• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಎಂ ಕುಮಾರಸ್ವಾಮಿಗೆ ಪ್ರಧಾನಿ ಮೋದಿ ಫಿಟ್ನೆಸ್ ಸವಾಲು

TNN Correspondent Posted On June 13, 2018
0


0
Shares
  • Share On Facebook
  • Tweet It

ದೆಹಲಿ: ಸದಾ ಕುತೂಹಲಕಾರಿ ನಡೆಗಳನ್ನು ಇಡುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಇದೀಗ ಮತ್ತೊಮ್ಮೆ ವಿರೋಧ ಪಕ್ಷಗಳೇ ನಿಬ್ಬೆರಗಾಗುವಂತ ನಡೆಯನ್ನು ಅನುಸರಿಸಿದ್ದಾರೆ. ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋರ್ ಆರಂಭಿಸಿದ್ದ ‘ಹಮ್ ಫಿಟ್ ತೋ ಇಂಡಿಯಾ ಫಿಟ್’ ಚಾಲೇಂಜ್ ಅಭಿಯಾನ ಪ್ರಧಾನಿ ಮೋದಿ ಅವರನ್ನು ತಲುಪಿದೆ. ಕ್ರಿಕೆಟಿಗ ವಿರಾಟ್ ಕೋಹ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿದ ಫಿಟ್ನೆಸ್ ಚಾಲೆಂಜ್ ಸ್ವೀಕರಿಸಿದ್ದು, ತಾವು ವ್ಯಾಯಾಮ ಮಾಡುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.

https://twitter.com/narendramodi/status/1006739708670455810

ಅಚ್ಚರಿದಾಯಕ ಬೆಳವಣಿಗೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಫಿಟ್ನೆಸ್ ಚಾಲೆಂಜ್ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಈ ಟ್ವೀಟ್ ರಾಷ್ಟ್ರರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಮೋದಿಯ ಹೊಸ ನಡೆಯ ಬಗ್ಗೆ ಗೌಪ್ಯ ಚರ್ಚೆಗಳು ಆರಂಭವಾಗಿವೆ.

ಭಾರತದ ತಂಡದ ಕ್ರಿಕೆಟಿಗ ವಿರಾಟ್ ಕೋಹ್ಲಿಯವರ ಚಾಲೆಂಜ್ ಸ್ವೀಕರಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಾವು ವ್ಯಾಯಾಮ ಮಾಡುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಅಲ್ಲದೇ ಕರ್ನಾಟಕ ಸಿಎಂ ಮತ್ತು ಅಂತಾರಾಷ್ಟ್ರೀಯ ಟೆಬಲ್ ಟೆನ್ನಿಸ್ ಆಟಗಾ  ಮಾನಿಕ್ ಬಾತ್ರಾ ಅವರಿಗೆ ಸವಾಲು ಹಾಕಿದ್ದಾರೆ.

I am delighted to nominate the following for the #FitnessChallenge:

Karnataka’s CM Shri @hd_kumaraswamy.

India’s pride and among the highest medal winners for India in the 2018 CWG, @manikabatra_TT.

The entire fraternity of brave IPS officers, especially those above 40.

— Narendra Modi (@narendramodi) June 13, 2018

ಮೋದಿ ಫಿಟ್ನೆಸ್ ಗುಟ್ಟು ಬಯಲು, ಮಾದರಿಯಾದ ನಮೋ ನಡೆ

ನಿರಂತರ ಪ್ರಯಾಣ, ಬಿಡುವಿಲ್ಲದ ಕಾರ್ಯಕ್ರಮಗಳ ಮಧ್ಯೆ ಸದಾ ಚಟುವಟಿಕೆಯಿಂದ ಇರುವ ಪ್ರಧಾನಿ ನರೇಂದ್ರ ಮೋದಿ ಅವರ ಫಿಟ್ನೆಸ್ ನ ಹಿಂದೆ ಇರುವ ಕೆಲವು ಅಂಶಗಳು ಇದೀಗ ಅವರು ಟ್ವೀಟ್ ಮಾಡಿರುವ ವಿಡಿಯೋ ಮೂಲಕ ಬಯಲಾಗಿವೆ. ನಿಸರ್ಗದ ಪಂಚತತ್ವಗಳನ್ನು ಅಳವಡಿಸಿಕೊಳ್ಳಲಾಗಿದೆ. ಪೃಥ್ವಿ, ಅಗ್ನಿ, ಜಲ, ವಾಯು, ಆಕಾಶ ಎಂಬ ಪಂಚತತ್ವಗಳು ನಮ್ಮನ್ನು ಕಾಯುತ್ತವೇ ಎಂಬ ಸಂದೇಶವನ್ನು ಮೋದಿ ಜನರಿಗೆ ನೀಡಿದ್ದಾರೆ. ಅಲ್ಲದೇ ಯೋಗ, ವ್ಯಾಯಾಮ ಧ್ಯಾನ, ಪ್ರಾಣಾಯಾಮಗಳ ಮಹತ್ವವನ್ನು ಒಂದೇ ವಿಡಿಯೋದಲ್ಲಿ ಮನದಟ್ಟಾಗುವಂತೆ ಸಾರಿ ಹೇಳಿದ್ದಾರೆ, ಈ ಮೂಲಕ ದೇಶವಾಸಿಗಳಿಗೆ ಫಿಟ್ನೆಸ್ ನ ಮಹತ್ವ ಸಾರಿದ್ದಾರೆ.

0
Shares
  • Share On Facebook
  • Tweet It




Trending Now
ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
Tulunadu News July 30, 2025
ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
Tulunadu News July 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
    • ಕರ್ನಾಟಕದಲ್ಲಿ "ಮನೆಮನೆಗೆ ಪೊಲೀಸ್" ಏನು ಕಥೆ!
  • Popular Posts

    • 1
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 2
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 3
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 4
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • 5
      ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!

  • Privacy Policy
  • Contact
© Tulunadu Infomedia.

Press enter/return to begin your search