರಕರಣ ದಾಖಲಿಸಿ ಜೈಲಿಗೆ ಹಾಕಿ ಕಿರುಕುಳ ನೀಡಿದ್ದಾರೆ. ರಾಜ್ಯ, ರಾಷ್ಟ್ರಮಟ್ಟದಲ್ಲೂ ಘಟ್ ಬಂಧನ್ ಸಂಭವಿಸಿದರೂ ಸ್ಥಳೀಯವಾಗಿ ಯಾವುದೇ ಕಾರಣಕ್ಕೂ ಘಟ್ ಬಂಧನ್ ಸಾಧ್ಯವಿಲ್ಲ ಎಂಬುದು ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಸ್ಥಳೀಯ ಕಾರ್ಯಕರ್ತರ ಮನದಾಳ.

ಸಿಪಿಎಂ ಹಿರಿಯ ಮುಖಂಡ ಡಾ.ಫೌದ್ ಹಲೀಮ್ ಕೂಡ ತೃಣಮೂಲ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದು, 2019ರಲ್ಲಿ ಎಂಥಹುದ್ದೇ ಸ್ಥಿತಿ ಬಂದರೂ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ. ನಮ್ಮ ಗುರಿಯೇ ಟಿಎಂಸಿ ಹಠಾವೋ ಬೆಂಗಾಲ ಬಚಾವೋ ಎಂದು ಹೇಳುವ ಮೂಲಕ ಮಹಾಘಟ್ ಬಂಧನದ ಕನಸಿಗೆ ಎಳ್ಳು ನೀರು ಬಿಟ್ಟಿದ್ದಾರೆ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search