• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಕ್ರಮವಾಗಿ ಮಸೀದಿ, ಮದರಸಾ ನಿರ್ವಹಣೆ, ಉತ್ತರ ಪ್ರದೇಶದಲ್ಲಿ ಕಟ್ಟಡ ಜಪ್ತಿ ಮಾಡಿದ ಜಿಲ್ಲಾಡಳಿತ!

TNN Correspondent Posted On June 12, 2018
0


0
Shares
  • Share On Facebook
  • Tweet It

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಯಾದ ಬಳಿಕ ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮಸೀದಿಗಳು ಹಾಗೂ ಅಕ್ರಮ ಕಸಾಯಿಗಳಿಗೆ ಬೀಗ ಹಾಕಿಸುವ ಮೂಲಕ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದರು, ಅಲ್ಲದೆ ಮಸೀದಿಗಳಲ್ಲಿ ಬರೀ ಧರ್ಮಬೋಧನೆ ಬದಲಿಗೆ ಎನ್ಸಿಇಆರ್ಟಿ ಪಠ್ಯ ಬೋಧಿಸುವಂತೆ ಆದೇಶಿಸಿ ಮುಸ್ಲಿಮರ ಶೈಕ್ಷಣಿಕ ಏಳಿಗೆಗೆ ಕಾರಣರಾಗಿದ್ದರು.

ಆದರೂ ಕೆಲವೆಡೆ ಅಕ್ರಮವಾಗಿ ಮದರಸಾಗಳನ್ನು ನಿರ್ವಹಣೆ ಮಾಡಲಾಗುತ್ತಿದೆ ಎಂಬ ಆರೋಪಗಳು ಇತ್ತೀಚೆಗೆ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಜಿಲ್ಲಾಡಳಿತ ಸಿದ್ಧಾರ್ಥ ನಗರದ ಕಟ್ಟಡವೊಂದರಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದೆ ಎನ್ನಲಾದ ಮದರಸಾ/ಮಸೀದಿಗೆ ಬೀಗ ಜಡಿದಿದ್ದಾರೆ.

ಸಿದ್ಧಾರ್ಥ ನಗರದ ಕಟ್ಟಡವೊಂದರಲ್ಲಿ ವಸತಿಗಾಗಿ ಸರ್ಕಾರದಿಂದ ಅನುಮತಿ ಪಡೆದು ಈಗ ಅಕ್ರಮವಾಗಿ ಮಸೀದಿ ಹಾಗೂ ಮದರಸಾ ನಡೆಸಲಾಗುತ್ತಿದೆ. ನೆಲಮಹಡಿಯಲ್ಲಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಕಪಿಲವಸ್ತು ಬಿಜೆಪಿ ಶಾಸಕ ಶ್ಯಾಮ್ ಧಣಿ ಆರೋಪಿಸಿದ್ದರು.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟಡ ಪರಿಶೀಲಿಸಿದ್ದು, ಈಗ ಬೀಗ ಜಡಿದಿದ್ದಾರೆ. ಅಲ್ಲದೆ ಈ ಕುರಿತು ಪ್ರಕರಣ ಸಹ ದಾಖಲಾದ ಹಿನ್ನೆಲೆಯಲ್ಲಿ ಕಟ್ಟಡದ ಮಾಲೀಕ ಹಸ್ಮುಲ್ಲಾ ಹಾಗೂ ಆತನ ಮೊಮ್ಮಕ್ಕಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಮಾಲೀಕ ಹಸ್ಮುಲ್ಲಾ, ಆತನ ಮೊಮ್ಮಕ್ಕಳಾದ ಸೈಫುದ್ದೀನ್ ಹಾಗೂ ಕಮ್ರುದ್ದೀನ್ ಎಂಬುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಾಯಿದೆಯ ಸೆಕ್ಷನ್ 295 ಹಾಗೂ 295 ಎ ಅನ್ವಯ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಆದಾಗ್ಯೂ ಕಟ್ಟಡದ ಮಾಲೀಕ ಈ ಕುರಿತು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ಸಾರ್ವಜನಿಕರಿಗಾಗಿ ಮಸೀದಿ ನಡೆಸಲಾಗುತ್ತಿದೆ. ಮದರಸಾ ನಡೆಸುವ ಕುರಿತು ಉತ್ತರ ಪ್ರದೇಶ ಮದರಸಾ ಬೊರ್ಡ್ ನಿಂದ ಅನುಮತಿ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ. ಆದರೆ ಸರಿಯಾದ ದಾಖಲೆ ಸಿಗದ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಚಿತ್ರಕೃಪೆ-ಅಂತರ್ಜಾಲ

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search