• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಲ್ಲು ತೂರಾಟಗಾರರಿಂದ ಸೈನಿಕರ ರಕ್ಷಣೆಗೆ ದೇಹರಕ್ಷಕ ಅಸ್ತ್ರ ನೀಡಲು ಕೇಂದ್ರ ಸರ್ಕಾರದ ನಿರ್ಧಾರ

TNN Correspondent Posted On June 17, 2018
0


0
Shares
  • Share On Facebook
  • Tweet It

ದೆಹಲಿ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಪ್ರತ್ಯೇಕತವಾದಿಗಳು, ಭಯೋತ್ಪಾಕರ ಕುತಂತ್ರದಿಂದ ಸೈನಿಕರ ಮೇಲೆ ಕಲ್ಲು ತೂರಾಟ ಪ್ರಕರಣಗಳು ಹೆಚ್ಚುತ್ತಿದ್ದು, ಸೈನಿಕರಿಗೆ ಹಾನಿಯಾಗುತ್ತಿರುವುದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಸೈನಿಕರ ರಕ್ಷಣೆಗಾಗಿ ಇಡೀ ದೇಹವನ್ನು ಕಲ್ಲುಗಳಿಂದ ರಕ್ಷಿಸುವ ದೇಹರಕ್ಷಕ ಧಿರಿಸುಗಳನ್ನು ಕೇಂದ್ರ ಸರ್ಕಾರ ನೀಡಲು ನಿರ್ಧರಿಸಿದೆ. ಈ ಮೂಲಕ ಜಮ್ಮು ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸುತ್ತಿರುವವ ವಿರುದ್ಧ ದಿಟ್ಟ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಡಿ ಇಟ್ಟಿದೆ.

ಸೈನಿಕರ ರಕ್ಷಣೆಗಾಗಿ ಸಿದ್ಧಪಡಿಸಿರುವ ಈ ಧಿರಿಸುಗಳ ಮೇಲೆ ‘ಕಲ್ಲು ತೂರಾಟ, ಕೆರೋಸಿನ್ ದಾಳಿ, ಪೆಟ್ರೋಲ್ ಬಾಂಬ್ ದಾಳಿ, ಕೆಮಿಕಲ್ ದಾಳಿ ಸೇರಿ ನಾನಾ ತರಹದ ದಾಳಿಗಳಿಂದ ರಕ್ಷಣೆ ನೀಡುತ್ತವೆ. ಅಲ್ಲದೇ ಕಣಿವೆಯಲ್ಲಿರುವ ಮೈಕೊರೆಯುವ ಚಳಿಯಿಂದಲೂ ಈ ಧಿರಿಸುಗಳು ರಕ್ಷಣೆ ನೀಡಲಿದ್ದು, ಮೈನಸ್ 20 ಸೆಲ್ಸಿಯಸ್ ನಿಂದ 55 ಸೆಲ್ಸಿಯಸ್ ವರೆಗೆ ಚಳಿಯಿಂದ 5 ಗಂಟೆವರೆಗೆ ರಕ್ಷಣೆ ನೀಡಲಿದೆ.

ಕಾಶ್ಮೀರದ ಗಲಭೆ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಸಿಆರ್ ಫಿಎಫ್ ಸೈನಿಕರಿಗೆ ಇಡೀ ದೇಹವನ್ನು ರಕ್ಷಿಸುವ ಈ ಧಿರಿಸುಗಳನ್ನು ನೀಡಲು ನಿರ್ಧರಿಸಲಾಗಿದೆ. ಸಿಆರ್ ಫಿಎಫ್ ಜಮ್ಮು ಕಾಶ್ಮೀರದಲ್ಲಿ ಗಲಭೆ ನಿಯಂತ್ರಿಸಲು ಮತ್ತು ತುರ್ತು ಸಂದರ್ಭದಲ್ಲಿ ಕಾರ್ಯಾಚರಣೆಗೆ ಇಳಿಯುತ್ತಿದ್ದು, ಸಿಆರ್ ಫಿಎಫ್ ಪಡೆಗೆ ಆರಂಭದಲ್ಲಿ ನೀಡಲಾಗುತ್ತಿದೆ. ಅಲ್ಲದೇ ಜಮ್ಮು ಕಾಶ್ಮೀರದ ಪೊಲೀಸರು ಮತ್ತು ಬಿಎಸ್ ಎಫ್ ಯೋಧರಿಗೆ ವಿತರಿಸಲಾಗುವುದು ಎಂದು ಕೇಂದ್ರ ಗೃಹ ಇಲಾಖೆ ಮೂಲಗಳು ತಿಳಿಸಿವೆ.

ಆರು ಕೆ.ಜಿ.ತೂಕದ ಈ ಧಿರಿಸುಗಳು ಮೂರು ಬೇರೆ ಬೇರೆ ರೀತಿಯ ಸೈಜ್ ಗಳನ್ನು ಹೊಂದಿವೆ. ಮುಖ, ಎದೆ, ತೋಳು,  ಹೊಟ್ಟೆ, ತೊಡೆ ಸೇರಿ ದೇಹದ ಸೂಕ್ಷ್ಮ ಅಂಗಗಳನ್ನು ಈ ನೂತನ ಧಿರಿಸುಗಳು ರಕ್ಷಿಸುತ್ತವೆ ಎಂದು ಮೂಲಗಳು ತಿಳಿಸಿವೆ. ಪ್ರಸಕ್ತ 2018ರ ವರ್ಷದಲ್ಲಿ ಕಲ್ಲು ತೂರಾಟಗಾರರಿಂದ ಸುಮಾರು 3000 ಸಿಆರ್ ಫಿಎಫ್ ಸೈನಿಕರು ಗಾಯಗೊಂಡಿದ್ದಾರೆ. ಆದ್ದರಿಂದ ಸೈನಿಕರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರಿಗೆ ಇಡೀ ದೇಹವನ್ನು ರಕ್ಷಿಸುವ ಧಿರಿಸುಗಳನ್ನು ನೀಡಲು ಮುಂದಾಗಿದೆ.

0
Shares
  • Share On Facebook
  • Tweet It




Trending Now
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
  • Popular Posts

    • 1
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 2
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 3
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 4
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 5
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search