• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜಸ್ಥಾನ ಸರ್ಕಾರದ ಕ್ರಾಂತಿಕಾರಿ ನಿರ್ಧಾರ: ಶಾಲೆಗಳಲ್ಲಿ ಸಂತರ ಹಿತೋಪದೇಶ ಕೇಳುವುದು ಕಡ್ಡಾಯ

TNN Correspondent Posted On June 12, 2018
0


0
Shares
  • Share On Facebook
  • Tweet It

ಜೈಪುರ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ರಾಜಸ್ಥಾನದ ಬಿಜೆಪಿ ಸರ್ಕಾರ ಕ್ರಾಂತಿಕಾರಿ ನಿಯಮವೊಂದನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳು ಪ್ರತಿತಿಂಗಳು ಶಾಲೆಗಳಲ್ಲಿ ಸಂತರ ಹಿತೋಪದೇಶವನ್ನು ಕೇಳುವ ನಿಯಮವನ್ನು ಕಡ್ಡಾಯ ಮಾಡುವ ಮೂಲಕ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಂಡಿದೆ.

ಪ್ರತಿ ತಿಂಗಳ ಮೂರನೇ ಶನಿವಾರ ಶಾಲೆಗಳಲ್ಲಿ ಸಾದು, ಸಂತರ, ತತ್ವಜ್ಞಾನಿಗಳ ದಿವ್ಯ ಸಂದೇಶವನ್ನು ಹೊಂದಿರುವ ಹಿತೋಪದೇಶವನ್ನು ಕೇಳುವ ನಿಯಮ ಜಾರಿಗೆ ತರುವ ಕುರಿತು ಸೆಕೆಂಡರಿ ಎಜುಕೇಷನ್ ನಿರ್ದೇಶಕ ಆದೇಶ ಹೊರಡಿಸಿದ್ದಾರೆ.

ತಿಂಗಳ ಪ್ರಥಮ ಶನಿವಾರ ಒಬ್ಬ ಮಹಾನ್ ಪುರುಷರ, ಸಂತರ ಜೀವನ ಸಂದೇಶವನ್ನು, ಅರಿಯುವುದು, ವಿದ್ಯಾರ್ಥಿಗಳಿಂದ ಮಾದರಿ ಪುರುಷರ ಬಗ್ಗೆ ಭಾಷಣ ಸೇರಿ ನಾನಾ ಕಾರ್ಯಕ್ರಮ ಏರ್ಪಡಿಸುವುದು, ಎರಡನೇ ಶನಿವಾರ  ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುವಂತ ಕಥೆಗಳನ್ನು ಹೇಳುವುದು, ಮೌಲ್ಯಾಧಾರಿತ ಜೀವನದ ಪಾಠ ಬೋಧಿಸುವುದು, ನಾಲ್ಕನೇ ಶನಿವಾರ ಪ್ರಶ್ನಾರ್ಥಕ ಕಾರ್ಯಕ್ರಮ ಏರ್ಪಡಿಸುವ ಕುರಿತು ಆದೇಶ ಜಾರಿ ಮಾಡಲಾಗಿದೆ. ಈ ಮೂಲಕ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ ಗಟ್ಟಿ ನಿರ್ಧಾರ ಕೈಗೊಂಡಿದೆ.

ಈ ನಿಯಮ ರಾಜಸ್ಥಾನದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಕೇಂದ್ರೀಯ ಶಾಲೆಗಳಿಗೂ, ತರಬೇತಿ ಶಿಬಿರಗಳು, ವಸತಿ ನಿಲಯಗಳಿಗೆ ಅನ್ವಯವಾಗಲಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search