• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ವಿರುದ್ಧ ಪಾಕ್ ಸೈನ್ಯದ ಮಾರ್ಗದರ್ಶನದಲ್ಲೇ ಉಗ್ರ ಸಂಘಟನೆಗಳಾದ ಎಲ್ ಇಟಿ, ಜೆಇಎಂ, ಹಿಜ್ಬುಲ್ ಜಂಟಿ ತರಬೇತಿ?

TNN Correspondent Posted On June 11, 2018
0


0
Shares
  • Share On Facebook
  • Tweet It

ದೆಹಲಿ: ಭಯೋತ್ಪಾದಕ ತವರು ರಾಷ್ಟ್ರ, ಭಾರತದ ವಿರುದ್ಧ ಸದಾ ಹಲ್ಲು ಮಸೆಯುತ್ತಾ ಉಗ್ರನ್ನು ಸಾಕುತ್ತಿರುವ ಪಾಕಿಸ್ತಾನ ನಿರಂತರವಾಗಿ ಹೊಸ ಹೊಸ ಕುತಂತ್ರಗಳನ್ನು ಮಾಡುತ್ತಿದೆ. ಹೇಗಾದರೂ ಮಾಡಿ ಭಾರತವನ್ನು ಹಣಿಯಲೇ ಬೇಕು ಎಂದು ನಿರ್ಧರಿಸಿರುವ ಪಾಕಿಸ್ತಾನ ಸರ್ಕಾರ ಹಾವು ಮುಂಗೂಸಿಯಂತೆ ತಮ್ಮ ತಮ್ಮ ವೈಮನಸ್ಸಿನಿಂದ ಹೊಡೆದಾಡುತ್ತಿದ್ದ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್ ಇ ತಯ್ಯಬ್ಬಾ, ಜೈಷ್ ಇ ಮಹ್ಹಮದ್ಮ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ನ ಉಗ್ರರಿಗೆ ಪಾಕಿಸ್ತಾನದ ಸೈನ್ಯದ ಮಾರ್ಗದರ್ಶನದಲ್ಲೇ ತರಬೇತಿ ನೀಡಲಾಗುತ್ತಿದೆ ಎಂದು ರಾಷ್ಟ್ರೀಯ ತನಿಖಾ ದಳದ ವಶದಲ್ಲಿರುವ ಉಗ್ರ ಆಶಿಕ್ ಬಾಬಾ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ ಎನ್ನಲಾಗಿದೆ.

ಜೈಷ್ ಇ ಮಹಮ್ಮದ್, ಲಷ್ಕರ್ ಈ ತಯ್ಯಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿ ಮೂರು ಉಗ್ರ ಸಂಘಟನೆಗಳು ಪಾಕಿಸ್ತಾನದ ಸೈನ್ಯದ ಮಾರ್ಗರ್ದಶನದಲ್ಲೇ ಕಾರ್ಯ ನಿರ್ವಹಿಸುತ್ತಿವೆ. ಅಲ್ಲದೇ ಈ ಮೂರು ಭಯೋತ್ಪಾದಕ ಸಂಘಟನೆಗಳಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ ಐ ಸಹ ಸಾಥ್ ನೀಡುತ್ತಿದೆ ಎಂದು ವಿಚಾರಣೆ ವೇಳೆ ಆಶಿಕ್ ಬಾಬಾ ಹೇಳಿದ್ದಾನೆ.

ಭಾರತದಲ್ಲಿ ಉಗ್ರರ ಪ್ರತಿನಿಧಿಯಾಗಿ ಉಗ್ರ ಅಬ್ದುಲ್ಲಾ ಎಂಬಾತನನ್ನು ನೇಮಕ ಮಾಡಿದ್ದು, ಆತನ ನೇತೃತ್ವದಲ್ಲೇ ಭಾರತ ವಿರೋಧಿ ಚಟುವಟಿಕೆಗಳಿಗಾಗಿ ನೇಮಿಸಲಾಗಿದೆ. ಆತ ಭಾರತದ ಗಡಿಯಲ್ಲಿ ತನ್ನ ದುಷ್ಕೃತ್ಯ ನಡೆಸಲು ಸಿದ್ಧತೆ ನಡೆಸುತ್ತಿದ್ದಾನೆ ಎಂದು ಆಶಿಕ್ ತಿಳಿಸಿದ್ದಾನೆ.

ಎಂಟು ಸೈನಿಕರನ್ನು ಬಲಿ ಪಡೆದುಕೊಂಡಿದ್ದ 2017ರ ಪುಲ್ವಾಮಾ ಪೊಲೀಸ್ ಡೇರೆಯ ಮೇಲೆ ದಾಳಿಯ ಮಾಸ್ಟರ್ ಮೈಂಡ್ ಜೈಷ್ ಎ ಮಹಮ್ಮದ್ ಸಂಘಟನೆಯ ಮುಫ್ತಿ ವಕ್ಕಾಸ್ ಎಂಬುದನ್ನು ರಾಷ್ಟ್ರಿಯ ತನಿಖಾ ದಳದ ಎದುರು ಬಾಯಿ ಬಿಟ್ಟಿದ್ದಾನೆ ಎಂದು ಟೈಮ್ಸ್ ಆಫ್ ಇಂಡಿ ವರದಿ ಮಾಡಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search