• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾ ನೆಲದಲ್ಲಿ ನಿಂತು, ಅದೇ ರಾಷ್ಟ್ರಕ್ಕೆ ನರೇಂದ್ರ ಮೋದಿ ಅವರು ಹೇಗೆ ತಪರಾಕಿ ನೀಡಿದ್ದಾರೆ ನೋಡಿ!

TNN Correspondent Posted On June 11, 2018
0


0
Shares
  • Share On Facebook
  • Tweet It

ಶಾಂಘೈ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಇಡೀ ವಿಶ್ವದಲ್ಲೇ ಭಾರತದ ಖ್ಯಾತಿ ದ್ವಿಗುಣವಾಗುತ್ತಿದೆ. ಅದಕ್ಕೆ ಕಾರಣ ಮೋದಿ ಪ್ರಭಾವ ಹಾಗೂ ದೇಶ ಅಭಿವೃದ್ಧಿಯಾಗುತ್ತಿರುವುದೇ ಇದೆ. ಹಾಗಂತ ಎಂದಿಗೂ ನರೇಂದ್ರ ಮೋದಿ ಅವರು ವಿಶ್ವದ ಎದುರು ಕೈಚಾಚಿ ನಿಲ್ಲುವುದಾಗಲಿ, ಯಾರನ್ನೇ ಬೇಡಿಕೊಳ್ಳುವುದಾಗಲಿ ಮಾಡಿಲ್ಲ. ಇಂತಹ ಸ್ವಾಭಿಮಾನಿ ಪ್ರಧಾನಿ ಇರುವುದರಿಂದಲೇ ಭಾರತ ವಿಶ್ವವಿಖ್ಯಾತವಾಯಿತು ಎಂದರೂ ಅತಿಶಯೋಕ್ತಿಯೇನಲ್ಲ.

ಈಗ ಪ್ರಧಾನಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಮಹತ್ತರ ನಿರ್ಧಾರವನ್ನು ಕೈಗೊಂಡಿದ್ದು, ಚೀನಾ ನೆಲ್ಲದಲ್ಲಿ ನಿಂತು, ಅದೇ ನೆಲದಲ್ಲಿ ಆ ರಾಷ್ಟ್ರಕ್ಕೆ ತಪರಾಕಿ ನೀಡುವ ಮೂಲಕ ನರೇಂದ್ರ ಮೋದಿ ಎಲ್ಲರ ಗಮನ ಸೆಳೆದಿದ್ದಾರೆ ಹಾಗೂ ಭಾರತದ ದೃಢ ನಿರ್ಧಾರದ ಬಗ್ಗೆ ಸಂದೇಶ ಸಾರಿದ್ದಾರೆ.

ಹೌದು, ಭಾನುವಾರವಷ್ಟೇ ಚೀನಾದ ಕಿಂಗ್ಡಾವೋದಲ್ಲಿ ನಡೆದ 18ನೇ ಶಾಂಘೈ ಸಹಕಾರ ಸಂಸ್ಥೆಯ 18ನೇ ಸಭೆಯಲ್ಲಿ ಪಾಲ್ಗೊಂಡ ನರೇಂದ್ರ ಮೋದಿ ಅವರು ಚೀನಾದ ಮಹತ್ತರ ಒಂದು ಪ್ರದೇಶ, ಒಂದು ರಸ್ತೆ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಎಸ್ಸಿಒ 8 ಸದಸ್ಯ ರಾಷ್ಟ್ರಗಳಲ್ಲಿ ಏಳು ರಾಷ್ಟ್ರಗಳು ಚೀನಾದ ಒಆರ್ ಒಪಿ ಯೋಜನೆಗೆ ಬೆಂಬಲೆ ಸೂಚಿಸಿವೆ. ಆದರೆ ನರೇಂದ್ರ ಮೋದಿ ಅವರು ಮಾತ್ರ ಪಾಕ್ ಆಕ್ರಮಿತ ಕಾಶ್ಮೀರ ಸೇರಿ ಭಾರತದಲ್ಲಿ ಯಾವುದೇ ಕಾಮಗಾರಿ ಕೈಗೊಳ್ಳಲು ಅನುಮತಿ ನೀಡದೇ ಇರುವ ಮೂಲಕ ದಿಟ್ಟತನ ಮೆರೆದಿದ್ದಾರೆ.

ಹಾಗಂತ ನರೇಂದ್ರ ಮೋದಿ ಅವರೇನು ಚೀನಾದ ವಿರೋಧ ಕಟ್ಟಿಕೊಟ್ಟಿಲ್ಲ. ಬದಲಾಗಿ ಎಸ್ಸಿಒ ಸಭೆಯ ನಡುವೆಯೇ ಚೀನಾ ಜತೆ ಎರಡು ಒಪ್ಪಂದ ಮಾಡಿಕೊಂಡಿದ್ದಾರೆ. ಬ್ರಹ್ಮಪುತ್ರ ನದಿ ನೀರಿನ ದತ್ತಾಂಶ ನೀಡುವ ಹಾಗೂ ಭಾರತದಿಂದ ಚೀನಾಕ್ಕೆ ಬಾಸುಮತಿ ಅಕ್ಕಿ ಹೊರತಾದ ಅಕ್ಕಿ ರಫ್ತು ಮಾಡಲು ಒಪ್ಪಂದ ಮಾಡಿಕೊಂಡಿದ್ದಾರೆ. ಆದರೆ ಒಆರ್ ಒಬಿ ವಿಷಯದಲ್ಲಿ ಮಾತ್ರ ಮೋದಿ ತಮ್ಮ ಕಠಿಣ ನಿಲುವನ್ನು ಸಡಿಲಗೊಳಿಸದೆ ಹೆಮ್ಮೆ ಮೂಡಿಸಿದ್ದಾರೆ. ಅದೂ ಚೀನಾದ ನೆಲದಲ್ಲೇ ನಿಂತು, ಚೀನಾಕ್ಕೆ ತಪರಾಕಿ ನೀಡುವುದು ಎಂದರೆ ಸುಮ್ಮನೆಯಾ?

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search