• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೆಎನ್ ಯು ನಲ್ಲಿ ಉಪನ್ಯಾಸ ಏರ್ಪಡಿಸಿ, ನಕ್ಸಲರನ್ನು ಸೃಷ್ಟಿಸಲು ಭೀಮಾಕೋರೆಗಾಂವ್ ಗಲಭೆ ಆರೋಪಿಗಳ ಪ್ಲಾನ್

TNN Correspondent Posted On June 15, 2018
0


0
Shares
  • Share On Facebook
  • Tweet It

ಪುಣೆ: ಮಹಾರಾಷ್ಟ್ರದಲ್ಲಿ ನಡೆದ ಭೀಮಾಕೋರೆಗಾಂವ್ ಗಲಭೆ ಆರೋಪಿಗಳಿಂದ ದೇಶಕ್ಕೆ ಮಾರಕವಾಗುವಂತ ಆಘಾತಕಾರಿ ವಿಷಯಗಳು ಹೊರ ಹೊಮ್ಮುತ್ತಿದ್ದು, ವಿಚಾರಣೆಯಲ್ಲಿ ಇಡೀ ಗಲಭೆಯ ಹಿಂದಿನ ವ್ಯವಸ್ಥಿತ ಸಂಚು ಬಯಲಾಗುತ್ತಿದೆ. ಇದೀಗ ಗಲಭೆ ಆರೋಪದಲ್ಲಿ ಬಂಧಿಸಲಾಗಿರುವ ವ್ಯಕ್ತಿಗಳೇ ಆಘಾತಕಾರಿ ವಿಷಯವೊಂದನ್ನು ಹೊರ ಹಾಕಿದ್ದು, ದೆಹಲಿಯ ಪ್ರತಿಷ್ಟಿತ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕಗಳನ್ನು ಏರ್ಪಡಿಸಿ, ಯುವ ವಿದ್ಯಾರ್ಥಿಗಳನ್ನು ತಮ್ಮ ಕಾರ್ಯಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಪ್ರೇರಣೆ ನೀಡಲು ಸಂಚು ರೂಪಿಸಿದ್ದರು ಎಂದು ತಿಳಿಸಿದ್ದಾರೆ ಎಂದು ಪುಣೆ ಪೊಲೀಸರು ಹೇಳಿದ್ದಾರೆ.

ಗುರುವಾರ ನಾಲ್ವರು ಆರೋಪಿಗಳಾದ ಸುಧೀರ್ ದಾವಲೆ, ಮಹೇಶ್ ರೌತ್, ಶೋಮಾ ಸೇನ್, ರೋನಾ ವಿಲ್ಸನ್ ರನ್ನು ಕೋರ್ಟ್ ಗೆ ಹಾಜರು ಪಡಿಸಿದ್ದು, ಈ ವೇಳೆ ‘ಮೃತ ನಕ್ಸಲರ ಸ್ಮರಣೆ’ (ಪೊಲೀಸರಿಂದ ಹತರಾದ ನಕ್ಸಲರ) ಹೆಸರಲ್ಲಿ ದೆಹಲಿಯ ಜವಾಹರ್ ಲಾಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸವನ್ನು ಏರ್ಪಡಿಸಿ, ವಿದ್ಯಾರ್ಥಿಗಳನ್ನು ನಕ್ಸಲ ಚಟುವಟಿಕೆಗೆ ತಳ್ಳುವ ಷಡ್ಯಂತ್ರ ನಡೆಸಲು ಯೋಜನೆ ರೂಪಿಸಿದ್ದರು ಎಂಬ ಮಾಹಿತಿ ಹೊರ ಹಾಕಿದ್ದಾರೆ. ಜೆಎನ್ ಯು ವಿದ್ಯಾರ್ಥಿಗಳನ್ನು  ನಿಷೇಧಿತ ನಕ್ಸಲರ ‘ಸಿಪಿಐ (ಮಾವೋಇಸ್ಟ್) ಬಂಡಾಯಕಾರರ’ ಸಂಘಟನೆಗೆ ಸೇರಿಸುವ ಉದ್ದೇಶ ಇದರ ಹಿಂದೆ ಹೊಂದಲಾಗಿತ್ತು ಎನ್ನಲಾಗಿದೆ.

ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಯಬೇಕು. ಇಂತಹ ಪ್ರಯತ್ನಗಳು ಭಾರತದ ರಕ್ಷಣಾ ವ್ಯವಸ್ಥೆಗೆ ಆಘಾತಕಾರಿಯಾಗಿವೆ ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿದೆ.

ಪಬ್ಲಿಕ್ ಪ್ರಾಸಿಕೂಟರ್ ಉಜ್ವಲ್ ಪವಾರ್ ಈ ಕುರಿತು ಮಾಹಿತಿ ನೀಡಿದ್ದು ‘ಪೊಲೀಸ್ ಎನ್ ಕೌಂಟರ್ ನಲ್ಲಿ ಮೃತಪಟ್ಟಿರುವ ನಕ್ಸಲ್  ನವೀನ್ ಬಾಬು ಸ್ಮರಣೆಯಲ್ಲಿ ಉಪನ್ಯಾಸ ಏರ್ಪಡಿಸಿ, ನಕ್ಸಲರ ಮಾರ್ಗದರ್ಶನಂತೆ ವಿದ್ಯಾರ್ಥಿಗಳನ್ನು ಪ್ರಚೋದನೆಗೆ ಒಳಪಡಿಸಿ, ದೇಶವಿರೋಧಿ ಚಟುವಟಿಕೆಗಳಿಗೆ ಭಾಗಿಯಾಗುವಂತೆ ಮಾಡುವ ಹುನ್ನಾರ ಹೊಂದಿದ್ದರು ಎಂದು ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search