• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರ್ಕಾರದ ಬಳಿ ಸೈನಿಕರ ಬಟ್ಟೆ ಖರೀದಿಗೆ ದುಡ್ಡಿಲ್ಲ ಎಂದವರೇ ಕೇಳಿ, ಸೇನೆಗೆ ಆರು ಹೆಲಿಕಾಪ್ಟರ್ ನೀಡಲು ಅಮೆರಿಕ ಒಪ್ಪಿಗೆ!

TNN Correspondent Posted On June 13, 2018
0


0
Shares
  • Share On Facebook
  • Tweet It

ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಗಡಿಯಲ್ಲಿ ಸೈನಿಕರ ಆತ್ಮಸ್ಥೈರ್ಯ ಹೆಚ್ಚುತ್ತಿದೆ. ಅದರಲ್ಲೂ ಪ್ರಧಾನಿಯಂಥ ಪ್ರಧಾನಿಯೇ ದೀಪಾವಳಿಗೆ ಗಡಿ ಪ್ರದೇಶಕ್ಕೆ ಬಂದು ಸೈನಿಕರ ಜತೆ ದೀಪಾವಳಿ ಆಚರಿಸಿದರೆ ಯಾರಿಗೆ ತಾನೆ ಸ್ಫೂರ್ತಿ ಬರಲ್ಲ. ಹಾಗಂತ ಮೋದಿ ಅವರು ಬರೀ ಮಾತಿನಲ್ಲೇ ಮನೆ ಕಟ್ಟಿಲ್ಲ, ಬದಲಿಗೆ ಸೇನೆಗೆ ಆರ್ಥಿಕ ಸ್ವಾತಂತ್ರ್ಯ ನೀಡಿದ್ದಾರೆ, ಶಸ್ತ್ರಾಸ್ತ್ರ ಖರೀದಿ, ಮೇಕ್ ಇನ್ ಇಂಡಿಯಾ ಅನ್ವಯ ಶಸ್ತ್ರಾಸ್ತ್ರ ಉತ್ಪಾದನೆಗೆ ಅನುಕೂಲ ಮಾಡಿಕೊಡುವ ಮೂಲಕ ಭಾರತೀಯ ಸೇನೆಯ ಶಕ್ತಿ ದ್ವಿಗುಣಗೊಳಿಸುತ್ತಿದ್ದಾರೆ.

ಇದರ ಭಾಗವಾಗಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಮನವಿ ಮಾಡಿದ್ದು ಫಲಪ್ರದವಾಗಿದ್ದು, ಭಾರತಕ್ಕೆ ಆರು ಬೋಯಿಂಗ್ ಎಎಚ್ಇ ಅಪಾಚೆ ಹೆಲಿಕಾಪ್ಟರ್ ನೀಡಲು ಅಮೆರಿಕ ಒಪ್ಪಿಗೆ ನೀಡಿದೆ. ಇದರಿಂದ ಭಾರತದ ಸೇನಗೆ ಮತ್ತಷ್ಟು ಬಲ ಬರಲಿದೆ ಎಂದೇ ಹೇಳಲಾಗುತ್ತಿದೆ.

ಭಾರತಕ್ಕೆ ಆರು ಹೆಲಿಕಾಪ್ಟರ್ ನೀಡಲು ಅಮೆರಿಕ ಸ್ಟೇಟ್ ಡಿಪಾರ್ಟ್ ಮೆಂಟ್ ಒಪ್ಪಿಗೆ ನೀಡಿದೆ ಎಂದು ರಕ್ಷಣೆ ಭದ್ರತೆ ಸಹಕಾರ ಏಜೆನ್ಸಿ ಈ ಕುರಿತು ಪ್ರಕಟಣೆ ತಿಳಿಸಿದೆ. ಇದು ಸೇನೆಯ ಶಕ್ತಿ ಬಲಪಡಿಸುವ ಜತೆಗೆ ಭಾರತ-ಅಮೆರಿಕ ತಾಂತ್ರಿಕ ಸಹಕಾರ ಒಪ್ಪಂದ ವೃದ್ಧಿಯ ಭಾಗವೂ ಆಗಿದೆ ಎಂದು ತಿಳಿದುಬಂದಿದೆ.

ಭಾರತ ಸರ್ಕಾರ ಸುಮಾರು 930 ದಶಲಕ್ಷ ಡಾಲರ್ ನೀಡಿ ಆರು ಹೆಲಿಕಾಪ್ಟರ್ ಗಳನ್ನು ಖರೀದಿಸುವ ಒಪ್ಪಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಇವು ಸೇನೆ ಸೇರಲಿವೆ. ಶತ್ರುಗಳ ದಾಳಿಗೆ ಪ್ರತಿದಾಳಿ, ರಕ್ಷಣೆ ಸೇರಿ ಹಲವು ಕಾರಣಗಳಿಗೆ ಹೆಲಿಕ್ಯಾಪ್ಟರ್ ಗಳು ಸಹಾಯಕವಾಗಲಿವೆ ಎಂದು ಮೂಲಗಳು ತಿಳಿಸಿವೆ.

ಆದರೆ ಇತ್ತೀಚೆಗೆ ರಾಹುಲ್ ಗಾಂಧಿ ಸೇರಿ ಹಲವರು ಸಾಮಾಜಿಕ ಜಾಲತಾಣದಲ್ಲಿ ನರೇಂದ್ರ ಮೋದಿ ಅವರನ್ನು ಟೀಕಿಸಲೆಂದೇ, ಸರ್ಕಾರದ ಬಳಿ ಸೈನಿಕರ ಸಮವಸ್ತ್ರ ಖರೀದಿಗೂ ದುಡ್ಡಿಲ್ಲ ಎಂದು ವದಂತಿ ಹಬ್ಬಿಸಿದ್ದರು. ಆದರೆ ಕೇಂದ್ರ ಸರ್ಕಾರ ಮಾತ್ರ ಸೇನೆ ಬಲಪಡಿಸಲು ಹಣ ಖರ್ಚು ಮಾಡುತ್ತಲೇ ಇದೆ, ಸೇನೆ ಮತ್ತಷ್ಟು ಬಲವಾಗುತ್ತಲೇ ಇದೆ.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search