• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಇಫ್ತಾರ್ ಕೂಟವನ್ನು ಕಪಟತನದ ಪರಮಾವಧಿ ಎಂದು ಯಾರು ವಿಶ್ಲೇಷಿಸಿದ್ದಾರೆ ಗೊತ್ತಾ?

TNN Correspondent Posted On June 15, 2018
0


0
Shares
  • Share On Facebook
  • Tweet It

ಹೈದರಾಬಾದ್: ಕಾಂಗ್ರೆಸ್ ಇತ್ತೀಚೆಗೆ ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಆಯೋಜಿಸಿತ್ತು. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಸಹ ಆಯೋಜಿಸಿದ್ದರು. ಕೆಲವರು ಇದು ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್ ಪ್ರತಿವರ್ಷ ಮಾಡುವ ನಾಟಕ ಎಂಬೆಲ್ಲ ಟೀಕೆಗಳು ವ್ಯಕ್ತವಾಗಿದ್ದವು. ಜನರೂ ಇದೆಲ್ಲ ಸಾಮಾನ್ಯ ಎಂದು ಸುಮ್ಮನಾಗಿದ್ದರು.

ಆದರೆ ಕಾಂಗ್ರೆಸ್ ಆಯೋಜಿಸಿರುವ ಇಫ್ತಾರ್ ಕೂಟವನ್ನು ಮುಸ್ಲಿಂ ನಾಯಕರೇ ಟೀಕಿಸಿದ್ದು, ಕಾಂಗ್ರೆಸ್ ಇಫ್ತಾರ್ ಕೂಟ ಆಯೋಜಿಸಿದ್ದು ಕಪಟತನದ ಪರಮಾವಧಿ ಎಂದು ಎಐಎಂಐಎಂ ಮುಖ್ಯಸ್ಥ, ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ವಿಶ್ಲೇಷಿಸಿದ್ದಾರೆ.

ಕಾಂಗ್ರೆಸ್ಸಿಗೆ ಮುಸ್ಲಿಮರ ಏಳಿಗೆ ಬೇಕಾಗಿರಲಿಲ್ಲ. ಈ ಇಫ್ತಾರ್ ಕೂಟ ಆಯೋಜಿಸಿರುವುದು ಕಪಟತನದಿಂದ ಕೂಡಿದೆ. ಆಯಾ ಧರ್ಮದ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಹೀಗೆ ಮಾಡಿದೆ. ಹಿಂದೂಗಳು ಹಾಗೂ ಮುಸ್ಲಿಮರು ಸೇರಿ ಯಾವುದೇ ಧರ್ಮೀಯರ ಮತ ಸೆಳೆಯಲು ಇಂತಹ ಧಾರ್ಮಿಕ ಕಾರ್ಯಕ್ರಮ ಆಯೋಜಿಸುತ್ತದೆ ಎಂದು ಓವೈಸಿ ಟೀಕಿಸಿದ್ದಾರೆ.

ಅದರಲ್ಲೂ ಇತ್ತೀಚೆಗಷ್ಟೇ ಪ್ರಣಬ್ ಮುಖರ್ಜಿಯವರು ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆ ಮೂಲಕ ಅವರು ಹಿಂದೂಗಳು ಪರ ಎಂಬ ಸಂದೇಶ ಬಿಂಬಿತವಾಗಿತ್ತು. ಆದರೆ ಇದು ಎಲ್ಲಿ ಮುಸ್ಲಿಮರ ಮುನಿಸಿಗೆ ಕಾರಣವಾಗುತ್ತೋ ಎಂಬ ಕಾರಣದಿಂದ ಪ್ರಣಬ್ ಮುಖರ್ಜಿಯವರನ್ನು ಇಫ್ತಾರ್ ಕೂಟಕ್ಕೆ ಆಹ್ವಾನಿಸಿ, ರಾಹುಲ್ ಗಾಂಧಿ ಪಕ್ಕದಲ್ಲೇ ಕೂರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಹೀಗೆ ಇಫ್ತಾರ್ ಕೂಟಕ್ಕೆ ಪ್ರಣಬ್ ಮುಖರ್ಜಿಯವರನ್ನು ಆಹ್ವಾನಿಸುವ ಮೂಲಕ ಕಾಂಗ್ರೆಸ್ ಮತಗಳಿಗಾಗಿ ಸಮತೋಲನ ಕಾಯ್ದುಕೊಳ್ಳಲು ಪ್ರಯತ್ನಿಸಿದೆ. ಇದರಿಂದಲೇ ಕಾಂಗ್ರೆಸ್ ಎಂತಹ ಕಪಟಿ ಎಂದು ಗೊತ್ತಾಗುತ್ತದೆ ಎಂದು ಅಸಾದುದ್ದೀನ್ ಓವೈಸಿ ಟೀಕಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search