• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾ ನೆಲದಲ್ಲಿ ನಿಂತು, ಅದೇ ರಾಷ್ಟ್ರಕ್ಕೆ ನರೇಂದ್ರ ಮೋದಿ ಅವರು ಹೇಗೆ ತಪರಾಕಿ ನೀಡಿದ್ದಾರೆ ನೋಡಿ!

TNN Correspondent Posted On June 11, 2018
0


0
Shares
  • Share On Facebook
  • Tweet It

ಶಾಂಘೈ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಇಡೀ ವಿಶ್ವದಲ್ಲೇ ಭಾರತದ ಖ್ಯಾತಿ ದ್ವಿಗುಣವಾಗುತ್ತಿದೆ. ಅದಕ್ಕೆ ಕಾರಣ ಮೋದಿ ಪ್ರಭಾವ ಹಾಗೂ ದೇಶ ಅಭಿವೃದ್ಧಿಯಾಗುತ್ತಿರುವುದೇ ಇದೆ. ಹಾಗಂತ ಎಂದಿಗೂ ನರೇಂದ್ರ ಮೋದಿ ಅವರು ವಿಶ್ವದ ಎದುರು ಕೈಚಾಚಿ ನಿಲ್ಲುವುದಾಗಲಿ, ಯಾರನ್ನೇ ಬೇಡಿಕೊಳ್ಳುವುದಾಗಲಿ ಮಾಡಿಲ್ಲ. ಇಂತಹ ಸ್ವಾಭಿಮಾನಿ ಪ್ರಧಾನಿ ಇರುವುದರಿಂದಲೇ ಭಾರತ ವಿಶ್ವವಿಖ್ಯಾತವಾಯಿತು ಎಂದರೂ ಅತಿಶಯೋಕ್ತಿಯೇನಲ್ಲ.

ಈಗ ಪ್ರಧಾನಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಮಹತ್ತರ ನಿರ್ಧಾರವನ್ನು ಕೈಗೊಂಡಿದ್ದು, ಚೀನಾ ನೆಲ್ಲದಲ್ಲಿ ನಿಂತು, ಅದೇ ನೆಲದಲ್ಲಿ ಆ ರಾಷ್ಟ್ರಕ್ಕೆ ತಪರಾಕಿ ನೀಡುವ ಮೂಲಕ ನರೇಂದ್ರ ಮೋದಿ ಎಲ್ಲರ ಗಮನ ಸೆಳೆದಿದ್ದಾರೆ ಹಾಗೂ ಭಾರತದ ದೃಢ ನಿರ್ಧಾರದ ಬಗ್ಗೆ ಸಂದೇಶ ಸಾರಿದ್ದಾರೆ.

ಹೌದು, ಭಾನುವಾರವಷ್ಟೇ ಚೀನಾದ ಕಿಂಗ್ಡಾವೋದಲ್ಲಿ ನಡೆದ 18ನೇ ಶಾಂಘೈ ಸಹಕಾರ ಸಂಸ್ಥೆಯ 18ನೇ ಸಭೆಯಲ್ಲಿ ಪಾಲ್ಗೊಂಡ ನರೇಂದ್ರ ಮೋದಿ ಅವರು ಚೀನಾದ ಮಹತ್ತರ ಒಂದು ಪ್ರದೇಶ, ಒಂದು ರಸ್ತೆ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಎಸ್ಸಿಒ 8 ಸದಸ್ಯ ರಾಷ್ಟ್ರಗಳಲ್ಲಿ ಏಳು ರಾಷ್ಟ್ರಗಳು ಚೀನಾದ ಒಆರ್ ಒಪಿ ಯೋಜನೆಗೆ ಬೆಂಬಲೆ ಸೂಚಿಸಿವೆ. ಆದರೆ ನರೇಂದ್ರ ಮೋದಿ ಅವರು ಮಾತ್ರ ಪಾಕ್ ಆಕ್ರಮಿತ ಕಾಶ್ಮೀರ ಸೇರಿ ಭಾರತದಲ್ಲಿ ಯಾವುದೇ ಕಾಮಗಾರಿ ಕೈಗೊಳ್ಳಲು ಅನುಮತಿ ನೀಡದೇ ಇರುವ ಮೂಲಕ ದಿಟ್ಟತನ ಮೆರೆದಿದ್ದಾರೆ.

ಹಾಗಂತ ನರೇಂದ್ರ ಮೋದಿ ಅವರೇನು ಚೀನಾದ ವಿರೋಧ ಕಟ್ಟಿಕೊಟ್ಟಿಲ್ಲ. ಬದಲಾಗಿ ಎಸ್ಸಿಒ ಸಭೆಯ ನಡುವೆಯೇ ಚೀನಾ ಜತೆ ಎರಡು ಒಪ್ಪಂದ ಮಾಡಿಕೊಂಡಿದ್ದಾರೆ. ಬ್ರಹ್ಮಪುತ್ರ ನದಿ ನೀರಿನ ದತ್ತಾಂಶ ನೀಡುವ ಹಾಗೂ ಭಾರತದಿಂದ ಚೀನಾಕ್ಕೆ ಬಾಸುಮತಿ ಅಕ್ಕಿ ಹೊರತಾದ ಅಕ್ಕಿ ರಫ್ತು ಮಾಡಲು ಒಪ್ಪಂದ ಮಾಡಿಕೊಂಡಿದ್ದಾರೆ. ಆದರೆ ಒಆರ್ ಒಬಿ ವಿಷಯದಲ್ಲಿ ಮಾತ್ರ ಮೋದಿ ತಮ್ಮ ಕಠಿಣ ನಿಲುವನ್ನು ಸಡಿಲಗೊಳಿಸದೆ ಹೆಮ್ಮೆ ಮೂಡಿಸಿದ್ದಾರೆ. ಅದೂ ಚೀನಾದ ನೆಲದಲ್ಲೇ ನಿಂತು, ಚೀನಾಕ್ಕೆ ತಪರಾಕಿ ನೀಡುವುದು ಎಂದರೆ ಸುಮ್ಮನೆಯಾ?

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search