• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜೆಎನ್ ಯು ನಲ್ಲಿ ಉಪನ್ಯಾಸ ಏರ್ಪಡಿಸಿ, ನಕ್ಸಲರನ್ನು ಸೃಷ್ಟಿಸಲು ಭೀಮಾಕೋರೆಗಾಂವ್ ಗಲಭೆ ಆರೋಪಿಗಳ ಪ್ಲಾನ್

TNN Correspondent Posted On June 15, 2018


  • Share On Facebook
  • Tweet It

ಪುಣೆ: ಮಹಾರಾಷ್ಟ್ರದಲ್ಲಿ ನಡೆದ ಭೀಮಾಕೋರೆಗಾಂವ್ ಗಲಭೆ ಆರೋಪಿಗಳಿಂದ ದೇಶಕ್ಕೆ ಮಾರಕವಾಗುವಂತ ಆಘಾತಕಾರಿ ವಿಷಯಗಳು ಹೊರ ಹೊಮ್ಮುತ್ತಿದ್ದು, ವಿಚಾರಣೆಯಲ್ಲಿ ಇಡೀ ಗಲಭೆಯ ಹಿಂದಿನ ವ್ಯವಸ್ಥಿತ ಸಂಚು ಬಯಲಾಗುತ್ತಿದೆ. ಇದೀಗ ಗಲಭೆ ಆರೋಪದಲ್ಲಿ ಬಂಧಿಸಲಾಗಿರುವ ವ್ಯಕ್ತಿಗಳೇ ಆಘಾತಕಾರಿ ವಿಷಯವೊಂದನ್ನು ಹೊರ ಹಾಕಿದ್ದು, ದೆಹಲಿಯ ಪ್ರತಿಷ್ಟಿತ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕಗಳನ್ನು ಏರ್ಪಡಿಸಿ, ಯುವ ವಿದ್ಯಾರ್ಥಿಗಳನ್ನು ತಮ್ಮ ಕಾರ್ಯಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಪ್ರೇರಣೆ ನೀಡಲು ಸಂಚು ರೂಪಿಸಿದ್ದರು ಎಂದು ತಿಳಿಸಿದ್ದಾರೆ ಎಂದು ಪುಣೆ ಪೊಲೀಸರು ಹೇಳಿದ್ದಾರೆ.

ಗುರುವಾರ ನಾಲ್ವರು ಆರೋಪಿಗಳಾದ ಸುಧೀರ್ ದಾವಲೆ, ಮಹೇಶ್ ರೌತ್, ಶೋಮಾ ಸೇನ್, ರೋನಾ ವಿಲ್ಸನ್ ರನ್ನು ಕೋರ್ಟ್ ಗೆ ಹಾಜರು ಪಡಿಸಿದ್ದು, ಈ ವೇಳೆ ‘ಮೃತ ನಕ್ಸಲರ ಸ್ಮರಣೆ’ (ಪೊಲೀಸರಿಂದ ಹತರಾದ ನಕ್ಸಲರ) ಹೆಸರಲ್ಲಿ ದೆಹಲಿಯ ಜವಾಹರ್ ಲಾಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸವನ್ನು ಏರ್ಪಡಿಸಿ, ವಿದ್ಯಾರ್ಥಿಗಳನ್ನು ನಕ್ಸಲ ಚಟುವಟಿಕೆಗೆ ತಳ್ಳುವ ಷಡ್ಯಂತ್ರ ನಡೆಸಲು ಯೋಜನೆ ರೂಪಿಸಿದ್ದರು ಎಂಬ ಮಾಹಿತಿ ಹೊರ ಹಾಕಿದ್ದಾರೆ. ಜೆಎನ್ ಯು ವಿದ್ಯಾರ್ಥಿಗಳನ್ನು  ನಿಷೇಧಿತ ನಕ್ಸಲರ ‘ಸಿಪಿಐ (ಮಾವೋಇಸ್ಟ್) ಬಂಡಾಯಕಾರರ’ ಸಂಘಟನೆಗೆ ಸೇರಿಸುವ ಉದ್ದೇಶ ಇದರ ಹಿಂದೆ ಹೊಂದಲಾಗಿತ್ತು ಎನ್ನಲಾಗಿದೆ.

ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಯಬೇಕು. ಇಂತಹ ಪ್ರಯತ್ನಗಳು ಭಾರತದ ರಕ್ಷಣಾ ವ್ಯವಸ್ಥೆಗೆ ಆಘಾತಕಾರಿಯಾಗಿವೆ ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿದೆ.

ಪಬ್ಲಿಕ್ ಪ್ರಾಸಿಕೂಟರ್ ಉಜ್ವಲ್ ಪವಾರ್ ಈ ಕುರಿತು ಮಾಹಿತಿ ನೀಡಿದ್ದು ‘ಪೊಲೀಸ್ ಎನ್ ಕೌಂಟರ್ ನಲ್ಲಿ ಮೃತಪಟ್ಟಿರುವ ನಕ್ಸಲ್  ನವೀನ್ ಬಾಬು ಸ್ಮರಣೆಯಲ್ಲಿ ಉಪನ್ಯಾಸ ಏರ್ಪಡಿಸಿ, ನಕ್ಸಲರ ಮಾರ್ಗದರ್ಶನಂತೆ ವಿದ್ಯಾರ್ಥಿಗಳನ್ನು ಪ್ರಚೋದನೆಗೆ ಒಳಪಡಿಸಿ, ದೇಶವಿರೋಧಿ ಚಟುವಟಿಕೆಗಳಿಗೆ ಭಾಗಿಯಾಗುವಂತೆ ಮಾಡುವ ಹುನ್ನಾರ ಹೊಂದಿದ್ದರು ಎಂದು ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
Tulunadu News May 24, 2025
60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
Tulunadu News May 24, 2025
Leave A Reply

  • Recent Posts

    • ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
  • Popular Posts

    • 1
      ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 2
      60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • 3
      ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • 4
      ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • 5
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search