• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಂಜಾನ್ ದಿನವೂ ಕದನವಿರಾಮ ಉಲ್ಲಂಘನೆ, ಪಾಕಿಸ್ತಾನಿ ಸೈನಿಕರಿಗೆ ಸಿಹಿ ನೀಡದ ಭಾರತ!

TNN Correspondent Posted On June 16, 2018


  • Share On Facebook
  • Tweet It

ರಂಜಾನ್ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಭಾರತವೇನೋ ಉಗ್ರರ ವಿರುದ್ಧದ ಕಾರ್ಯಾಚರಣೆ ನಡೆಸದೆ ಪಾಕಿಸ್ತಾನ ಹಾಗೂ ಕಾಶ್ಮೀರದಲ ಜತೆ ಸೌಹಾರ್ದ ಬೆಳೆಸಲು ಮುಂದಾಗಿದ್ದರೆ, ಅತ್ತ ಕುತಂತ್ರಿ ಪಾಕಿಸ್ತಾನ ಮಾತ್ರ ಇದನ್ನೇ ದುರ್ಬಳಕೆ ಮಾಡಿಕೊಂಡು ಇಷ್ಟು ದಿನ ಅಪ್ರಚೋದಿತ ದಾಳಿ ಮಾಡಿದೆ. ಉಗ್ರರನ್ನು ಛೂ ಬಿಟ್ಟು ಭಾರತೀಯ ಸೈನಿಕರು ಹಾಗೂ ಜನರನ್ನು ಹತ್ಯೆ ಮಾಡಿದೆ.

ಅಷ್ಟೇ ಅಲ್ಲ, ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ದಿನದಂದೂ ಸಹ ಪಾಕಿಸ್ತಾನ ಗಡಿಯಲ್ಲಿ ಅಪ್ರಚೋದಿತ ದಾಳಿ ಮಾಡಿ ಭಾರತೀಯ ಯೋಧರೊಬ್ಬರನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಭಾರತ ಸಂಪ್ರದಾಯದಂತೆ ಪಾಕಿಸ್ತಾನಕ್ಕೆ ಸಿಹಿ ನೀಡದೆ ಪ್ರತಿಭಟನೆ ವ್ಯಕ್ತಪಡಿಸಿದೆ.

ಪ್ರತಿ ವರ್ಷವೂ ವಾಘಾ ಗಡಿಯಲ್ಲಿ ಭಾರತದ ಬಿಎಸ್ಎಫ್ ಯೋಧರು ಪಾಕಿಸ್ತಾನಿ ಸೈನಿಕರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆಯುತ್ತಿದ್ದರು. ಪಾಕಿಸ್ತಾನಿ ಸೈನಿಕರು ಸಹ ಭಾರತೀಯ ಯೋಧರಿಗೆ ಸಿಹಿ ಹಂಚುತ್ತಿದ್ದರು. ಆದರೆ ಈ ಬಾರಿ ಪಾಕಿಸ್ತಾನ ಹಬ್ಬವೂ ಎನ್ನದೆ, ಶಾಂತಿ ಮಾತುಕತೆ ಮರೆತು ದಾಳಿ ಮಾಡಿದ ಹಿನ್ನೆಲೆಯಲ್ಲಿ ಸಿಹಿ ನೀಡಿಲ್ಲ. ಪಾಕಿಸ್ತಾನಿ ಸೈನಿಕರು ಸಹ ಭಾರತೀಯ ಯೋಧರಿಗೆ ಸಿಹಿ ವಿತರಣೆ ಮಾಡಿಲ್ಲ.

ಇನ್ನು ರಂಜಾನ್ ದಿನವಾದ ಶನಿವಾರವೂ ಪಾಕಿಸ್ತಾನ, ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆ, ನೌಶೇರಾ ಪ್ರದೇಶದಲ್ಲಿ ಗಡಿ ನಿಯಮ ಉಲ್ಲಂಘಿಸಿ ಅಪ್ರಚೋದಿತವಾಗಿ ದಾಳಿ ಮಾಡಿದ್ದು, ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಅಲ್ಲದೆ ಕಳೆದೊಂದು ತಿಂಗಳಿಂದ ಹಲವು ಬಾರಿ ಪಾಕಿಸ್ತಾನಿ ಸೈನಿಕರು ಹಾಗೂ ಉಗ್ರರು ದಾಳಿ ಮಾಡಿ ಉದ್ಧಟತನ ಮಾಡಿದ್ದಾರೆ. ಭಾರತವೂ ಇದಕ್ಕೆ ಗುಂಡಿನ ಮೂಲಕವೇ ಪ್ರತ್ಯುತ್ತರ ನೀಡಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search