• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ವಿರೋಧಿಗಳೇ ಎಸ್ಸಿ, ಎಸ್ಟಿಯವರಿಗೆ ಅಮಿತ್ ಶಾ ಎಂತಹ ಭರವಸೆ ನೀಡಿದ್ದಾರೆ ಗೊತ್ತಾ?

TNN Correspondent Posted On June 11, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಬಿಜೆಪಿ ಎಂದರೆ ಸಾಕು, ಇವರೆಲ್ಲ ಮೇಲ್ವರ್ಗಕ್ಕೆ ಸೇರಿದವರು, ಮೇಲ್ವರ್ಗದ ಪರ ಇರುವವರು, ಎಸ್ಸಿ, ಎಸ್ಟಿ ವಿರೋಧಿಗಳು ಎಂಬ ಮಿಥ್ಯೆ ಇದೆ ಹಾಗೂ ಅದನ್ನು ವ್ಯವಸ್ಥಿತವಾಗಿ ಕೆಲವರು ಸಾರಿಕೊಂಡು ಬರುತ್ತಿದ್ದಾರೆ.

ಆದರೆ ನರೇಂದ್ರ ಮೋದಿ ಅವರು ಮಾತ್ರ ಎಂದಿಗೂ ಜಾತಿ, ಧರ್ಮ, ಮತ ನೋಡದೆ ಎಲ್ಲರ ಏಳಿಗಾಗಿ ಹಗಲು, ರಾತ್ರಿ ಶ್ರಮಿಸುತ್ತಿದ್ದಾರೆ. ಅದು ಒಬ್ಬ ನಾಯಕನಿಗೆ ಇರಬೇಕಾದ, ಅದರಲ್ಲೂ ಭಾರತದಂತಹ ಜಾತ್ಯತೀತ ರಾಷ್ಟ್ರದಲ್ಲಿ ಒಬ್ಬ ಪ್ರಧಾನಿಗೆ ಇರಬೇಕಾದಂತಹ ಪ್ರಮುಖ ಗುಣವಾಗಿದೆ.

ಇತ್ತೀಚೆಗೆ ಎಸ್ಸಿ, ಎಸ್ಟಿ ಸಮುದಾಯದ ದೌರ್ಜನ್ಯ ವಿರೋಧ ಕಾಯಿದೆ ಜಾರಿ ಮಾಡಲು ಹೊರಟಾಗ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಮೋದಿ ಅವರು ಎಸ್ಸಿ, ಎಸ್ಟಿ ಕಾಯಿದೆ ದೌರ್ಬಲ್ಯಗೊಳಿಸುತ್ತಾರೆ ಎಂದೇ ಕೆಲವರು ಗುಲ್ಲೆಬ್ಬಿಸಿದ್ದರು. ಆದರೆ ಕೊನೆಗೆ ಕಾಯಿದೆ ಜಾರಿಗೆ ಸುಪ್ರೀಂ ಕೋರ್ಟೇ ಒಪ್ಪಿಗೆ ಸೂಚಿಸಿದಾಗ ಎಸ್ಸಿ, ಎಸ್ಟಿ ಸಮುದಾಯದವರು ಮೋದಿ ಕುರಿತು ನಂಬಲು ಶುರು ಮಾಡಿದರು.

ಇಂತಹ ನರೇಂದ್ರ ಮೋದಿ ಸರ್ಕಾರದ ಕುರಿತು ಅಮಿತ್ ಶಾ ಅವರು ಮಾತನಾಡಿದ್ದು, ಬಿಜೆಪಿ ಅಧಿಕಾರದಲ್ಲಿ ಇರುವವರೆಗೂ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯಿದೆ ಹಾಗೂ ಮೀಸಲಾತಿಗೆ ಯಾವುದೇ ಧಕ್ಕೆಯಾಗುವುದಿಲ್ಲ. ದೇಶದಲ್ಲಿರುವ ಎಸ್ಸಿ, ಎಸ್ಟಿ ಸಮುದಾಯ ಈ ಕುರಿತು ಚಿಂತೆ ಮಾಡುವ ಅವಶ್ಯಕತೆಯೇ ಇಲ್ಲ ಎಂದು ಭರವಸೆ ನೀಡಿದ್ದಾರೆ. ಆ ಮೂಲಕ ಕೆಲವರು ಹಬ್ಬಿಸಿದ್ದ ಗಾಳಿ ಸುದ್ದಿಗೆ ಮಂಗಳ ಹಾಡಿದ್ದಾರೆ.

2019ರ ಚುನಾವಣೆ ಸಮೀಪಿಸುತ್ತಿರುವುದರಿಂದ ಕಾಂಗ್ರೆಸ್ ಸುಖಾಸುಮ್ಮನೆ ಗಾಳಿ ಸುದ್ದಿ ಹಬ್ಬಿಸುತ್ತಿದೆ. ಎಸ್ಸಿ, ಎಸ್ಟಿ ಕಾಯಿದೆ ದುರ್ಬಲಗೊಳಿಸುವುದು, ಮೀಸಲಾತಿ ರದ್ದುಗೊಳಿಸುವ ಕುರಿತು ಬಿಜೆಪಿ ನಿಲುವು ಹೊಂದಿದೆ ಎಂದು ಜನರನ್ನು ದಾರಿತಪ್ಪಿಸಲು ಕಾಂಗ್ರೆಸ್ ಮುಂದಾಗಿದೆ. ಆದರೆ ದೇಶದ ಎಸ್ಸಿ, ಎಸ್ಟಿ ಸಮುದಾಯದವರು ಒಂದು ನೆನಪಿಟ್ಟುಕೊಳ್ಳಿ, ಬಿಜೆಪಿ ಅಧಿಕಾರದಲ್ಲಿ ಇರುವವರೆಗೂ ಎಸ್ಸಿ, ಎಸ್ಟಿ ಕಾಯಿದೆ ಹಾಗೂ ಮೀಸಲಾತಿಗೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಘೋಷಿಸಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search