• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಣಿವೆಯಲ್ಲಿ ಪಾಕ್ ಷಡ್ಯಂತ್ರ: ಯೋಧ ಔರಂಗಜೇಬ್ ಕೊಲೆ ಹಿಂದೆ ಪಾಕಿಸ್ತಾನದ ಐಎಸ್ಐ ಕೈವಾಡ

TNN Correspondent Posted On June 15, 2018
0


0
Shares
  • Share On Facebook
  • Tweet It

ದೆಹಲಿ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲಯ ಕಲಾಂಪುರದಲ್ಲಿ ಇತ್ತೀಚೆಗೆ ಯೋಧ ಔರಂಗಜೇಬ್ ಅವರನ್ನು ಅಪಹರಿಸಿ, ಕೆಲವೇ ಗಂಟೆಗಳ ನಂತರ ಕೊಲೆ ಮಾಡಿರುವುದರ ಹಿಂದೆ ಪಾಕಿಸ್ತಾನದ ಗುಪ್ತರಚರ ಸಂಸ್ಥೆ ಐಎಸ್ ಐ ಭಾಗಿಯಾಗಿರುವ ಅನುಮಾನವನ್ನು ಭಾರತದ ಗುಪ್ತಚರ ಇಲಾಖೆ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

‘ಜಿಹಾದ್ ಫಾರ್ ಲಿಬರೇಷನ್ ಆಫ್ ಕಾಶ್ಮೀರ’ ಹೆಸರಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ ಐ ಭಾರತದ ವಿರುದ್ಧ ಷಡ್ಯಂತ್ರ ರೂಪಿಸಿದ್ದು, ಹಲವು ವಾಮಮಾರ್ಗಗಳ ಮೂಲಕ ದಾಳಿಗಳನ್ನು ಮಾಡಲು ಯತ್ನಿಸುತ್ತಿದೆ. ಇದೀಗ ಯೋಧ ಔರಂಗಜೇಬ್ ಅವರನ್ನು ಅಪಹರಿಸಿ, ಕೊಲೆ ಮಾಡಿರುವುದೂ ಸಹ ಅದರ ಭಾಗ ಮತ್ತು ಭಾರತೀಯ ಸೇನಾ ಪಡೆಗಳಿಗೆ ಒಂದು ಪಾಠವಾಗಬೇಕು ಎಂಬ ಉದ್ದೇಶ ಐಎಸ್ ಐ ಹೊಂದಿದೆ ಎಂಬ ಮಾಹಿತಿ ತಿಳಿದು ಬಂದಿದೆ

ಕಾಶ್ಮೀರ ಕಣಿವೆಯಲ್ಲಿ ಯೋಧ ಔರಂಗಜೇಬ್ ಅವರನ್ನು ಅಮಾನುಷವಾಗಿ ಕೊಲೆ ಮಾಡುವ ಮೂಲಕ ಪಾಕಿಸ್ತಾನ ಭಯೋತ್ಪಾದರ ಜೊತೆಗಿದೆ ಎಂಬ ಬಲಿಷ್ಠ ಸಂದೇಶವನ್ನು ಪಾಕಿಸ್ತಾನದ ಐಎಸ್ ಐ ಸಂಸ್ಥೆ ಭಾರತಕ್ಕೆ ರವಾನಿಸಿದೆ. ಅಲ್ಲದೇ ತನ್ನ ಕಾರ್ಯ ಚಟುವಟಿಕೆಗಳು ಕಾಶ್ಮೀರದ ಕಣಿವೆಯಲ್ಲಿ ಜಾರಿಯಿರಲಿವೆ ಎಂಬ ಸಂದೇಶವನ್ನು ಈ ಮೂಲಕ ನೀಡಿದೆ ಎನ್ನಲಾಗಿದೆ.

ಹುತಾತ್ಮರಾಗಿರುವ ಯೋಧ ಔರಂಗಜೇಬ್ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ಉಗ್ರ ಸಮೀರ್ ಟೈಗರ್ ಹತ್ಯೆಯ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಆದ್ದರಿಂದಲೇ ಗುರುವಾರ ಔರಂಗಜೇಬ್ ಅವರನ್ನು ಸುತ್ತುವರಿದಿದ್ದ ಭಯೋತ್ಪಾದಕರು ಗನ್ ತೋರಿಸಿ ಅವರನ್ನು ಅಪರಹರಿಸಿ, ಅಮಾನುಷ ರೀತಿಯಲ್ಲಿ ಕೊಲೆ ಮಾಡಿದ್ದರು.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search