• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಾವೋವಾದಿಗಳಿಗೆ ನಿರಂತರ ಹೊಡೆತ: ಐವರು ಕೆಂಪು ಉಗ್ರರ ಬಂಧನ

TNN Correspondent Posted On June 12, 2018


  • Share On Facebook
  • Tweet It

ರಾಯಪುರ: ದೇಶದಲ್ಲಿ ಕೆಂಪು ಉಗ್ರರ ಆಟಾಟೋಪಕ್ಕೆ ಭರ್ಜರಿ ಹೊಡೆತ ನೀಡುತ್ತಿರುವ ಕೇಂದ್ರ ಸರ್ಕಾರದ ಕ್ರಮಗಳು ಭಾರಿ ಯಶಸ್ವಿಯಾಗುತ್ತಿದ್ದು, ನಿರಂತರವಾಗಿ ನಕ್ಸಲರ ಹುಟ್ಟಗಿಸುವಲ್ಲಿ ಯಶಸ್ವಿಯಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ಹೂಡಿರುವ ನಕ್ಸಲರ ನಡ ಮುರಿಯುವ ಕಾರ್ಯವನ್ನು ಸೈನ್ಯ ಮತ್ತು ಆಯಾ ರಾಜ್ಯದ ಪೊಲೀಸರು ಯಶಸ್ವಿಯಾಗಿ ನಡೆಸುತ್ತಿದ್ದು, ಛತ್ತೀಸಘಡದ ಪೊಲೀಸರು ಮಂಗಳವಾರ ಐವರು ನಕ್ಸಲರನ್ನು ಬಂಧಿಸುವ ಮೂಲಕ ನಕ್ಸಲರಿಗೆ ಮತ್ತೆ ಬಿಸಿ ಮುಟ್ಟಿಸಿದ್ದಾರೆ.

ಛತ್ತೀಸಘಡದ ಬಸ್ತಾರ್ ವಲಯದ ದಂತೇವಾಡ ಜಿಲ್ಲೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದು, ಸುಕ್ಮಾ ಜಿಲ್ಲೆಯಲ್ಲಿ ಇಬ್ಬರು ಕೆಂಪು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಂತೇವಾಡದಲ್ಲಿ ಪೋಜ್ಜಾ ಸೋದಿ (24), ಬಮನ್ ಮುಚಕಿ (38), ಹಿರ್ಮಾ ಅಲಿಯಾಸ್ ಕೊರೆಮ್ ಸೋದಿ (37) ಎಂಬ ನಕ್ಸಲರನ್ನು ಸಿಆರ್ ಪಿಎಫ್ ಮತ್ತು  ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಸುಕ್ಮಾ ಜಿಲ್ಲೆಯಲ್ಲಿ ಮಾದ್ವಿ ಹಂಡಾ(35) ಮತ್ತು ಸೋದಿ ಗಂಗಾ (42) ಅವರನ್ನು ಬಂಧಿಸಲಾಗಿದೆ.

ಬಂಧಿತರಾದ ಮುಚಕಿ ಮತ್ತು ಕೊರೆಮ್ ಸೋದಿ ಮೇ 22 ರಂದು ನಡೆದ ಕೊಯಕೊಂಡಾ ಗ್ರಾಮದ ಜನಾದಾಲತ್ ನಲ್ಲಿ ಗ್ರಾಮಸ್ಥರನ್ನು ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ. ಅಲ್ಲದೇ ಬಸ್ತಾರ ಪ್ರದೇಶದಲ್ಲಿ ನಡೆಯುತ್ತಿದ್ದ ಅಭಿವೃದ್ಧಿ ಕಾರ್ಯಗಳ ಯಂತ್ರಗಳನ್ನು ನಾಶ ಪಡಿಸಿರುವುದು, ಕಳ್ಳತನ ಮಾಡಿರುವ ಆರೋಪವನ್ನು ಬಂಧಿತರು ಹೊಂದಿದ್ದಾರೆ.

  • Share On Facebook
  • Tweet It


- Advertisement -


Trending Now
ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
Tulunadu News February 1, 2023
ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
Tulunadu News January 31, 2023
Leave A Reply

  • Recent Posts

    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
  • Popular Posts

    • 1
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 2
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 3
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • 4
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 5
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search