• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಣಿವೆಯಲ್ಲಿ ಪಾಕ್ ಷಡ್ಯಂತ್ರ: ಯೋಧ ಔರಂಗಜೇಬ್ ಕೊಲೆ ಹಿಂದೆ ಪಾಕಿಸ್ತಾನದ ಐಎಸ್ಐ ಕೈವಾಡ

TNN Correspondent Posted On June 15, 2018
0


0
Shares
  • Share On Facebook
  • Tweet It

ದೆಹಲಿ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲಯ ಕಲಾಂಪುರದಲ್ಲಿ ಇತ್ತೀಚೆಗೆ ಯೋಧ ಔರಂಗಜೇಬ್ ಅವರನ್ನು ಅಪಹರಿಸಿ, ಕೆಲವೇ ಗಂಟೆಗಳ ನಂತರ ಕೊಲೆ ಮಾಡಿರುವುದರ ಹಿಂದೆ ಪಾಕಿಸ್ತಾನದ ಗುಪ್ತರಚರ ಸಂಸ್ಥೆ ಐಎಸ್ ಐ ಭಾಗಿಯಾಗಿರುವ ಅನುಮಾನವನ್ನು ಭಾರತದ ಗುಪ್ತಚರ ಇಲಾಖೆ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

‘ಜಿಹಾದ್ ಫಾರ್ ಲಿಬರೇಷನ್ ಆಫ್ ಕಾಶ್ಮೀರ’ ಹೆಸರಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ ಐ ಭಾರತದ ವಿರುದ್ಧ ಷಡ್ಯಂತ್ರ ರೂಪಿಸಿದ್ದು, ಹಲವು ವಾಮಮಾರ್ಗಗಳ ಮೂಲಕ ದಾಳಿಗಳನ್ನು ಮಾಡಲು ಯತ್ನಿಸುತ್ತಿದೆ. ಇದೀಗ ಯೋಧ ಔರಂಗಜೇಬ್ ಅವರನ್ನು ಅಪಹರಿಸಿ, ಕೊಲೆ ಮಾಡಿರುವುದೂ ಸಹ ಅದರ ಭಾಗ ಮತ್ತು ಭಾರತೀಯ ಸೇನಾ ಪಡೆಗಳಿಗೆ ಒಂದು ಪಾಠವಾಗಬೇಕು ಎಂಬ ಉದ್ದೇಶ ಐಎಸ್ ಐ ಹೊಂದಿದೆ ಎಂಬ ಮಾಹಿತಿ ತಿಳಿದು ಬಂದಿದೆ

ಕಾಶ್ಮೀರ ಕಣಿವೆಯಲ್ಲಿ ಯೋಧ ಔರಂಗಜೇಬ್ ಅವರನ್ನು ಅಮಾನುಷವಾಗಿ ಕೊಲೆ ಮಾಡುವ ಮೂಲಕ ಪಾಕಿಸ್ತಾನ ಭಯೋತ್ಪಾದರ ಜೊತೆಗಿದೆ ಎಂಬ ಬಲಿಷ್ಠ ಸಂದೇಶವನ್ನು ಪಾಕಿಸ್ತಾನದ ಐಎಸ್ ಐ ಸಂಸ್ಥೆ ಭಾರತಕ್ಕೆ ರವಾನಿಸಿದೆ. ಅಲ್ಲದೇ ತನ್ನ ಕಾರ್ಯ ಚಟುವಟಿಕೆಗಳು ಕಾಶ್ಮೀರದ ಕಣಿವೆಯಲ್ಲಿ ಜಾರಿಯಿರಲಿವೆ ಎಂಬ ಸಂದೇಶವನ್ನು ಈ ಮೂಲಕ ನೀಡಿದೆ ಎನ್ನಲಾಗಿದೆ.

ಹುತಾತ್ಮರಾಗಿರುವ ಯೋಧ ಔರಂಗಜೇಬ್ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ಉಗ್ರ ಸಮೀರ್ ಟೈಗರ್ ಹತ್ಯೆಯ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಆದ್ದರಿಂದಲೇ ಗುರುವಾರ ಔರಂಗಜೇಬ್ ಅವರನ್ನು ಸುತ್ತುವರಿದಿದ್ದ ಭಯೋತ್ಪಾದಕರು ಗನ್ ತೋರಿಸಿ ಅವರನ್ನು ಅಪರಹರಿಸಿ, ಅಮಾನುಷ ರೀತಿಯಲ್ಲಿ ಕೊಲೆ ಮಾಡಿದ್ದರು.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search