• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಕ್ರಮವಾಗಿ ಮಸೀದಿ, ಮದರಸಾ ನಿರ್ವಹಣೆ, ಉತ್ತರ ಪ್ರದೇಶದಲ್ಲಿ ಕಟ್ಟಡ ಜಪ್ತಿ ಮಾಡಿದ ಜಿಲ್ಲಾಡಳಿತ!

TNN Correspondent Posted On June 12, 2018
0


0
Shares
  • Share On Facebook
  • Tweet It

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಯಾದ ಬಳಿಕ ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮಸೀದಿಗಳು ಹಾಗೂ ಅಕ್ರಮ ಕಸಾಯಿಗಳಿಗೆ ಬೀಗ ಹಾಕಿಸುವ ಮೂಲಕ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದರು, ಅಲ್ಲದೆ ಮಸೀದಿಗಳಲ್ಲಿ ಬರೀ ಧರ್ಮಬೋಧನೆ ಬದಲಿಗೆ ಎನ್ಸಿಇಆರ್ಟಿ ಪಠ್ಯ ಬೋಧಿಸುವಂತೆ ಆದೇಶಿಸಿ ಮುಸ್ಲಿಮರ ಶೈಕ್ಷಣಿಕ ಏಳಿಗೆಗೆ ಕಾರಣರಾಗಿದ್ದರು.

ಆದರೂ ಕೆಲವೆಡೆ ಅಕ್ರಮವಾಗಿ ಮದರಸಾಗಳನ್ನು ನಿರ್ವಹಣೆ ಮಾಡಲಾಗುತ್ತಿದೆ ಎಂಬ ಆರೋಪಗಳು ಇತ್ತೀಚೆಗೆ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಜಿಲ್ಲಾಡಳಿತ ಸಿದ್ಧಾರ್ಥ ನಗರದ ಕಟ್ಟಡವೊಂದರಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದೆ ಎನ್ನಲಾದ ಮದರಸಾ/ಮಸೀದಿಗೆ ಬೀಗ ಜಡಿದಿದ್ದಾರೆ.

ಸಿದ್ಧಾರ್ಥ ನಗರದ ಕಟ್ಟಡವೊಂದರಲ್ಲಿ ವಸತಿಗಾಗಿ ಸರ್ಕಾರದಿಂದ ಅನುಮತಿ ಪಡೆದು ಈಗ ಅಕ್ರಮವಾಗಿ ಮಸೀದಿ ಹಾಗೂ ಮದರಸಾ ನಡೆಸಲಾಗುತ್ತಿದೆ. ನೆಲಮಹಡಿಯಲ್ಲಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಕಪಿಲವಸ್ತು ಬಿಜೆಪಿ ಶಾಸಕ ಶ್ಯಾಮ್ ಧಣಿ ಆರೋಪಿಸಿದ್ದರು.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟಡ ಪರಿಶೀಲಿಸಿದ್ದು, ಈಗ ಬೀಗ ಜಡಿದಿದ್ದಾರೆ. ಅಲ್ಲದೆ ಈ ಕುರಿತು ಪ್ರಕರಣ ಸಹ ದಾಖಲಾದ ಹಿನ್ನೆಲೆಯಲ್ಲಿ ಕಟ್ಟಡದ ಮಾಲೀಕ ಹಸ್ಮುಲ್ಲಾ ಹಾಗೂ ಆತನ ಮೊಮ್ಮಕ್ಕಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಮಾಲೀಕ ಹಸ್ಮುಲ್ಲಾ, ಆತನ ಮೊಮ್ಮಕ್ಕಳಾದ ಸೈಫುದ್ದೀನ್ ಹಾಗೂ ಕಮ್ರುದ್ದೀನ್ ಎಂಬುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಾಯಿದೆಯ ಸೆಕ್ಷನ್ 295 ಹಾಗೂ 295 ಎ ಅನ್ವಯ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಆದಾಗ್ಯೂ ಕಟ್ಟಡದ ಮಾಲೀಕ ಈ ಕುರಿತು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ಸಾರ್ವಜನಿಕರಿಗಾಗಿ ಮಸೀದಿ ನಡೆಸಲಾಗುತ್ತಿದೆ. ಮದರಸಾ ನಡೆಸುವ ಕುರಿತು ಉತ್ತರ ಪ್ರದೇಶ ಮದರಸಾ ಬೊರ್ಡ್ ನಿಂದ ಅನುಮತಿ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ. ಆದರೆ ಸರಿಯಾದ ದಾಖಲೆ ಸಿಗದ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಚಿತ್ರಕೃಪೆ-ಅಂತರ್ಜಾಲ

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search