• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಗೌರಿ ಲಂಕೇಶ್ ಅವರಿಗೆ ಕರಗುವ ಮನ ಈ ಸಂಪಾದಕನ ಹತ್ಯೆಗೆ ಏಕೆ ಮಿಡಿಯುವುದಿಲ್ಲ?

ನವೀನ್ ಶೆಟ್ಟಿ ಮಂಗಳೂರು Posted On June 15, 2018
0


0
Shares
  • Share On Facebook
  • Tweet It

ರಾಜ್ಯಮಟ್ಟದ ಹಾಗೂ ದಿನಪತ್ರಿಕೆಗಳ ಮಧ್ಯೆ ಕಳೆದೇ ಹೋಗಿದ್ದ ಲಂಕೇಶ್ ಪತ್ರಿಕೆ ಎಂಬ ಟ್ಯಾಬ್ಲಾಯ್ಡ್ ಪತ್ರಿಕೆ ನಡೆಸುತ್ತಿದ್ದ ಗೌರಿ ಲಂಕೇಶ್ ಅವರ ಹತ್ಯೆಯಾದಾಗ ದೇಶದ ಹಲವೆಡೆಯಿಂದ ಜೀವಪರರು ಆಗಮಿಸಿದ್ದರು. ಎಲ್ಲಿದ್ದರೋ ಪ್ರಕಾಶ್, ಸೀದಾ ಬೆಂಗಳೂರಿಗೆ ಬಂದವರೇ, ಏನಾಗ್ತಿದೆರೀ ಕರ್ನಾಟಕದಲ್ಲಿ ಎಂದು ಪ್ರಶ್ನಿಸಿದರು. ರಾಜ್ಯದ ಹಲವೆಡೆಯಿಂದ ಬಂದ ಬುದ್ಧಿಜೀವಿಗಳು ನಾನು ಗೌರಿ ಅಭಿಯಾನ ನಡೆಸಿದರು. ಪರೋಕ್ಷವಾಗಿ ನರೇಂದ್ರ ಮೋದಿ ಅವರನ್ನು ಟೀಕಿಸಿದರು. ಅಸಹಿಷ್ಣುತೆಯ ಬೊಬ್ಬೆ ಹಾಕಿದರು.

ಆದರೆ ಜಮ್ಮು-ಕಾಶ್ಮೀರದ ಪ್ರಮುಖ ದಿನಪತ್ರಿಕೆಯಾದ, ವೆಬ್ ಸೈಟ್ ಪತ್ರಿಕೋದ್ಯಮದಲ್ಲೂ ಜಾಗೃತವಾಗಿದ್ದ, ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರೀಯತೆಯ ಪ್ರತಿನಿಧಯಾಗಿರುವ, ದೇಶ ಪ್ರೇಮ ಎತ್ತಿ ಹಿಡಿಯುವ, ಪ್ರತ್ಯೇಕತಾವಾದಿಗಳ ನಿಜಬಣ್ಣ ಬಯಲು ಮಾಡುವ ರೈಸಿಂಗ್ ಕಾಶ್ಮೀರ ಪತ್ರಿಕೆಯ ಸಂಪಾದಕ ಶುಜಾತ್ ಭುಕಾರಿ ಹತ್ಯೆ ಮಾಡಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಒಬ್ಬ ಪತ್ರಿಕಾ ಸಂಪಾದಕನ ಹತ್ಯೆ ಮಾಡಲಾಗಿದೆ ಎಂದರೆ, ಆತ ದೇಶದ ಪರ ಹಾಗೂ ಉಗ್ರವಾದ, ಪ್ರತ್ಯೇಕತವಾದದ ವಿರೋಧವಾಗಿರುವವರೇ ಎಂದು ಅರ್ಥ. ಹಾಗೆಯೇ ರೈಸಿಂಗ್ ಕಾಶ್ಮಿರ ಪತ್ರಿಕೆಯ ಸಂಪಾದಕರಾಗಿ ಶುಜಾತ್ ಭುಕಾರಿ ಮಾಡುತ್ತಿದ್ದರು. ದೇಶದ ಸಮಗ್ರತೆ ಸಾರುವ ಲೇಖನ, ವರದಿಗಳು ಪ್ರಕಟವಾಗುತ್ತಿದ್ದವು. ಇದನ್ನು ಸಹಿಸದ ಕೆಲವರು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಆದರೆ ಇಂತಹ ಒಬ್ಬ ಸಂಪಾದಕನ ಹತ್ಯೆಯಾದರೂ ದೇಶದಲ್ಲಿರುವ ಬುದ್ಧಿಜೀವಿಗಳಲ್ಲಿ ಒಬ್ಬರೇ ಒಬ್ಬರೂ ಸಂತಾಪ ಸೂಚಿಸಿಲ್ಲ. ಯಾವ ಪ್ರಕಾಶ್ ರೈ ಸಹ ಏನಾಗ್ತಿದೆರೀ ಕಾಶ್ಮೀರದಲ್ಲಿ ಎಂದು ಕೂಗು ಹಾಕಿಲ್ಲ. ಯಾವ ಜೀವಪರನೂ ಹತ್ಯೆಕೋರರ ವಿರುದ್ಧ ಒಂದೂ ಮಾತನಾಡಿಲ್ಲ. ಯಾರೂ ನಾನು ಶುಜಾತ್ ಭುಕಾರಿ ಎಂದು ಬೋರ್ಡ್ ಹಿಡಿದು ಪ್ರತಿಭಟನೆ ಮಾಡುತ್ತೇವೆ ಎಂದು ಮುಂದೆ ಬಂದಿಲ್ಲ. ಯಾಕೆ? ಗೌರಿ ಲಂಕೇಶ್ ಹತ್ಯೆಗೆ ಕರಗುವ ಮನ, ಈ ಸಂಪಾದಕನ ಹತ್ಯೆಗೆ ಏಕೆ ಮಿಡಿಯುವುದಿಲ್ಲ? ಉತ್ತರಿಸುವಿರಾ ಬುದ್ಧಿಜೀವಿಗಳೇ?

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
ನವೀನ್ ಶೆಟ್ಟಿ ಮಂಗಳೂರು July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
ನವೀನ್ ಶೆಟ್ಟಿ ಮಂಗಳೂರು July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search