• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಕ್ಕಳ ರಕ್ಷಣೆಗೆ ಮುಂದಾದ ಕೇಂದ್ರ ಸರ್ಕಾರ, ದೇಶಾದ್ಯಂತ ಸಹಾಯವಾಣಿ ವಿಸ್ತರಿಸಲು ಚಿಂತನೆ

TNN Correspondent Posted On June 13, 2018
0


0
Shares
  • Share On Facebook
  • Tweet It

ನರೇಂದ್ರ ಮೋದಿ ಅವರ ಸರ್ಕಾರ ರಚನೆಯಾದ ಬಳಿಕ ಮಹಿಳೆಯರು, ಹಿರಿಯರು, ಕಿರಿಯರು ಎನ್ನದೆ ಎಲ್ಲರಿಗೂ ಅನುಕೂಲವಾಗುವ ಹಾಗೆ ಯೋಜನೆ ಜಾರಿಗೊಳಿಸಲಾಗುತ್ತಿದೆ. ಇದಕ್ಕೆ ಸಾಕ್ಷಿಯಾಗಿ ರೈತರಿಗಾಗಿ ಕೃಷಿ ಸಿಂಚಾಯಿ, ಮಹಿಳೆಯರಿಗೆ ಶೌಚಾಲಯ ನಿರ್ಮಾಣ, ಆರೋಗ್ಯಕ್ಕಾಗಿ ಆಯುಷ್ಮಾನ್ ಭಾರತ್ ಯೋಜನೆಗಳು ಸೇರಿ ಹಲವು ಯೋಜನೆ ಕಾಣಸಿಗುತ್ತವೆ.

ಇದೇ ರೀತಿಯಲ್ಲಿ ಮಕ್ಕಳಿಗಾಗಿಯೂ ಒಂದು ಯೋಜನೆ ಜಾರಿಗೊಳಿಸುವ ಕೇಂದ್ರ ಸರ್ಕಾರ, ದೇಶದ ಹಲವೆಡೆ ಮಕ್ಕಳ ಸಹಾಯವಾಣಿ ಸ್ಥಾಪಿಸಿದೆ. ಅಲ್ಲದೆ ಈಗ ಇದನ್ನು ವಿಸ್ತರಿಸಲು ಚಿಂತನೆ ನಡೆಸಿದ್ದು, ಬಾಲ ಕಾರ್ಮಿಕರ ವಿರೋಧಿ ದಿನಾಚರಣೆ ಅಂಗವಾಗಿ ಈ ಮಕ್ಕಳ ಸಹಾಯವಾಣಿ ಯೋಜನೆಯನ್ನು ದೇಶಾದ್ಯಂತ ವಿಸ್ತರಿಸಲು ಮುಂದಾಗಿದೆ.

ಹೌದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಈ ಕುರಿತು ಯೋಜನೆ ರೂಪಿಸಿದ್ದು, ದೇಶಾದ್ಯಂತ 435 ಕಡೆ ನೂತನವಾಗಿ ಮಕ್ಕಳ ಸಹಾಯವಾಣಿ ಸ್ಥಾಪಿಸುವುದಾಗಿ ಘೋಷಣೆ ಹೊರಡಿಸಿದೆ.

ಯಾವುದೇ ಮಕ್ಕಳು ತಮ್ಮನ್ನು ಒತ್ತಾಯ ಪೂರ್ವಕವಾಗಿ ಕೆಲಸ ಮಾಡಿಸುತ್ತಿದ್ದರೆ, ಯಾವುದೇ ಮಕ್ಕಳು ಬಾಲ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರೆ ದೂರು ನೀಡಲು ಈ ಸಹಾಯವಾಣಿ ಸಹಕಾರಿಯಾಗಲಿದ್ದು, 2014ರಿಂದ ಇದುವರೆಗೆ 1.8 ಕೋಟಿ ಕರೆಗಳು ಬಂದಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಒಟ್ಟಿನಲ್ಲಿ ನರೇಂದ್ರ ಮೋದಿ ಸರ್ಕಾರ ಸರ್ವರ ಏಳಿಗೆಗಾಗಿ ಹಲವು ಯೋಜನೆ ರೂಪಿಸುತ್ತಿದ್ದು, ನಾವೂ ಸಹ ಬಾಲ ಕಾರ್ಮಿಕರ ರಕ್ಷಣೆಗಾಗಿ ಸಹಾಯವಾಣಿ ಬಳಸೋಣ. ಆ ಮೂಲಕ ದೇಶವನ್ನು ಬಾಲ ಕಾರ್ಮಿಕ ಮುಕ್ತವನ್ನಾಗಿಸೋಣ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search