• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಲ್ಲು ತೂರಾಟಗಾರರಿಂದ ಸೈನಿಕರ ರಕ್ಷಣೆಗೆ ದೇಹರಕ್ಷಕ ಅಸ್ತ್ರ ನೀಡಲು ಕೇಂದ್ರ ಸರ್ಕಾರದ ನಿರ್ಧಾರ

TNN Correspondent Posted On June 17, 2018
0


0
Shares
  • Share On Facebook
  • Tweet It

ದೆಹಲಿ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಪ್ರತ್ಯೇಕತವಾದಿಗಳು, ಭಯೋತ್ಪಾಕರ ಕುತಂತ್ರದಿಂದ ಸೈನಿಕರ ಮೇಲೆ ಕಲ್ಲು ತೂರಾಟ ಪ್ರಕರಣಗಳು ಹೆಚ್ಚುತ್ತಿದ್ದು, ಸೈನಿಕರಿಗೆ ಹಾನಿಯಾಗುತ್ತಿರುವುದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಸೈನಿಕರ ರಕ್ಷಣೆಗಾಗಿ ಇಡೀ ದೇಹವನ್ನು ಕಲ್ಲುಗಳಿಂದ ರಕ್ಷಿಸುವ ದೇಹರಕ್ಷಕ ಧಿರಿಸುಗಳನ್ನು ಕೇಂದ್ರ ಸರ್ಕಾರ ನೀಡಲು ನಿರ್ಧರಿಸಿದೆ. ಈ ಮೂಲಕ ಜಮ್ಮು ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸುತ್ತಿರುವವ ವಿರುದ್ಧ ದಿಟ್ಟ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಡಿ ಇಟ್ಟಿದೆ.

ಸೈನಿಕರ ರಕ್ಷಣೆಗಾಗಿ ಸಿದ್ಧಪಡಿಸಿರುವ ಈ ಧಿರಿಸುಗಳ ಮೇಲೆ ‘ಕಲ್ಲು ತೂರಾಟ, ಕೆರೋಸಿನ್ ದಾಳಿ, ಪೆಟ್ರೋಲ್ ಬಾಂಬ್ ದಾಳಿ, ಕೆಮಿಕಲ್ ದಾಳಿ ಸೇರಿ ನಾನಾ ತರಹದ ದಾಳಿಗಳಿಂದ ರಕ್ಷಣೆ ನೀಡುತ್ತವೆ. ಅಲ್ಲದೇ ಕಣಿವೆಯಲ್ಲಿರುವ ಮೈಕೊರೆಯುವ ಚಳಿಯಿಂದಲೂ ಈ ಧಿರಿಸುಗಳು ರಕ್ಷಣೆ ನೀಡಲಿದ್ದು, ಮೈನಸ್ 20 ಸೆಲ್ಸಿಯಸ್ ನಿಂದ 55 ಸೆಲ್ಸಿಯಸ್ ವರೆಗೆ ಚಳಿಯಿಂದ 5 ಗಂಟೆವರೆಗೆ ರಕ್ಷಣೆ ನೀಡಲಿದೆ.

ಕಾಶ್ಮೀರದ ಗಲಭೆ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಸಿಆರ್ ಫಿಎಫ್ ಸೈನಿಕರಿಗೆ ಇಡೀ ದೇಹವನ್ನು ರಕ್ಷಿಸುವ ಈ ಧಿರಿಸುಗಳನ್ನು ನೀಡಲು ನಿರ್ಧರಿಸಲಾಗಿದೆ. ಸಿಆರ್ ಫಿಎಫ್ ಜಮ್ಮು ಕಾಶ್ಮೀರದಲ್ಲಿ ಗಲಭೆ ನಿಯಂತ್ರಿಸಲು ಮತ್ತು ತುರ್ತು ಸಂದರ್ಭದಲ್ಲಿ ಕಾರ್ಯಾಚರಣೆಗೆ ಇಳಿಯುತ್ತಿದ್ದು, ಸಿಆರ್ ಫಿಎಫ್ ಪಡೆಗೆ ಆರಂಭದಲ್ಲಿ ನೀಡಲಾಗುತ್ತಿದೆ. ಅಲ್ಲದೇ ಜಮ್ಮು ಕಾಶ್ಮೀರದ ಪೊಲೀಸರು ಮತ್ತು ಬಿಎಸ್ ಎಫ್ ಯೋಧರಿಗೆ ವಿತರಿಸಲಾಗುವುದು ಎಂದು ಕೇಂದ್ರ ಗೃಹ ಇಲಾಖೆ ಮೂಲಗಳು ತಿಳಿಸಿವೆ.

ಆರು ಕೆ.ಜಿ.ತೂಕದ ಈ ಧಿರಿಸುಗಳು ಮೂರು ಬೇರೆ ಬೇರೆ ರೀತಿಯ ಸೈಜ್ ಗಳನ್ನು ಹೊಂದಿವೆ. ಮುಖ, ಎದೆ, ತೋಳು,  ಹೊಟ್ಟೆ, ತೊಡೆ ಸೇರಿ ದೇಹದ ಸೂಕ್ಷ್ಮ ಅಂಗಗಳನ್ನು ಈ ನೂತನ ಧಿರಿಸುಗಳು ರಕ್ಷಿಸುತ್ತವೆ ಎಂದು ಮೂಲಗಳು ತಿಳಿಸಿವೆ. ಪ್ರಸಕ್ತ 2018ರ ವರ್ಷದಲ್ಲಿ ಕಲ್ಲು ತೂರಾಟಗಾರರಿಂದ ಸುಮಾರು 3000 ಸಿಆರ್ ಫಿಎಫ್ ಸೈನಿಕರು ಗಾಯಗೊಂಡಿದ್ದಾರೆ. ಆದ್ದರಿಂದ ಸೈನಿಕರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರಿಗೆ ಇಡೀ ದೇಹವನ್ನು ರಕ್ಷಿಸುವ ಧಿರಿಸುಗಳನ್ನು ನೀಡಲು ಮುಂದಾಗಿದೆ.

0
Shares
  • Share On Facebook
  • Tweet It




Trending Now
ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
Tulunadu News July 3, 2025
ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
Tulunadu News July 3, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
  • Popular Posts

    • 1
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 2
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 3
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 4
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 5
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!

  • Privacy Policy
  • Contact
© Tulunadu Infomedia.

Press enter/return to begin your search