• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಂಜಾನ್ ದಿನವೂ ಕದನವಿರಾಮ ಉಲ್ಲಂಘನೆ, ಪಾಕಿಸ್ತಾನಿ ಸೈನಿಕರಿಗೆ ಸಿಹಿ ನೀಡದ ಭಾರತ!

TNN Correspondent Posted On June 16, 2018


  • Share On Facebook
  • Tweet It

ರಂಜಾನ್ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಭಾರತವೇನೋ ಉಗ್ರರ ವಿರುದ್ಧದ ಕಾರ್ಯಾಚರಣೆ ನಡೆಸದೆ ಪಾಕಿಸ್ತಾನ ಹಾಗೂ ಕಾಶ್ಮೀರದಲ ಜತೆ ಸೌಹಾರ್ದ ಬೆಳೆಸಲು ಮುಂದಾಗಿದ್ದರೆ, ಅತ್ತ ಕುತಂತ್ರಿ ಪಾಕಿಸ್ತಾನ ಮಾತ್ರ ಇದನ್ನೇ ದುರ್ಬಳಕೆ ಮಾಡಿಕೊಂಡು ಇಷ್ಟು ದಿನ ಅಪ್ರಚೋದಿತ ದಾಳಿ ಮಾಡಿದೆ. ಉಗ್ರರನ್ನು ಛೂ ಬಿಟ್ಟು ಭಾರತೀಯ ಸೈನಿಕರು ಹಾಗೂ ಜನರನ್ನು ಹತ್ಯೆ ಮಾಡಿದೆ.

ಅಷ್ಟೇ ಅಲ್ಲ, ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ದಿನದಂದೂ ಸಹ ಪಾಕಿಸ್ತಾನ ಗಡಿಯಲ್ಲಿ ಅಪ್ರಚೋದಿತ ದಾಳಿ ಮಾಡಿ ಭಾರತೀಯ ಯೋಧರೊಬ್ಬರನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಭಾರತ ಸಂಪ್ರದಾಯದಂತೆ ಪಾಕಿಸ್ತಾನಕ್ಕೆ ಸಿಹಿ ನೀಡದೆ ಪ್ರತಿಭಟನೆ ವ್ಯಕ್ತಪಡಿಸಿದೆ.

ಪ್ರತಿ ವರ್ಷವೂ ವಾಘಾ ಗಡಿಯಲ್ಲಿ ಭಾರತದ ಬಿಎಸ್ಎಫ್ ಯೋಧರು ಪಾಕಿಸ್ತಾನಿ ಸೈನಿಕರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆಯುತ್ತಿದ್ದರು. ಪಾಕಿಸ್ತಾನಿ ಸೈನಿಕರು ಸಹ ಭಾರತೀಯ ಯೋಧರಿಗೆ ಸಿಹಿ ಹಂಚುತ್ತಿದ್ದರು. ಆದರೆ ಈ ಬಾರಿ ಪಾಕಿಸ್ತಾನ ಹಬ್ಬವೂ ಎನ್ನದೆ, ಶಾಂತಿ ಮಾತುಕತೆ ಮರೆತು ದಾಳಿ ಮಾಡಿದ ಹಿನ್ನೆಲೆಯಲ್ಲಿ ಸಿಹಿ ನೀಡಿಲ್ಲ. ಪಾಕಿಸ್ತಾನಿ ಸೈನಿಕರು ಸಹ ಭಾರತೀಯ ಯೋಧರಿಗೆ ಸಿಹಿ ವಿತರಣೆ ಮಾಡಿಲ್ಲ.

ಇನ್ನು ರಂಜಾನ್ ದಿನವಾದ ಶನಿವಾರವೂ ಪಾಕಿಸ್ತಾನ, ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆ, ನೌಶೇರಾ ಪ್ರದೇಶದಲ್ಲಿ ಗಡಿ ನಿಯಮ ಉಲ್ಲಂಘಿಸಿ ಅಪ್ರಚೋದಿತವಾಗಿ ದಾಳಿ ಮಾಡಿದ್ದು, ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಅಲ್ಲದೆ ಕಳೆದೊಂದು ತಿಂಗಳಿಂದ ಹಲವು ಬಾರಿ ಪಾಕಿಸ್ತಾನಿ ಸೈನಿಕರು ಹಾಗೂ ಉಗ್ರರು ದಾಳಿ ಮಾಡಿ ಉದ್ಧಟತನ ಮಾಡಿದ್ದಾರೆ. ಭಾರತವೂ ಇದಕ್ಕೆ ಗುಂಡಿನ ಮೂಲಕವೇ ಪ್ರತ್ಯುತ್ತರ ನೀಡಿದೆ.

  • Share On Facebook
  • Tweet It


- Advertisement -


Trending Now
ಮಾಹುಅ ಮೊಯಿತ್ರಾ ಅವರಿಗೆ ಸಿಕ್ಕಿಬೀಳಲ್ಲ ಎಂಬ ಧೈರ್ಯ ಇತ್ತಾ?
Tulunadu News December 9, 2023
ಪಾಲಕ್ಕಾಡಿನಲ್ಲಿ ನಡೆಯಿತು ರೈಲ್ವೆ ಬಳಕೆದಾರರ ಸಭೆ!
Tulunadu News December 8, 2023
Leave A Reply

  • Recent Posts

    • ಮಾಹುಅ ಮೊಯಿತ್ರಾ ಅವರಿಗೆ ಸಿಕ್ಕಿಬೀಳಲ್ಲ ಎಂಬ ಧೈರ್ಯ ಇತ್ತಾ?
    • ಪಾಲಕ್ಕಾಡಿನಲ್ಲಿ ನಡೆಯಿತು ರೈಲ್ವೆ ಬಳಕೆದಾರರ ಸಭೆ!
    • ಕೆಮ್ಮಿನ ಸಿರಫ್ ಎಂದು ಬಿಯರ್ ಮಾರಿ 42 ಕೋಟಿ ಸಂಪಾದನೆ!
    • ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
  • Popular Posts

    • 1
      ಮಾಹುಅ ಮೊಯಿತ್ರಾ ಅವರಿಗೆ ಸಿಕ್ಕಿಬೀಳಲ್ಲ ಎಂಬ ಧೈರ್ಯ ಇತ್ತಾ?
    • 2
      ಪಾಲಕ್ಕಾಡಿನಲ್ಲಿ ನಡೆಯಿತು ರೈಲ್ವೆ ಬಳಕೆದಾರರ ಸಭೆ!
    • 3
      ಕೆಮ್ಮಿನ ಸಿರಫ್ ಎಂದು ಬಿಯರ್ ಮಾರಿ 42 ಕೋಟಿ ಸಂಪಾದನೆ!
    • 4
      ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 5
      9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search