• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನ್ಯದ ಬಗ್ಗೆ ಹಗುರವಾಗಿ ಮಾತನಾಡುವವರೇ ನೆನಪಿಡಿ, ಇಂಥವರಿಂದಲೇ ನಾವು ಮನೆಯಲ್ಲಿ ಬೆಚ್ಚಗೆ ಮಲಗೋದು!

TNN Correspondent Posted On June 17, 2018
0


0
Shares
  • Share On Facebook
  • Tweet It

ಸೈನಿಕನಾಗಿ ಜಮ್ಮು-ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುವುದು ಎಂದರೆ ಅದು ಸಾವಿನ ಜತೆಯೇ ಸರಸ ಆಡಿದಂತೆ. ಇದೇ ಕಾರಣಕ್ಕಾಗಿ ದಿನಬೆಳಗಾದರೆ ಅಷ್ಟು ಯೋಧರು ಹುತಾತ್ಮರಾದರು, ಇಷ್ಟು ಯೋಧರು ದೇಶಕ್ಕಾಗಿ ಮಡಿದರು ಎಂಬ ಸುದ್ದಿ ಓದುತ್ತೇವೆ ಹಾಗೂ ನಮ್ಮ ಮನದಲ್ಲೇ ಅವರಿಗೊಂದು ಪುಟ್ಟ ಸೆಲ್ಯೂಟ್ ಹೊಡೆದು ಸುಮ್ಮನಾಗುತ್ತೇವೆ.

ಆದರೂಇತ್ತೀಚೆಗೆ ಕೆಲವು ಎಡಬಿಡಂಗಿಗಳು, ರಾಜಕಾರಣಿಗಳು ಸೇನೆಯ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ಬರೀ ಹೊಟ್ಟೆಪಾಡಿಗಾಗಿ ಜನ ಯೋಧರಾಗುತ್ತಾರೆ ಎಂದು ಕೃತಘ್ನರಾಗಿ ಮಾತನಾಡುತ್ತಾರೆ. ನಾವು ಮನೆಯಲ್ಲಿ ಬೆಚ್ಚಗೆ ಮಲಗುವ ಹಿಂದೆ, ನಮ್ಮ ಉತ್ತಮ ನಾಳೆಗಳಿಗಾಗಿ ಯೋಧರು ತಮ್ಮ ಇಂದಿನ ನೆಮ್ಮದಿ ಅಡವಿಡುತ್ತಾರೆ ಎಂಬುದನ್ನು ಮರೆತುಬಿಡುತ್ತಾರೆ.

ಆದರೇನಂತೆ ನಮ್ಮ ಸೈನಿಕರು ಎಂದಿಗೂ ದೇಶಕ್ಕಾಗಿ ಹೋರಾಡುವುದನ್ನು ಮಾತ್ರ ಬಿಟ್ಟಿಲ್ಲ. ಇದಕ್ಕೆ ನಿದರ್ಶನವಾಗಿ ಮೊನ್ನೆ ಕಾಶ್ಮೀರದಲ್ಲಿ ಉಗ್ರರಿಂದ ಅಪಹರಣಕ್ಕೊಳಗಾಗಿ, ಹತ್ಯೆಗೀಡಾದ ಔರಂಗಜೇಬ್ ಅವರು ಹುತಾತ್ಮರಾದ ವಿಷಯ ಹಾಗೂ ಅದರ ನಂತರದ ಬೆಳವಣಿಗೆಗಳು ಮನ ಮಿಡಿಯುವಂತಿವೆ.

ಯಾವುದೇ ಕುಟುಂಬವಾಗಲಿ, ಯಾವುದೇ ಅಪ್ಪನಾಗಲಿ, ಅಣ್ಣನಾಗಲಿ, ತಮ್ಮ ಸಂಬಂಧಿ ಸೇನೆ ಸೇರಿ ಹುತಾತ್ಮರಾದರೆ ಹೆಮ್ಮೆಯ ಜತೆಗೆ ಸಾಗರದಷ್ಟು ದುಃಖ ಆವರಿಸುತ್ತದೆ. ಆದರೆ, ಆ ದುಃಖ ಎಲ್ಲವನ್ನೂ ಮರೆತ ಔರಂಗಜೇಬ್ ಅಪ್ಪ ಮೊಹಮ್ಮದ್ ಹನೀಫ್ ಮಾತ್ರ ನನ್ನ ಮಗ ಹುತಾತ್ಮನಾಗಿರಬಹುದು, ಹಾಗಂತ ಬೇರೆಯವರು ತಮ್ಮ ಮಕ್ಕಳನ್ನು ಸೇನೆಗೆ ಕಳುಹಿಸದೇ ಇರದಿರಿ. ನನ್ನ ಮಗನ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ಹೇಳುವ ಮೂಲಕ ದೇಶಪ್ರೇಮ ಮೆರೆದಿದ್ದಾರೆ.

ಇನ್ನು ಔರಂಗಜೇಬ್ ಅವರ ಸಹೋದರನದ್ದೂ ಇದೇ ಮಾತು. ಮೊಹಮ್ಮದ್ ಖಾಸಿಂ ಸಹ ಸೈನಿಕನಾಗಿದ್ದು, ನಮ್ಮದು ಯೋಧರ ಕುಟುಂಬ. ನನ್ನ ತಮ್ಮನ ಜೀವ ತೆಗೆದ ನೂರು ಉಗ್ರರ ಚೆಂಡಾಡುತ್ತೇನೆ ಎನ್ನುವ ಮೂಲಕ ಎಲ್ಲರೂ ಹೆಮ್ಮೆಪಡುವ ಮಾತುಗಳನ್ನಾಡಿದ್ದಾರೆ. ಹೇಳಿ ಇಂತಹ ವೀರ ಗಂಡುಮಕ್ಕಳ ತ್ಯಾಗದಿಂದಲೇ ನಾವು ಮನೆಯಲ್ಲಿ ಬೆಚ್ಚಗೆ ಮಲಗುತ್ತೇವೆ ಅಲ್ಲವೇ? ಇಂತಹ ಹೆಮ್ಮೆಯ ಪುತ್ರರ ಬಗ್ಗೆ ನಾವೂ ಹಗುರವಾಗಿ ಮಾತನಾಡಬಾರದಲ್ಲವೇ? ಯೋಚಿಸಿ ನೋಡಿ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search