• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನ್ಯದ ಬಗ್ಗೆ ಹಗುರವಾಗಿ ಮಾತನಾಡುವವರೇ ನೆನಪಿಡಿ, ಇಂಥವರಿಂದಲೇ ನಾವು ಮನೆಯಲ್ಲಿ ಬೆಚ್ಚಗೆ ಮಲಗೋದು!

TNN Correspondent Posted On June 17, 2018
0


0
Shares
  • Share On Facebook
  • Tweet It

ಸೈನಿಕನಾಗಿ ಜಮ್ಮು-ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುವುದು ಎಂದರೆ ಅದು ಸಾವಿನ ಜತೆಯೇ ಸರಸ ಆಡಿದಂತೆ. ಇದೇ ಕಾರಣಕ್ಕಾಗಿ ದಿನಬೆಳಗಾದರೆ ಅಷ್ಟು ಯೋಧರು ಹುತಾತ್ಮರಾದರು, ಇಷ್ಟು ಯೋಧರು ದೇಶಕ್ಕಾಗಿ ಮಡಿದರು ಎಂಬ ಸುದ್ದಿ ಓದುತ್ತೇವೆ ಹಾಗೂ ನಮ್ಮ ಮನದಲ್ಲೇ ಅವರಿಗೊಂದು ಪುಟ್ಟ ಸೆಲ್ಯೂಟ್ ಹೊಡೆದು ಸುಮ್ಮನಾಗುತ್ತೇವೆ.

ಆದರೂಇತ್ತೀಚೆಗೆ ಕೆಲವು ಎಡಬಿಡಂಗಿಗಳು, ರಾಜಕಾರಣಿಗಳು ಸೇನೆಯ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ಬರೀ ಹೊಟ್ಟೆಪಾಡಿಗಾಗಿ ಜನ ಯೋಧರಾಗುತ್ತಾರೆ ಎಂದು ಕೃತಘ್ನರಾಗಿ ಮಾತನಾಡುತ್ತಾರೆ. ನಾವು ಮನೆಯಲ್ಲಿ ಬೆಚ್ಚಗೆ ಮಲಗುವ ಹಿಂದೆ, ನಮ್ಮ ಉತ್ತಮ ನಾಳೆಗಳಿಗಾಗಿ ಯೋಧರು ತಮ್ಮ ಇಂದಿನ ನೆಮ್ಮದಿ ಅಡವಿಡುತ್ತಾರೆ ಎಂಬುದನ್ನು ಮರೆತುಬಿಡುತ್ತಾರೆ.

ಆದರೇನಂತೆ ನಮ್ಮ ಸೈನಿಕರು ಎಂದಿಗೂ ದೇಶಕ್ಕಾಗಿ ಹೋರಾಡುವುದನ್ನು ಮಾತ್ರ ಬಿಟ್ಟಿಲ್ಲ. ಇದಕ್ಕೆ ನಿದರ್ಶನವಾಗಿ ಮೊನ್ನೆ ಕಾಶ್ಮೀರದಲ್ಲಿ ಉಗ್ರರಿಂದ ಅಪಹರಣಕ್ಕೊಳಗಾಗಿ, ಹತ್ಯೆಗೀಡಾದ ಔರಂಗಜೇಬ್ ಅವರು ಹುತಾತ್ಮರಾದ ವಿಷಯ ಹಾಗೂ ಅದರ ನಂತರದ ಬೆಳವಣಿಗೆಗಳು ಮನ ಮಿಡಿಯುವಂತಿವೆ.

ಯಾವುದೇ ಕುಟುಂಬವಾಗಲಿ, ಯಾವುದೇ ಅಪ್ಪನಾಗಲಿ, ಅಣ್ಣನಾಗಲಿ, ತಮ್ಮ ಸಂಬಂಧಿ ಸೇನೆ ಸೇರಿ ಹುತಾತ್ಮರಾದರೆ ಹೆಮ್ಮೆಯ ಜತೆಗೆ ಸಾಗರದಷ್ಟು ದುಃಖ ಆವರಿಸುತ್ತದೆ. ಆದರೆ, ಆ ದುಃಖ ಎಲ್ಲವನ್ನೂ ಮರೆತ ಔರಂಗಜೇಬ್ ಅಪ್ಪ ಮೊಹಮ್ಮದ್ ಹನೀಫ್ ಮಾತ್ರ ನನ್ನ ಮಗ ಹುತಾತ್ಮನಾಗಿರಬಹುದು, ಹಾಗಂತ ಬೇರೆಯವರು ತಮ್ಮ ಮಕ್ಕಳನ್ನು ಸೇನೆಗೆ ಕಳುಹಿಸದೇ ಇರದಿರಿ. ನನ್ನ ಮಗನ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ಹೇಳುವ ಮೂಲಕ ದೇಶಪ್ರೇಮ ಮೆರೆದಿದ್ದಾರೆ.

ಇನ್ನು ಔರಂಗಜೇಬ್ ಅವರ ಸಹೋದರನದ್ದೂ ಇದೇ ಮಾತು. ಮೊಹಮ್ಮದ್ ಖಾಸಿಂ ಸಹ ಸೈನಿಕನಾಗಿದ್ದು, ನಮ್ಮದು ಯೋಧರ ಕುಟುಂಬ. ನನ್ನ ತಮ್ಮನ ಜೀವ ತೆಗೆದ ನೂರು ಉಗ್ರರ ಚೆಂಡಾಡುತ್ತೇನೆ ಎನ್ನುವ ಮೂಲಕ ಎಲ್ಲರೂ ಹೆಮ್ಮೆಪಡುವ ಮಾತುಗಳನ್ನಾಡಿದ್ದಾರೆ. ಹೇಳಿ ಇಂತಹ ವೀರ ಗಂಡುಮಕ್ಕಳ ತ್ಯಾಗದಿಂದಲೇ ನಾವು ಮನೆಯಲ್ಲಿ ಬೆಚ್ಚಗೆ ಮಲಗುತ್ತೇವೆ ಅಲ್ಲವೇ? ಇಂತಹ ಹೆಮ್ಮೆಯ ಪುತ್ರರ ಬಗ್ಗೆ ನಾವೂ ಹಗುರವಾಗಿ ಮಾತನಾಡಬಾರದಲ್ಲವೇ? ಯೋಚಿಸಿ ನೋಡಿ.

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search