• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ವಿರುದ್ಧ ಪಾಕ್ ಸೈನ್ಯದ ಮಾರ್ಗದರ್ಶನದಲ್ಲೇ ಉಗ್ರ ಸಂಘಟನೆಗಳಾದ ಎಲ್ ಇಟಿ, ಜೆಇಎಂ, ಹಿಜ್ಬುಲ್ ಜಂಟಿ ತರಬೇತಿ?

TNN Correspondent Posted On June 11, 2018
0


0
Shares
  • Share On Facebook
  • Tweet It

ದೆಹಲಿ: ಭಯೋತ್ಪಾದಕ ತವರು ರಾಷ್ಟ್ರ, ಭಾರತದ ವಿರುದ್ಧ ಸದಾ ಹಲ್ಲು ಮಸೆಯುತ್ತಾ ಉಗ್ರನ್ನು ಸಾಕುತ್ತಿರುವ ಪಾಕಿಸ್ತಾನ ನಿರಂತರವಾಗಿ ಹೊಸ ಹೊಸ ಕುತಂತ್ರಗಳನ್ನು ಮಾಡುತ್ತಿದೆ. ಹೇಗಾದರೂ ಮಾಡಿ ಭಾರತವನ್ನು ಹಣಿಯಲೇ ಬೇಕು ಎಂದು ನಿರ್ಧರಿಸಿರುವ ಪಾಕಿಸ್ತಾನ ಸರ್ಕಾರ ಹಾವು ಮುಂಗೂಸಿಯಂತೆ ತಮ್ಮ ತಮ್ಮ ವೈಮನಸ್ಸಿನಿಂದ ಹೊಡೆದಾಡುತ್ತಿದ್ದ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್ ಇ ತಯ್ಯಬ್ಬಾ, ಜೈಷ್ ಇ ಮಹ್ಹಮದ್ಮ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ನ ಉಗ್ರರಿಗೆ ಪಾಕಿಸ್ತಾನದ ಸೈನ್ಯದ ಮಾರ್ಗದರ್ಶನದಲ್ಲೇ ತರಬೇತಿ ನೀಡಲಾಗುತ್ತಿದೆ ಎಂದು ರಾಷ್ಟ್ರೀಯ ತನಿಖಾ ದಳದ ವಶದಲ್ಲಿರುವ ಉಗ್ರ ಆಶಿಕ್ ಬಾಬಾ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ ಎನ್ನಲಾಗಿದೆ.

ಜೈಷ್ ಇ ಮಹಮ್ಮದ್, ಲಷ್ಕರ್ ಈ ತಯ್ಯಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿ ಮೂರು ಉಗ್ರ ಸಂಘಟನೆಗಳು ಪಾಕಿಸ್ತಾನದ ಸೈನ್ಯದ ಮಾರ್ಗರ್ದಶನದಲ್ಲೇ ಕಾರ್ಯ ನಿರ್ವಹಿಸುತ್ತಿವೆ. ಅಲ್ಲದೇ ಈ ಮೂರು ಭಯೋತ್ಪಾದಕ ಸಂಘಟನೆಗಳಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ ಐ ಸಹ ಸಾಥ್ ನೀಡುತ್ತಿದೆ ಎಂದು ವಿಚಾರಣೆ ವೇಳೆ ಆಶಿಕ್ ಬಾಬಾ ಹೇಳಿದ್ದಾನೆ.

ಭಾರತದಲ್ಲಿ ಉಗ್ರರ ಪ್ರತಿನಿಧಿಯಾಗಿ ಉಗ್ರ ಅಬ್ದುಲ್ಲಾ ಎಂಬಾತನನ್ನು ನೇಮಕ ಮಾಡಿದ್ದು, ಆತನ ನೇತೃತ್ವದಲ್ಲೇ ಭಾರತ ವಿರೋಧಿ ಚಟುವಟಿಕೆಗಳಿಗಾಗಿ ನೇಮಿಸಲಾಗಿದೆ. ಆತ ಭಾರತದ ಗಡಿಯಲ್ಲಿ ತನ್ನ ದುಷ್ಕೃತ್ಯ ನಡೆಸಲು ಸಿದ್ಧತೆ ನಡೆಸುತ್ತಿದ್ದಾನೆ ಎಂದು ಆಶಿಕ್ ತಿಳಿಸಿದ್ದಾನೆ.

ಎಂಟು ಸೈನಿಕರನ್ನು ಬಲಿ ಪಡೆದುಕೊಂಡಿದ್ದ 2017ರ ಪುಲ್ವಾಮಾ ಪೊಲೀಸ್ ಡೇರೆಯ ಮೇಲೆ ದಾಳಿಯ ಮಾಸ್ಟರ್ ಮೈಂಡ್ ಜೈಷ್ ಎ ಮಹಮ್ಮದ್ ಸಂಘಟನೆಯ ಮುಫ್ತಿ ವಕ್ಕಾಸ್ ಎಂಬುದನ್ನು ರಾಷ್ಟ್ರಿಯ ತನಿಖಾ ದಳದ ಎದುರು ಬಾಯಿ ಬಿಟ್ಟಿದ್ದಾನೆ ಎಂದು ಟೈಮ್ಸ್ ಆಫ್ ಇಂಡಿ ವರದಿ ಮಾಡಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search