• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾವೋವಾದಿಗಳಿಗೆ ನಿರಂತರ ಹೊಡೆತ: ಐವರು ಕೆಂಪು ಉಗ್ರರ ಬಂಧನ

TNN Correspondent Posted On June 12, 2018
0


0
Shares
  • Share On Facebook
  • Tweet It

ರಾಯಪುರ: ದೇಶದಲ್ಲಿ ಕೆಂಪು ಉಗ್ರರ ಆಟಾಟೋಪಕ್ಕೆ ಭರ್ಜರಿ ಹೊಡೆತ ನೀಡುತ್ತಿರುವ ಕೇಂದ್ರ ಸರ್ಕಾರದ ಕ್ರಮಗಳು ಭಾರಿ ಯಶಸ್ವಿಯಾಗುತ್ತಿದ್ದು, ನಿರಂತರವಾಗಿ ನಕ್ಸಲರ ಹುಟ್ಟಗಿಸುವಲ್ಲಿ ಯಶಸ್ವಿಯಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ಹೂಡಿರುವ ನಕ್ಸಲರ ನಡ ಮುರಿಯುವ ಕಾರ್ಯವನ್ನು ಸೈನ್ಯ ಮತ್ತು ಆಯಾ ರಾಜ್ಯದ ಪೊಲೀಸರು ಯಶಸ್ವಿಯಾಗಿ ನಡೆಸುತ್ತಿದ್ದು, ಛತ್ತೀಸಘಡದ ಪೊಲೀಸರು ಮಂಗಳವಾರ ಐವರು ನಕ್ಸಲರನ್ನು ಬಂಧಿಸುವ ಮೂಲಕ ನಕ್ಸಲರಿಗೆ ಮತ್ತೆ ಬಿಸಿ ಮುಟ್ಟಿಸಿದ್ದಾರೆ.

ಛತ್ತೀಸಘಡದ ಬಸ್ತಾರ್ ವಲಯದ ದಂತೇವಾಡ ಜಿಲ್ಲೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದು, ಸುಕ್ಮಾ ಜಿಲ್ಲೆಯಲ್ಲಿ ಇಬ್ಬರು ಕೆಂಪು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಂತೇವಾಡದಲ್ಲಿ ಪೋಜ್ಜಾ ಸೋದಿ (24), ಬಮನ್ ಮುಚಕಿ (38), ಹಿರ್ಮಾ ಅಲಿಯಾಸ್ ಕೊರೆಮ್ ಸೋದಿ (37) ಎಂಬ ನಕ್ಸಲರನ್ನು ಸಿಆರ್ ಪಿಎಫ್ ಮತ್ತು  ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಸುಕ್ಮಾ ಜಿಲ್ಲೆಯಲ್ಲಿ ಮಾದ್ವಿ ಹಂಡಾ(35) ಮತ್ತು ಸೋದಿ ಗಂಗಾ (42) ಅವರನ್ನು ಬಂಧಿಸಲಾಗಿದೆ.

ಬಂಧಿತರಾದ ಮುಚಕಿ ಮತ್ತು ಕೊರೆಮ್ ಸೋದಿ ಮೇ 22 ರಂದು ನಡೆದ ಕೊಯಕೊಂಡಾ ಗ್ರಾಮದ ಜನಾದಾಲತ್ ನಲ್ಲಿ ಗ್ರಾಮಸ್ಥರನ್ನು ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ. ಅಲ್ಲದೇ ಬಸ್ತಾರ ಪ್ರದೇಶದಲ್ಲಿ ನಡೆಯುತ್ತಿದ್ದ ಅಭಿವೃದ್ಧಿ ಕಾರ್ಯಗಳ ಯಂತ್ರಗಳನ್ನು ನಾಶ ಪಡಿಸಿರುವುದು, ಕಳ್ಳತನ ಮಾಡಿರುವ ಆರೋಪವನ್ನು ಬಂಧಿತರು ಹೊಂದಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search