• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಲ್ಲು ತೂರಾಟಗಾರರಿಂದ ಸೈನಿಕರ ರಕ್ಷಣೆಗೆ ದೇಹರಕ್ಷಕ ಅಸ್ತ್ರ ನೀಡಲು ಕೇಂದ್ರ ಸರ್ಕಾರದ ನಿರ್ಧಾರ

TNN Correspondent Posted On June 17, 2018


  • Share On Facebook
  • Tweet It

ದೆಹಲಿ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಪ್ರತ್ಯೇಕತವಾದಿಗಳು, ಭಯೋತ್ಪಾಕರ ಕುತಂತ್ರದಿಂದ ಸೈನಿಕರ ಮೇಲೆ ಕಲ್ಲು ತೂರಾಟ ಪ್ರಕರಣಗಳು ಹೆಚ್ಚುತ್ತಿದ್ದು, ಸೈನಿಕರಿಗೆ ಹಾನಿಯಾಗುತ್ತಿರುವುದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಸೈನಿಕರ ರಕ್ಷಣೆಗಾಗಿ ಇಡೀ ದೇಹವನ್ನು ಕಲ್ಲುಗಳಿಂದ ರಕ್ಷಿಸುವ ದೇಹರಕ್ಷಕ ಧಿರಿಸುಗಳನ್ನು ಕೇಂದ್ರ ಸರ್ಕಾರ ನೀಡಲು ನಿರ್ಧರಿಸಿದೆ. ಈ ಮೂಲಕ ಜಮ್ಮು ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸುತ್ತಿರುವವ ವಿರುದ್ಧ ದಿಟ್ಟ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಡಿ ಇಟ್ಟಿದೆ.

ಸೈನಿಕರ ರಕ್ಷಣೆಗಾಗಿ ಸಿದ್ಧಪಡಿಸಿರುವ ಈ ಧಿರಿಸುಗಳ ಮೇಲೆ ‘ಕಲ್ಲು ತೂರಾಟ, ಕೆರೋಸಿನ್ ದಾಳಿ, ಪೆಟ್ರೋಲ್ ಬಾಂಬ್ ದಾಳಿ, ಕೆಮಿಕಲ್ ದಾಳಿ ಸೇರಿ ನಾನಾ ತರಹದ ದಾಳಿಗಳಿಂದ ರಕ್ಷಣೆ ನೀಡುತ್ತವೆ. ಅಲ್ಲದೇ ಕಣಿವೆಯಲ್ಲಿರುವ ಮೈಕೊರೆಯುವ ಚಳಿಯಿಂದಲೂ ಈ ಧಿರಿಸುಗಳು ರಕ್ಷಣೆ ನೀಡಲಿದ್ದು, ಮೈನಸ್ 20 ಸೆಲ್ಸಿಯಸ್ ನಿಂದ 55 ಸೆಲ್ಸಿಯಸ್ ವರೆಗೆ ಚಳಿಯಿಂದ 5 ಗಂಟೆವರೆಗೆ ರಕ್ಷಣೆ ನೀಡಲಿದೆ.

ಕಾಶ್ಮೀರದ ಗಲಭೆ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಸಿಆರ್ ಫಿಎಫ್ ಸೈನಿಕರಿಗೆ ಇಡೀ ದೇಹವನ್ನು ರಕ್ಷಿಸುವ ಈ ಧಿರಿಸುಗಳನ್ನು ನೀಡಲು ನಿರ್ಧರಿಸಲಾಗಿದೆ. ಸಿಆರ್ ಫಿಎಫ್ ಜಮ್ಮು ಕಾಶ್ಮೀರದಲ್ಲಿ ಗಲಭೆ ನಿಯಂತ್ರಿಸಲು ಮತ್ತು ತುರ್ತು ಸಂದರ್ಭದಲ್ಲಿ ಕಾರ್ಯಾಚರಣೆಗೆ ಇಳಿಯುತ್ತಿದ್ದು, ಸಿಆರ್ ಫಿಎಫ್ ಪಡೆಗೆ ಆರಂಭದಲ್ಲಿ ನೀಡಲಾಗುತ್ತಿದೆ. ಅಲ್ಲದೇ ಜಮ್ಮು ಕಾಶ್ಮೀರದ ಪೊಲೀಸರು ಮತ್ತು ಬಿಎಸ್ ಎಫ್ ಯೋಧರಿಗೆ ವಿತರಿಸಲಾಗುವುದು ಎಂದು ಕೇಂದ್ರ ಗೃಹ ಇಲಾಖೆ ಮೂಲಗಳು ತಿಳಿಸಿವೆ.

ಆರು ಕೆ.ಜಿ.ತೂಕದ ಈ ಧಿರಿಸುಗಳು ಮೂರು ಬೇರೆ ಬೇರೆ ರೀತಿಯ ಸೈಜ್ ಗಳನ್ನು ಹೊಂದಿವೆ. ಮುಖ, ಎದೆ, ತೋಳು,  ಹೊಟ್ಟೆ, ತೊಡೆ ಸೇರಿ ದೇಹದ ಸೂಕ್ಷ್ಮ ಅಂಗಗಳನ್ನು ಈ ನೂತನ ಧಿರಿಸುಗಳು ರಕ್ಷಿಸುತ್ತವೆ ಎಂದು ಮೂಲಗಳು ತಿಳಿಸಿವೆ. ಪ್ರಸಕ್ತ 2018ರ ವರ್ಷದಲ್ಲಿ ಕಲ್ಲು ತೂರಾಟಗಾರರಿಂದ ಸುಮಾರು 3000 ಸಿಆರ್ ಫಿಎಫ್ ಸೈನಿಕರು ಗಾಯಗೊಂಡಿದ್ದಾರೆ. ಆದ್ದರಿಂದ ಸೈನಿಕರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರಿಗೆ ಇಡೀ ದೇಹವನ್ನು ರಕ್ಷಿಸುವ ಧಿರಿಸುಗಳನ್ನು ನೀಡಲು ಮುಂದಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search