• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಯೋತ್ಪಾದಕರಿಗೆ ಗುಂಡಿನ ಭಾಷೆ ಅರ್ಥವಾಗುತ್ತೇ, ಉಗ್ರರು ಕಂಡಲ್ಲಿ ಗುಂಡು ಹಾರಿಸುವ ಅಧಿಕಾರ ನೀಡಬೇಕು: ಸುಬ್ರಮಣಿಯನ್ ಸ್ವಾಮಿ

TNN Correspondent Posted On June 16, 2018
0


0
Shares
  • Share On Facebook
  • Tweet It

ದೆಹಲಿ: ಮುಸ್ಲಿಮರ ಪವಿತ್ರ ಮಾಸ ರಂಜಾನ್ ನಲ್ಲೂ ಗಡಿನಿಮಯ ಉಲ್ಲಂಘಿಸಿ ದಾಳಿ ನಡೆಸುತ್ತಿರುವ ಪಾಕಿಸ್ತಾನದ ಯೋಧರು ಮತ್ತು ಪಾಕ್ ಬೆಂಬಲಿತ ಭಯೋತ್ಪಾದಕರಿಗೆ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ತಕ್ಕ ಉತ್ತರ ನೀಡಿದ್ದು, ಭಯೋತ್ಪಾದಕರಿಗೆ ಕೇವಲ ಗುಂಡಿನ ಭಾಷೆಯಲ್ಲೇ ಉತ್ತರ ನೀಡಬೇಕು. ಗುಂಡಿನ ಭಾಷೆ ಮಾತ್ರ ಅವರಿಗೆ ಅರ್ಥವಾಗುತ್ತದೆ ಎಂದು ಖಡಕ್ ಮಾತುಗಳನ್ನು ಹೇಳಿದ್ದಾರೆ.

ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಪವಿತ್ರ ರಂಜಾನ್ ಮಾಸದಲ್ಲಿ ಕೇಂದ್ರ ಸರ್ಕಾರ ಸೈನಿಕ ಕಾರ್ಯಾಚರಣೆ ನಡೆಸುವುದನ್ನು ಸ್ಥಗಿತಗೊಳಿಸಿದೆ. ಆದರೆ ಮುಸ್ಲಿಂ ದೇಶವಾದ ಪಾಕಿಸ್ತಾನ ರಂಜಾನ್ ಮಾಸದಲ್ಲೂ ತನ್ನ ಕುತಂತ್ರ ಬುದ್ಧಿ ಪ್ರದರ್ಶಿಸುತ್ತಿದೆ. ಗುರುವಾರ ಯೋಧ ಔರಂಗಜೇಬ್ ಅವರನ್ನು ಅಪಹರಿಸಿ ಕೊಲೆ ಮತ್ತು ರೈಸಿಂಗ್ ಕಾಶ್ಮೀರ ಪತ್ರಿಕೆ ಸಂಪಾದಕ ಪತ್ರಕರ್ತ ಶುಜತ್ ಬುಕಾರಿ ಅವರ ಕೊಲೆ ಮಾಡಿರುವ ಭಯೋತ್ಪಾದಕರ ನಡೆಯನ್ನು ಖಂಡಿಸಿ ಮಾತನಾಡಿರುವ ಸುಬ್ರಮಣಿಯನ್ ಸ್ವಾಮಿ ‘ದೇಶದ ರಕ್ಷಣಾ ಪಡೆಗಳಿಗೆ ಪೂರ್ಣಾಧಿಕಾರ ನೀಡಬೇಕು. ಭಯೋತ್ಪಾದಕರು ಕಂಡ ಸ್ಥಳದಲ್ಲೇ ಗುಂಡಿಕ್ಕಿ ಕೊಲ್ಲುವ ಅಧಿಕಾರ ನೀಡಬೇಕು. ಇಲ್ಲದಿದ್ದರೇ ಭಯೋತ್ಪಾದಕರಿಗೆ ಪಾಠ ಕಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕಾಶ್ಮೀರದ ಸರ್ಕಾರವನ್ನು ಅಮಾನತ್ತಿನಲ್ಲಿಡಬೇಕು ಮತ್ತು ನೂತನ ರಾಜ್ಯಪಾಲರನ್ನು ನೇಮಿಸಬೇಕು. ಸೇನೆಗೆ ಕೇಂದ್ರ ಸರ್ಕಾರವಲ್ಲ ರಾಜ್ಯಪಾಲರೇ ನೇರವಾಗಿ ಸೂಚನೆಗಳನ್ನು ನೀಡುವ ಅಧಿಕಾರ ನೀಡಬೇಕು. ಅಲ್ಲದೇ ಜಮ್ಮು ಕಾಶ್ಮೀರದಲ್ಲಿ ರಕ್ಷಣಾ ಪಡೆಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search