• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ವಿರೋಧಿಗಳೇ ಎಸ್ಸಿ, ಎಸ್ಟಿಯವರಿಗೆ ಅಮಿತ್ ಶಾ ಎಂತಹ ಭರವಸೆ ನೀಡಿದ್ದಾರೆ ಗೊತ್ತಾ?

TNN Correspondent Posted On June 11, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಬಿಜೆಪಿ ಎಂದರೆ ಸಾಕು, ಇವರೆಲ್ಲ ಮೇಲ್ವರ್ಗಕ್ಕೆ ಸೇರಿದವರು, ಮೇಲ್ವರ್ಗದ ಪರ ಇರುವವರು, ಎಸ್ಸಿ, ಎಸ್ಟಿ ವಿರೋಧಿಗಳು ಎಂಬ ಮಿಥ್ಯೆ ಇದೆ ಹಾಗೂ ಅದನ್ನು ವ್ಯವಸ್ಥಿತವಾಗಿ ಕೆಲವರು ಸಾರಿಕೊಂಡು ಬರುತ್ತಿದ್ದಾರೆ.

ಆದರೆ ನರೇಂದ್ರ ಮೋದಿ ಅವರು ಮಾತ್ರ ಎಂದಿಗೂ ಜಾತಿ, ಧರ್ಮ, ಮತ ನೋಡದೆ ಎಲ್ಲರ ಏಳಿಗಾಗಿ ಹಗಲು, ರಾತ್ರಿ ಶ್ರಮಿಸುತ್ತಿದ್ದಾರೆ. ಅದು ಒಬ್ಬ ನಾಯಕನಿಗೆ ಇರಬೇಕಾದ, ಅದರಲ್ಲೂ ಭಾರತದಂತಹ ಜಾತ್ಯತೀತ ರಾಷ್ಟ್ರದಲ್ಲಿ ಒಬ್ಬ ಪ್ರಧಾನಿಗೆ ಇರಬೇಕಾದಂತಹ ಪ್ರಮುಖ ಗುಣವಾಗಿದೆ.

ಇತ್ತೀಚೆಗೆ ಎಸ್ಸಿ, ಎಸ್ಟಿ ಸಮುದಾಯದ ದೌರ್ಜನ್ಯ ವಿರೋಧ ಕಾಯಿದೆ ಜಾರಿ ಮಾಡಲು ಹೊರಟಾಗ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಮೋದಿ ಅವರು ಎಸ್ಸಿ, ಎಸ್ಟಿ ಕಾಯಿದೆ ದೌರ್ಬಲ್ಯಗೊಳಿಸುತ್ತಾರೆ ಎಂದೇ ಕೆಲವರು ಗುಲ್ಲೆಬ್ಬಿಸಿದ್ದರು. ಆದರೆ ಕೊನೆಗೆ ಕಾಯಿದೆ ಜಾರಿಗೆ ಸುಪ್ರೀಂ ಕೋರ್ಟೇ ಒಪ್ಪಿಗೆ ಸೂಚಿಸಿದಾಗ ಎಸ್ಸಿ, ಎಸ್ಟಿ ಸಮುದಾಯದವರು ಮೋದಿ ಕುರಿತು ನಂಬಲು ಶುರು ಮಾಡಿದರು.

ಇಂತಹ ನರೇಂದ್ರ ಮೋದಿ ಸರ್ಕಾರದ ಕುರಿತು ಅಮಿತ್ ಶಾ ಅವರು ಮಾತನಾಡಿದ್ದು, ಬಿಜೆಪಿ ಅಧಿಕಾರದಲ್ಲಿ ಇರುವವರೆಗೂ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯಿದೆ ಹಾಗೂ ಮೀಸಲಾತಿಗೆ ಯಾವುದೇ ಧಕ್ಕೆಯಾಗುವುದಿಲ್ಲ. ದೇಶದಲ್ಲಿರುವ ಎಸ್ಸಿ, ಎಸ್ಟಿ ಸಮುದಾಯ ಈ ಕುರಿತು ಚಿಂತೆ ಮಾಡುವ ಅವಶ್ಯಕತೆಯೇ ಇಲ್ಲ ಎಂದು ಭರವಸೆ ನೀಡಿದ್ದಾರೆ. ಆ ಮೂಲಕ ಕೆಲವರು ಹಬ್ಬಿಸಿದ್ದ ಗಾಳಿ ಸುದ್ದಿಗೆ ಮಂಗಳ ಹಾಡಿದ್ದಾರೆ.

2019ರ ಚುನಾವಣೆ ಸಮೀಪಿಸುತ್ತಿರುವುದರಿಂದ ಕಾಂಗ್ರೆಸ್ ಸುಖಾಸುಮ್ಮನೆ ಗಾಳಿ ಸುದ್ದಿ ಹಬ್ಬಿಸುತ್ತಿದೆ. ಎಸ್ಸಿ, ಎಸ್ಟಿ ಕಾಯಿದೆ ದುರ್ಬಲಗೊಳಿಸುವುದು, ಮೀಸಲಾತಿ ರದ್ದುಗೊಳಿಸುವ ಕುರಿತು ಬಿಜೆಪಿ ನಿಲುವು ಹೊಂದಿದೆ ಎಂದು ಜನರನ್ನು ದಾರಿತಪ್ಪಿಸಲು ಕಾಂಗ್ರೆಸ್ ಮುಂದಾಗಿದೆ. ಆದರೆ ದೇಶದ ಎಸ್ಸಿ, ಎಸ್ಟಿ ಸಮುದಾಯದವರು ಒಂದು ನೆನಪಿಟ್ಟುಕೊಳ್ಳಿ, ಬಿಜೆಪಿ ಅಧಿಕಾರದಲ್ಲಿ ಇರುವವರೆಗೂ ಎಸ್ಸಿ, ಎಸ್ಟಿ ಕಾಯಿದೆ ಹಾಗೂ ಮೀಸಲಾತಿಗೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಘೋಷಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search