• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನ್ಯದ ಬಗ್ಗೆ ಹಗುರವಾಗಿ ಮಾತನಾಡುವವರೇ ನೆನಪಿಡಿ, ಇಂಥವರಿಂದಲೇ ನಾವು ಮನೆಯಲ್ಲಿ ಬೆಚ್ಚಗೆ ಮಲಗೋದು!

TNN Correspondent Posted On June 17, 2018
0


0
Shares
  • Share On Facebook
  • Tweet It

ಸೈನಿಕನಾಗಿ ಜಮ್ಮು-ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುವುದು ಎಂದರೆ ಅದು ಸಾವಿನ ಜತೆಯೇ ಸರಸ ಆಡಿದಂತೆ. ಇದೇ ಕಾರಣಕ್ಕಾಗಿ ದಿನಬೆಳಗಾದರೆ ಅಷ್ಟು ಯೋಧರು ಹುತಾತ್ಮರಾದರು, ಇಷ್ಟು ಯೋಧರು ದೇಶಕ್ಕಾಗಿ ಮಡಿದರು ಎಂಬ ಸುದ್ದಿ ಓದುತ್ತೇವೆ ಹಾಗೂ ನಮ್ಮ ಮನದಲ್ಲೇ ಅವರಿಗೊಂದು ಪುಟ್ಟ ಸೆಲ್ಯೂಟ್ ಹೊಡೆದು ಸುಮ್ಮನಾಗುತ್ತೇವೆ.

ಆದರೂಇತ್ತೀಚೆಗೆ ಕೆಲವು ಎಡಬಿಡಂಗಿಗಳು, ರಾಜಕಾರಣಿಗಳು ಸೇನೆಯ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ಬರೀ ಹೊಟ್ಟೆಪಾಡಿಗಾಗಿ ಜನ ಯೋಧರಾಗುತ್ತಾರೆ ಎಂದು ಕೃತಘ್ನರಾಗಿ ಮಾತನಾಡುತ್ತಾರೆ. ನಾವು ಮನೆಯಲ್ಲಿ ಬೆಚ್ಚಗೆ ಮಲಗುವ ಹಿಂದೆ, ನಮ್ಮ ಉತ್ತಮ ನಾಳೆಗಳಿಗಾಗಿ ಯೋಧರು ತಮ್ಮ ಇಂದಿನ ನೆಮ್ಮದಿ ಅಡವಿಡುತ್ತಾರೆ ಎಂಬುದನ್ನು ಮರೆತುಬಿಡುತ್ತಾರೆ.

ಆದರೇನಂತೆ ನಮ್ಮ ಸೈನಿಕರು ಎಂದಿಗೂ ದೇಶಕ್ಕಾಗಿ ಹೋರಾಡುವುದನ್ನು ಮಾತ್ರ ಬಿಟ್ಟಿಲ್ಲ. ಇದಕ್ಕೆ ನಿದರ್ಶನವಾಗಿ ಮೊನ್ನೆ ಕಾಶ್ಮೀರದಲ್ಲಿ ಉಗ್ರರಿಂದ ಅಪಹರಣಕ್ಕೊಳಗಾಗಿ, ಹತ್ಯೆಗೀಡಾದ ಔರಂಗಜೇಬ್ ಅವರು ಹುತಾತ್ಮರಾದ ವಿಷಯ ಹಾಗೂ ಅದರ ನಂತರದ ಬೆಳವಣಿಗೆಗಳು ಮನ ಮಿಡಿಯುವಂತಿವೆ.

ಯಾವುದೇ ಕುಟುಂಬವಾಗಲಿ, ಯಾವುದೇ ಅಪ್ಪನಾಗಲಿ, ಅಣ್ಣನಾಗಲಿ, ತಮ್ಮ ಸಂಬಂಧಿ ಸೇನೆ ಸೇರಿ ಹುತಾತ್ಮರಾದರೆ ಹೆಮ್ಮೆಯ ಜತೆಗೆ ಸಾಗರದಷ್ಟು ದುಃಖ ಆವರಿಸುತ್ತದೆ. ಆದರೆ, ಆ ದುಃಖ ಎಲ್ಲವನ್ನೂ ಮರೆತ ಔರಂಗಜೇಬ್ ಅಪ್ಪ ಮೊಹಮ್ಮದ್ ಹನೀಫ್ ಮಾತ್ರ ನನ್ನ ಮಗ ಹುತಾತ್ಮನಾಗಿರಬಹುದು, ಹಾಗಂತ ಬೇರೆಯವರು ತಮ್ಮ ಮಕ್ಕಳನ್ನು ಸೇನೆಗೆ ಕಳುಹಿಸದೇ ಇರದಿರಿ. ನನ್ನ ಮಗನ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ಹೇಳುವ ಮೂಲಕ ದೇಶಪ್ರೇಮ ಮೆರೆದಿದ್ದಾರೆ.

ಇನ್ನು ಔರಂಗಜೇಬ್ ಅವರ ಸಹೋದರನದ್ದೂ ಇದೇ ಮಾತು. ಮೊಹಮ್ಮದ್ ಖಾಸಿಂ ಸಹ ಸೈನಿಕನಾಗಿದ್ದು, ನಮ್ಮದು ಯೋಧರ ಕುಟುಂಬ. ನನ್ನ ತಮ್ಮನ ಜೀವ ತೆಗೆದ ನೂರು ಉಗ್ರರ ಚೆಂಡಾಡುತ್ತೇನೆ ಎನ್ನುವ ಮೂಲಕ ಎಲ್ಲರೂ ಹೆಮ್ಮೆಪಡುವ ಮಾತುಗಳನ್ನಾಡಿದ್ದಾರೆ. ಹೇಳಿ ಇಂತಹ ವೀರ ಗಂಡುಮಕ್ಕಳ ತ್ಯಾಗದಿಂದಲೇ ನಾವು ಮನೆಯಲ್ಲಿ ಬೆಚ್ಚಗೆ ಮಲಗುತ್ತೇವೆ ಅಲ್ಲವೇ? ಇಂತಹ ಹೆಮ್ಮೆಯ ಪುತ್ರರ ಬಗ್ಗೆ ನಾವೂ ಹಗುರವಾಗಿ ಮಾತನಾಡಬಾರದಲ್ಲವೇ? ಯೋಚಿಸಿ ನೋಡಿ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search