• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾ ನೆಲದಲ್ಲಿ ನಿಂತು, ಅದೇ ರಾಷ್ಟ್ರಕ್ಕೆ ನರೇಂದ್ರ ಮೋದಿ ಅವರು ಹೇಗೆ ತಪರಾಕಿ ನೀಡಿದ್ದಾರೆ ನೋಡಿ!

TNN Correspondent Posted On June 11, 2018
0


0
Shares
  • Share On Facebook
  • Tweet It

ಶಾಂಘೈ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಇಡೀ ವಿಶ್ವದಲ್ಲೇ ಭಾರತದ ಖ್ಯಾತಿ ದ್ವಿಗುಣವಾಗುತ್ತಿದೆ. ಅದಕ್ಕೆ ಕಾರಣ ಮೋದಿ ಪ್ರಭಾವ ಹಾಗೂ ದೇಶ ಅಭಿವೃದ್ಧಿಯಾಗುತ್ತಿರುವುದೇ ಇದೆ. ಹಾಗಂತ ಎಂದಿಗೂ ನರೇಂದ್ರ ಮೋದಿ ಅವರು ವಿಶ್ವದ ಎದುರು ಕೈಚಾಚಿ ನಿಲ್ಲುವುದಾಗಲಿ, ಯಾರನ್ನೇ ಬೇಡಿಕೊಳ್ಳುವುದಾಗಲಿ ಮಾಡಿಲ್ಲ. ಇಂತಹ ಸ್ವಾಭಿಮಾನಿ ಪ್ರಧಾನಿ ಇರುವುದರಿಂದಲೇ ಭಾರತ ವಿಶ್ವವಿಖ್ಯಾತವಾಯಿತು ಎಂದರೂ ಅತಿಶಯೋಕ್ತಿಯೇನಲ್ಲ.

ಈಗ ಪ್ರಧಾನಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಮಹತ್ತರ ನಿರ್ಧಾರವನ್ನು ಕೈಗೊಂಡಿದ್ದು, ಚೀನಾ ನೆಲ್ಲದಲ್ಲಿ ನಿಂತು, ಅದೇ ನೆಲದಲ್ಲಿ ಆ ರಾಷ್ಟ್ರಕ್ಕೆ ತಪರಾಕಿ ನೀಡುವ ಮೂಲಕ ನರೇಂದ್ರ ಮೋದಿ ಎಲ್ಲರ ಗಮನ ಸೆಳೆದಿದ್ದಾರೆ ಹಾಗೂ ಭಾರತದ ದೃಢ ನಿರ್ಧಾರದ ಬಗ್ಗೆ ಸಂದೇಶ ಸಾರಿದ್ದಾರೆ.

ಹೌದು, ಭಾನುವಾರವಷ್ಟೇ ಚೀನಾದ ಕಿಂಗ್ಡಾವೋದಲ್ಲಿ ನಡೆದ 18ನೇ ಶಾಂಘೈ ಸಹಕಾರ ಸಂಸ್ಥೆಯ 18ನೇ ಸಭೆಯಲ್ಲಿ ಪಾಲ್ಗೊಂಡ ನರೇಂದ್ರ ಮೋದಿ ಅವರು ಚೀನಾದ ಮಹತ್ತರ ಒಂದು ಪ್ರದೇಶ, ಒಂದು ರಸ್ತೆ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಎಸ್ಸಿಒ 8 ಸದಸ್ಯ ರಾಷ್ಟ್ರಗಳಲ್ಲಿ ಏಳು ರಾಷ್ಟ್ರಗಳು ಚೀನಾದ ಒಆರ್ ಒಪಿ ಯೋಜನೆಗೆ ಬೆಂಬಲೆ ಸೂಚಿಸಿವೆ. ಆದರೆ ನರೇಂದ್ರ ಮೋದಿ ಅವರು ಮಾತ್ರ ಪಾಕ್ ಆಕ್ರಮಿತ ಕಾಶ್ಮೀರ ಸೇರಿ ಭಾರತದಲ್ಲಿ ಯಾವುದೇ ಕಾಮಗಾರಿ ಕೈಗೊಳ್ಳಲು ಅನುಮತಿ ನೀಡದೇ ಇರುವ ಮೂಲಕ ದಿಟ್ಟತನ ಮೆರೆದಿದ್ದಾರೆ.

ಹಾಗಂತ ನರೇಂದ್ರ ಮೋದಿ ಅವರೇನು ಚೀನಾದ ವಿರೋಧ ಕಟ್ಟಿಕೊಟ್ಟಿಲ್ಲ. ಬದಲಾಗಿ ಎಸ್ಸಿಒ ಸಭೆಯ ನಡುವೆಯೇ ಚೀನಾ ಜತೆ ಎರಡು ಒಪ್ಪಂದ ಮಾಡಿಕೊಂಡಿದ್ದಾರೆ. ಬ್ರಹ್ಮಪುತ್ರ ನದಿ ನೀರಿನ ದತ್ತಾಂಶ ನೀಡುವ ಹಾಗೂ ಭಾರತದಿಂದ ಚೀನಾಕ್ಕೆ ಬಾಸುಮತಿ ಅಕ್ಕಿ ಹೊರತಾದ ಅಕ್ಕಿ ರಫ್ತು ಮಾಡಲು ಒಪ್ಪಂದ ಮಾಡಿಕೊಂಡಿದ್ದಾರೆ. ಆದರೆ ಒಆರ್ ಒಬಿ ವಿಷಯದಲ್ಲಿ ಮಾತ್ರ ಮೋದಿ ತಮ್ಮ ಕಠಿಣ ನಿಲುವನ್ನು ಸಡಿಲಗೊಳಿಸದೆ ಹೆಮ್ಮೆ ಮೂಡಿಸಿದ್ದಾರೆ. ಅದೂ ಚೀನಾದ ನೆಲದಲ್ಲೇ ನಿಂತು, ಚೀನಾಕ್ಕೆ ತಪರಾಕಿ ನೀಡುವುದು ಎಂದರೆ ಸುಮ್ಮನೆಯಾ?

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • 2
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search