• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಇಫ್ತಾರ್ ಕೂಟವನ್ನು ಕಪಟತನದ ಪರಮಾವಧಿ ಎಂದು ಯಾರು ವಿಶ್ಲೇಷಿಸಿದ್ದಾರೆ ಗೊತ್ತಾ?

TNN Correspondent Posted On June 15, 2018
0


0
Shares
  • Share On Facebook
  • Tweet It

ಹೈದರಾಬಾದ್: ಕಾಂಗ್ರೆಸ್ ಇತ್ತೀಚೆಗೆ ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಆಯೋಜಿಸಿತ್ತು. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಸಹ ಆಯೋಜಿಸಿದ್ದರು. ಕೆಲವರು ಇದು ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್ ಪ್ರತಿವರ್ಷ ಮಾಡುವ ನಾಟಕ ಎಂಬೆಲ್ಲ ಟೀಕೆಗಳು ವ್ಯಕ್ತವಾಗಿದ್ದವು. ಜನರೂ ಇದೆಲ್ಲ ಸಾಮಾನ್ಯ ಎಂದು ಸುಮ್ಮನಾಗಿದ್ದರು.

ಆದರೆ ಕಾಂಗ್ರೆಸ್ ಆಯೋಜಿಸಿರುವ ಇಫ್ತಾರ್ ಕೂಟವನ್ನು ಮುಸ್ಲಿಂ ನಾಯಕರೇ ಟೀಕಿಸಿದ್ದು, ಕಾಂಗ್ರೆಸ್ ಇಫ್ತಾರ್ ಕೂಟ ಆಯೋಜಿಸಿದ್ದು ಕಪಟತನದ ಪರಮಾವಧಿ ಎಂದು ಎಐಎಂಐಎಂ ಮುಖ್ಯಸ್ಥ, ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ವಿಶ್ಲೇಷಿಸಿದ್ದಾರೆ.

ಕಾಂಗ್ರೆಸ್ಸಿಗೆ ಮುಸ್ಲಿಮರ ಏಳಿಗೆ ಬೇಕಾಗಿರಲಿಲ್ಲ. ಈ ಇಫ್ತಾರ್ ಕೂಟ ಆಯೋಜಿಸಿರುವುದು ಕಪಟತನದಿಂದ ಕೂಡಿದೆ. ಆಯಾ ಧರ್ಮದ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಹೀಗೆ ಮಾಡಿದೆ. ಹಿಂದೂಗಳು ಹಾಗೂ ಮುಸ್ಲಿಮರು ಸೇರಿ ಯಾವುದೇ ಧರ್ಮೀಯರ ಮತ ಸೆಳೆಯಲು ಇಂತಹ ಧಾರ್ಮಿಕ ಕಾರ್ಯಕ್ರಮ ಆಯೋಜಿಸುತ್ತದೆ ಎಂದು ಓವೈಸಿ ಟೀಕಿಸಿದ್ದಾರೆ.

ಅದರಲ್ಲೂ ಇತ್ತೀಚೆಗಷ್ಟೇ ಪ್ರಣಬ್ ಮುಖರ್ಜಿಯವರು ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆ ಮೂಲಕ ಅವರು ಹಿಂದೂಗಳು ಪರ ಎಂಬ ಸಂದೇಶ ಬಿಂಬಿತವಾಗಿತ್ತು. ಆದರೆ ಇದು ಎಲ್ಲಿ ಮುಸ್ಲಿಮರ ಮುನಿಸಿಗೆ ಕಾರಣವಾಗುತ್ತೋ ಎಂಬ ಕಾರಣದಿಂದ ಪ್ರಣಬ್ ಮುಖರ್ಜಿಯವರನ್ನು ಇಫ್ತಾರ್ ಕೂಟಕ್ಕೆ ಆಹ್ವಾನಿಸಿ, ರಾಹುಲ್ ಗಾಂಧಿ ಪಕ್ಕದಲ್ಲೇ ಕೂರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಹೀಗೆ ಇಫ್ತಾರ್ ಕೂಟಕ್ಕೆ ಪ್ರಣಬ್ ಮುಖರ್ಜಿಯವರನ್ನು ಆಹ್ವಾನಿಸುವ ಮೂಲಕ ಕಾಂಗ್ರೆಸ್ ಮತಗಳಿಗಾಗಿ ಸಮತೋಲನ ಕಾಯ್ದುಕೊಳ್ಳಲು ಪ್ರಯತ್ನಿಸಿದೆ. ಇದರಿಂದಲೇ ಕಾಂಗ್ರೆಸ್ ಎಂತಹ ಕಪಟಿ ಎಂದು ಗೊತ್ತಾಗುತ್ತದೆ ಎಂದು ಅಸಾದುದ್ದೀನ್ ಓವೈಸಿ ಟೀಕಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search