• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಂಜಾನ್ ದಿನವೂ ಕದನವಿರಾಮ ಉಲ್ಲಂಘನೆ, ಪಾಕಿಸ್ತಾನಿ ಸೈನಿಕರಿಗೆ ಸಿಹಿ ನೀಡದ ಭಾರತ!

TNN Correspondent Posted On June 16, 2018
0


0
Shares
  • Share On Facebook
  • Tweet It

ರಂಜಾನ್ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಭಾರತವೇನೋ ಉಗ್ರರ ವಿರುದ್ಧದ ಕಾರ್ಯಾಚರಣೆ ನಡೆಸದೆ ಪಾಕಿಸ್ತಾನ ಹಾಗೂ ಕಾಶ್ಮೀರದಲ ಜತೆ ಸೌಹಾರ್ದ ಬೆಳೆಸಲು ಮುಂದಾಗಿದ್ದರೆ, ಅತ್ತ ಕುತಂತ್ರಿ ಪಾಕಿಸ್ತಾನ ಮಾತ್ರ ಇದನ್ನೇ ದುರ್ಬಳಕೆ ಮಾಡಿಕೊಂಡು ಇಷ್ಟು ದಿನ ಅಪ್ರಚೋದಿತ ದಾಳಿ ಮಾಡಿದೆ. ಉಗ್ರರನ್ನು ಛೂ ಬಿಟ್ಟು ಭಾರತೀಯ ಸೈನಿಕರು ಹಾಗೂ ಜನರನ್ನು ಹತ್ಯೆ ಮಾಡಿದೆ.

ಅಷ್ಟೇ ಅಲ್ಲ, ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ದಿನದಂದೂ ಸಹ ಪಾಕಿಸ್ತಾನ ಗಡಿಯಲ್ಲಿ ಅಪ್ರಚೋದಿತ ದಾಳಿ ಮಾಡಿ ಭಾರತೀಯ ಯೋಧರೊಬ್ಬರನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಭಾರತ ಸಂಪ್ರದಾಯದಂತೆ ಪಾಕಿಸ್ತಾನಕ್ಕೆ ಸಿಹಿ ನೀಡದೆ ಪ್ರತಿಭಟನೆ ವ್ಯಕ್ತಪಡಿಸಿದೆ.

ಪ್ರತಿ ವರ್ಷವೂ ವಾಘಾ ಗಡಿಯಲ್ಲಿ ಭಾರತದ ಬಿಎಸ್ಎಫ್ ಯೋಧರು ಪಾಕಿಸ್ತಾನಿ ಸೈನಿಕರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆಯುತ್ತಿದ್ದರು. ಪಾಕಿಸ್ತಾನಿ ಸೈನಿಕರು ಸಹ ಭಾರತೀಯ ಯೋಧರಿಗೆ ಸಿಹಿ ಹಂಚುತ್ತಿದ್ದರು. ಆದರೆ ಈ ಬಾರಿ ಪಾಕಿಸ್ತಾನ ಹಬ್ಬವೂ ಎನ್ನದೆ, ಶಾಂತಿ ಮಾತುಕತೆ ಮರೆತು ದಾಳಿ ಮಾಡಿದ ಹಿನ್ನೆಲೆಯಲ್ಲಿ ಸಿಹಿ ನೀಡಿಲ್ಲ. ಪಾಕಿಸ್ತಾನಿ ಸೈನಿಕರು ಸಹ ಭಾರತೀಯ ಯೋಧರಿಗೆ ಸಿಹಿ ವಿತರಣೆ ಮಾಡಿಲ್ಲ.

ಇನ್ನು ರಂಜಾನ್ ದಿನವಾದ ಶನಿವಾರವೂ ಪಾಕಿಸ್ತಾನ, ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆ, ನೌಶೇರಾ ಪ್ರದೇಶದಲ್ಲಿ ಗಡಿ ನಿಯಮ ಉಲ್ಲಂಘಿಸಿ ಅಪ್ರಚೋದಿತವಾಗಿ ದಾಳಿ ಮಾಡಿದ್ದು, ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಅಲ್ಲದೆ ಕಳೆದೊಂದು ತಿಂಗಳಿಂದ ಹಲವು ಬಾರಿ ಪಾಕಿಸ್ತಾನಿ ಸೈನಿಕರು ಹಾಗೂ ಉಗ್ರರು ದಾಳಿ ಮಾಡಿ ಉದ್ಧಟತನ ಮಾಡಿದ್ದಾರೆ. ಭಾರತವೂ ಇದಕ್ಕೆ ಗುಂಡಿನ ಮೂಲಕವೇ ಪ್ರತ್ಯುತ್ತರ ನೀಡಿದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search