• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಕ್ಕಳ ರಕ್ಷಣೆಗೆ ಮುಂದಾದ ಕೇಂದ್ರ ಸರ್ಕಾರ, ದೇಶಾದ್ಯಂತ ಸಹಾಯವಾಣಿ ವಿಸ್ತರಿಸಲು ಚಿಂತನೆ

TNN Correspondent Posted On June 13, 2018
0


0
Shares
  • Share On Facebook
  • Tweet It

ನರೇಂದ್ರ ಮೋದಿ ಅವರ ಸರ್ಕಾರ ರಚನೆಯಾದ ಬಳಿಕ ಮಹಿಳೆಯರು, ಹಿರಿಯರು, ಕಿರಿಯರು ಎನ್ನದೆ ಎಲ್ಲರಿಗೂ ಅನುಕೂಲವಾಗುವ ಹಾಗೆ ಯೋಜನೆ ಜಾರಿಗೊಳಿಸಲಾಗುತ್ತಿದೆ. ಇದಕ್ಕೆ ಸಾಕ್ಷಿಯಾಗಿ ರೈತರಿಗಾಗಿ ಕೃಷಿ ಸಿಂಚಾಯಿ, ಮಹಿಳೆಯರಿಗೆ ಶೌಚಾಲಯ ನಿರ್ಮಾಣ, ಆರೋಗ್ಯಕ್ಕಾಗಿ ಆಯುಷ್ಮಾನ್ ಭಾರತ್ ಯೋಜನೆಗಳು ಸೇರಿ ಹಲವು ಯೋಜನೆ ಕಾಣಸಿಗುತ್ತವೆ.

ಇದೇ ರೀತಿಯಲ್ಲಿ ಮಕ್ಕಳಿಗಾಗಿಯೂ ಒಂದು ಯೋಜನೆ ಜಾರಿಗೊಳಿಸುವ ಕೇಂದ್ರ ಸರ್ಕಾರ, ದೇಶದ ಹಲವೆಡೆ ಮಕ್ಕಳ ಸಹಾಯವಾಣಿ ಸ್ಥಾಪಿಸಿದೆ. ಅಲ್ಲದೆ ಈಗ ಇದನ್ನು ವಿಸ್ತರಿಸಲು ಚಿಂತನೆ ನಡೆಸಿದ್ದು, ಬಾಲ ಕಾರ್ಮಿಕರ ವಿರೋಧಿ ದಿನಾಚರಣೆ ಅಂಗವಾಗಿ ಈ ಮಕ್ಕಳ ಸಹಾಯವಾಣಿ ಯೋಜನೆಯನ್ನು ದೇಶಾದ್ಯಂತ ವಿಸ್ತರಿಸಲು ಮುಂದಾಗಿದೆ.

ಹೌದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಈ ಕುರಿತು ಯೋಜನೆ ರೂಪಿಸಿದ್ದು, ದೇಶಾದ್ಯಂತ 435 ಕಡೆ ನೂತನವಾಗಿ ಮಕ್ಕಳ ಸಹಾಯವಾಣಿ ಸ್ಥಾಪಿಸುವುದಾಗಿ ಘೋಷಣೆ ಹೊರಡಿಸಿದೆ.

ಯಾವುದೇ ಮಕ್ಕಳು ತಮ್ಮನ್ನು ಒತ್ತಾಯ ಪೂರ್ವಕವಾಗಿ ಕೆಲಸ ಮಾಡಿಸುತ್ತಿದ್ದರೆ, ಯಾವುದೇ ಮಕ್ಕಳು ಬಾಲ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರೆ ದೂರು ನೀಡಲು ಈ ಸಹಾಯವಾಣಿ ಸಹಕಾರಿಯಾಗಲಿದ್ದು, 2014ರಿಂದ ಇದುವರೆಗೆ 1.8 ಕೋಟಿ ಕರೆಗಳು ಬಂದಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಒಟ್ಟಿನಲ್ಲಿ ನರೇಂದ್ರ ಮೋದಿ ಸರ್ಕಾರ ಸರ್ವರ ಏಳಿಗೆಗಾಗಿ ಹಲವು ಯೋಜನೆ ರೂಪಿಸುತ್ತಿದ್ದು, ನಾವೂ ಸಹ ಬಾಲ ಕಾರ್ಮಿಕರ ರಕ್ಷಣೆಗಾಗಿ ಸಹಾಯವಾಣಿ ಬಳಸೋಣ. ಆ ಮೂಲಕ ದೇಶವನ್ನು ಬಾಲ ಕಾರ್ಮಿಕ ಮುಕ್ತವನ್ನಾಗಿಸೋಣ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search