• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಣಿವೆಯಲ್ಲಿ ಪಾಕ್ ಷಡ್ಯಂತ್ರ: ಯೋಧ ಔರಂಗಜೇಬ್ ಕೊಲೆ ಹಿಂದೆ ಪಾಕಿಸ್ತಾನದ ಐಎಸ್ಐ ಕೈವಾಡ

TNN Correspondent Posted On June 15, 2018


  • Share On Facebook
  • Tweet It

ದೆಹಲಿ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲಯ ಕಲಾಂಪುರದಲ್ಲಿ ಇತ್ತೀಚೆಗೆ ಯೋಧ ಔರಂಗಜೇಬ್ ಅವರನ್ನು ಅಪಹರಿಸಿ, ಕೆಲವೇ ಗಂಟೆಗಳ ನಂತರ ಕೊಲೆ ಮಾಡಿರುವುದರ ಹಿಂದೆ ಪಾಕಿಸ್ತಾನದ ಗುಪ್ತರಚರ ಸಂಸ್ಥೆ ಐಎಸ್ ಐ ಭಾಗಿಯಾಗಿರುವ ಅನುಮಾನವನ್ನು ಭಾರತದ ಗುಪ್ತಚರ ಇಲಾಖೆ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

‘ಜಿಹಾದ್ ಫಾರ್ ಲಿಬರೇಷನ್ ಆಫ್ ಕಾಶ್ಮೀರ’ ಹೆಸರಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ ಐ ಭಾರತದ ವಿರುದ್ಧ ಷಡ್ಯಂತ್ರ ರೂಪಿಸಿದ್ದು, ಹಲವು ವಾಮಮಾರ್ಗಗಳ ಮೂಲಕ ದಾಳಿಗಳನ್ನು ಮಾಡಲು ಯತ್ನಿಸುತ್ತಿದೆ. ಇದೀಗ ಯೋಧ ಔರಂಗಜೇಬ್ ಅವರನ್ನು ಅಪಹರಿಸಿ, ಕೊಲೆ ಮಾಡಿರುವುದೂ ಸಹ ಅದರ ಭಾಗ ಮತ್ತು ಭಾರತೀಯ ಸೇನಾ ಪಡೆಗಳಿಗೆ ಒಂದು ಪಾಠವಾಗಬೇಕು ಎಂಬ ಉದ್ದೇಶ ಐಎಸ್ ಐ ಹೊಂದಿದೆ ಎಂಬ ಮಾಹಿತಿ ತಿಳಿದು ಬಂದಿದೆ

ಕಾಶ್ಮೀರ ಕಣಿವೆಯಲ್ಲಿ ಯೋಧ ಔರಂಗಜೇಬ್ ಅವರನ್ನು ಅಮಾನುಷವಾಗಿ ಕೊಲೆ ಮಾಡುವ ಮೂಲಕ ಪಾಕಿಸ್ತಾನ ಭಯೋತ್ಪಾದರ ಜೊತೆಗಿದೆ ಎಂಬ ಬಲಿಷ್ಠ ಸಂದೇಶವನ್ನು ಪಾಕಿಸ್ತಾನದ ಐಎಸ್ ಐ ಸಂಸ್ಥೆ ಭಾರತಕ್ಕೆ ರವಾನಿಸಿದೆ. ಅಲ್ಲದೇ ತನ್ನ ಕಾರ್ಯ ಚಟುವಟಿಕೆಗಳು ಕಾಶ್ಮೀರದ ಕಣಿವೆಯಲ್ಲಿ ಜಾರಿಯಿರಲಿವೆ ಎಂಬ ಸಂದೇಶವನ್ನು ಈ ಮೂಲಕ ನೀಡಿದೆ ಎನ್ನಲಾಗಿದೆ.

ಹುತಾತ್ಮರಾಗಿರುವ ಯೋಧ ಔರಂಗಜೇಬ್ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ಉಗ್ರ ಸಮೀರ್ ಟೈಗರ್ ಹತ್ಯೆಯ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಆದ್ದರಿಂದಲೇ ಗುರುವಾರ ಔರಂಗಜೇಬ್ ಅವರನ್ನು ಸುತ್ತುವರಿದಿದ್ದ ಭಯೋತ್ಪಾದಕರು ಗನ್ ತೋರಿಸಿ ಅವರನ್ನು ಅಪರಹರಿಸಿ, ಅಮಾನುಷ ರೀತಿಯಲ್ಲಿ ಕೊಲೆ ಮಾಡಿದ್ದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search