• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಕ್ಕಳ ರಕ್ಷಣೆಗೆ ಮುಂದಾದ ಕೇಂದ್ರ ಸರ್ಕಾರ, ದೇಶಾದ್ಯಂತ ಸಹಾಯವಾಣಿ ವಿಸ್ತರಿಸಲು ಚಿಂತನೆ

TNN Correspondent Posted On June 13, 2018
0


0
Shares
  • Share On Facebook
  • Tweet It

ನರೇಂದ್ರ ಮೋದಿ ಅವರ ಸರ್ಕಾರ ರಚನೆಯಾದ ಬಳಿಕ ಮಹಿಳೆಯರು, ಹಿರಿಯರು, ಕಿರಿಯರು ಎನ್ನದೆ ಎಲ್ಲರಿಗೂ ಅನುಕೂಲವಾಗುವ ಹಾಗೆ ಯೋಜನೆ ಜಾರಿಗೊಳಿಸಲಾಗುತ್ತಿದೆ. ಇದಕ್ಕೆ ಸಾಕ್ಷಿಯಾಗಿ ರೈತರಿಗಾಗಿ ಕೃಷಿ ಸಿಂಚಾಯಿ, ಮಹಿಳೆಯರಿಗೆ ಶೌಚಾಲಯ ನಿರ್ಮಾಣ, ಆರೋಗ್ಯಕ್ಕಾಗಿ ಆಯುಷ್ಮಾನ್ ಭಾರತ್ ಯೋಜನೆಗಳು ಸೇರಿ ಹಲವು ಯೋಜನೆ ಕಾಣಸಿಗುತ್ತವೆ.

ಇದೇ ರೀತಿಯಲ್ಲಿ ಮಕ್ಕಳಿಗಾಗಿಯೂ ಒಂದು ಯೋಜನೆ ಜಾರಿಗೊಳಿಸುವ ಕೇಂದ್ರ ಸರ್ಕಾರ, ದೇಶದ ಹಲವೆಡೆ ಮಕ್ಕಳ ಸಹಾಯವಾಣಿ ಸ್ಥಾಪಿಸಿದೆ. ಅಲ್ಲದೆ ಈಗ ಇದನ್ನು ವಿಸ್ತರಿಸಲು ಚಿಂತನೆ ನಡೆಸಿದ್ದು, ಬಾಲ ಕಾರ್ಮಿಕರ ವಿರೋಧಿ ದಿನಾಚರಣೆ ಅಂಗವಾಗಿ ಈ ಮಕ್ಕಳ ಸಹಾಯವಾಣಿ ಯೋಜನೆಯನ್ನು ದೇಶಾದ್ಯಂತ ವಿಸ್ತರಿಸಲು ಮುಂದಾಗಿದೆ.

ಹೌದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಈ ಕುರಿತು ಯೋಜನೆ ರೂಪಿಸಿದ್ದು, ದೇಶಾದ್ಯಂತ 435 ಕಡೆ ನೂತನವಾಗಿ ಮಕ್ಕಳ ಸಹಾಯವಾಣಿ ಸ್ಥಾಪಿಸುವುದಾಗಿ ಘೋಷಣೆ ಹೊರಡಿಸಿದೆ.

ಯಾವುದೇ ಮಕ್ಕಳು ತಮ್ಮನ್ನು ಒತ್ತಾಯ ಪೂರ್ವಕವಾಗಿ ಕೆಲಸ ಮಾಡಿಸುತ್ತಿದ್ದರೆ, ಯಾವುದೇ ಮಕ್ಕಳು ಬಾಲ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರೆ ದೂರು ನೀಡಲು ಈ ಸಹಾಯವಾಣಿ ಸಹಕಾರಿಯಾಗಲಿದ್ದು, 2014ರಿಂದ ಇದುವರೆಗೆ 1.8 ಕೋಟಿ ಕರೆಗಳು ಬಂದಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಒಟ್ಟಿನಲ್ಲಿ ನರೇಂದ್ರ ಮೋದಿ ಸರ್ಕಾರ ಸರ್ವರ ಏಳಿಗೆಗಾಗಿ ಹಲವು ಯೋಜನೆ ರೂಪಿಸುತ್ತಿದ್ದು, ನಾವೂ ಸಹ ಬಾಲ ಕಾರ್ಮಿಕರ ರಕ್ಷಣೆಗಾಗಿ ಸಹಾಯವಾಣಿ ಬಳಸೋಣ. ಆ ಮೂಲಕ ದೇಶವನ್ನು ಬಾಲ ಕಾರ್ಮಿಕ ಮುಕ್ತವನ್ನಾಗಿಸೋಣ.

0
Shares
  • Share On Facebook
  • Tweet It




Trending Now
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
  • Popular Posts

    • 1
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 2
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 3
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 4
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 5
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ

  • Privacy Policy
  • Contact
© Tulunadu Infomedia.

Press enter/return to begin your search