• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಮೆರಿಕ ಡ್ರೋನ್ ದಾಳಿಗೆ ತಾಲೀಬಾನ್‌ ಮುಖ್ಯಸ್ಥ ಮುಲ್ಲಾ ಫಸ್ಲುಲ್ಲಾ ಬಲಿ

TNN Correspondent Posted On June 15, 2018


  • Share On Facebook
  • Tweet It

ದೆಹಲಿ: ವಿಶ್ವಕ್ಕೆ ಕಂಟಕವಾಗಿರುವ ಭಯೋತ್ಪಾದಕ ಸಂಘಟನೆ ತಾಲಿಬಾನ್ನ ಮುಖ್ಯಸ್ಥ ಮುಲ್ಲಾಫಸ್ಲುಲ್ಲಾ ಅಮೆರಿಕದ ಡ್ರೋನ್ ದಾಳಿಗೆ ಬಲಿಯಾಗಿರುವ ಶುಭ ಸುದ್ದಿಯೊಂದು ಅಮೆರಿಕಾದ ಸೇನಾಪಡೆ ನೀಡಿದೆ. ಅಮೆರಿಕಾದ ಸೈನ್ಯ ಅಫಘಾನಿಸ್ತಾನದಲ್ಲಿ ಗುರುವಾರ ನಡೆಸಿದ ಡ್ರೋನ್ ದಾಳಿಯಲ್ಲಿ ಮುಲ್ಲಾ ಫಸ್ಲುಲ್ಲಾ ಖಲ್ಲಾಸ್ ಆಗಿರುವ ಸುದ್ದಿಯನ್ನು ಅಮೆರಿಕ ಬಹಿರಂಗಪಡಿಸಿದೆ. ಈ ಮೂಲಕ ವಿಶ್ವಶಾಂತಿಕೆ ಕಂಟಕವಾಗಿರುವ ಮಹತ್ವದ ಭಯೋತ್ಪಾದಕ ಸಂಘಟನೆಯ ಮುಖಂಡನೊಬ್ಬನನ್ನು ಹತ್ಯೆ ಮಾಡಿರುವ ಶ್ರೇಯಸ್ಸು ಅಮೆರಿಕ ಪಡೆದಿದೆ.

ಅಮೆರಿಕದ ಸೈನ್ಯ ನಡೆಸಿದ ಭಯೋತ್ಪಾದನ ನಿಗ್ರಹ ದಾಳಿಯಲ್ಲಿ, ತಹ್ರಿಕ್‌ -ಇ-ತಾಲಿಬಾನ್‌ ಪಾಕಿಸ್ತಾನ್‌ (ಟಿಟಿಪಿ) ಮುಖ್ಯಸ್ಥ ಫಸ್ಲುಲ್ಲ ಹಾಗೂ ಆತನ ಸಹಚರರು ಹತರಾಗಿದ್ದಾರೆ ಎಂಬ ಮಾಹಿತಿ ಅಮೆರಿಕ ಸೇನಾಪಡೆ ಅಧಿಕೃತವಾಗಿ ಹೊರಹಾಕಿದೆ.

ಅಫಘಾನಿಸ್ತಾನದ ಕುನ್ನಾರ್‌ ಪ್ರಾಂತ್ಯದಲ್ಲಿ ಭಯೋತ್ಪಾದನಾ ಸಂಘಟನೆಗಳ ಮುಖ್ಯಸ್ಥರನ್ನು ಗುರಿಯಾಗಿಸಿಕೊಂಡು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಮುಲ್ಲಾಫಸ್ಲುಲ್ಲಾ ಖಾನ್ ಹತರಾಗಿದ್ದಾರೆ ಎಂದು ಅಫಘಾನಿಸ್ತಾನದಲ್ಲಿರುವ ಅಮೆರಿಕದ ಲೆಫ್ಟಿನೆಂಟ್‌ ಕ.ಮಾರ್ಟಿನ್ ಮೆಕ್‌ಡೊನೆಲ್‌ ತಿಳಿಸಿದ್ದಾರೆ.

2014ರಲ್ಲಿ ತಾಲಿಬಾನ್ ಸಂಘಟನೆಯ ಮುಲ್ಲಾಫಸ್ಲುಲ್ಲಾ ಪಾಕಿಸ್ತಾನದಲ್ಲಿನ ಸೈನಿಕ ಶಾಲೆ ಮೇಲೆ ದಾಳಿ ನಡೆಸಿ,130 ಮಕ್ಕಳನ್ನು ಬಲಿಪಡೆದುಕೊಂಡಿದ್ದ ಮತ್ತು 2012ರಲ್ಲಿ ನೋಬೆಲ್‌ ಪ್ರಶಸ್ತಿ ವಿಜೇತೆ ಮಲಾಲ ಯುಸಫ್‌ ಝಾಯಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಎಂಬ ಮಾಹಿತಿ ತಿಳಿದು ಬಂದಿದೆ.

 

  • Share On Facebook
  • Tweet It


- Advertisement -


Trending Now
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
Leave A Reply

  • Recent Posts

    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
  • Popular Posts

    • 1
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 2
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 3
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 4
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 5
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search