• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತೀಯ ವಾಯುಪಡೆ ಸೇರಿದ ಕರ್ನಾಟಕದ ಮೊದಲ ಮಹಿಳೆ ಎಂಬ ಖ್ಯಾತಿಗೆ ಮೇಘನಾ ಭಾಜನ!

TNN Correspondent Posted On June 17, 2018
0


0
Shares
  • Share On Facebook
  • Tweet It

ಬೆಂಗಳೂರು: ದೇಶದಲ್ಲಿ ದಿನೇದಿನೆ ಮಹಿಳೆಯರ ಸಾಧನೆ ಸಂಖ್ಯೆ ಜಾಸ್ತಿಯಾಗುತ್ತಿದೆ. ಕ್ರೀಡೆ, ವಿಮಾನ, ರಾಜಕೀಯ, ಆಟೋಮೊಬೈಲ್, ಎಂಜಿನಿಯರಿಂಗ್ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಅಗಾಧ ಪ್ರತಿಭೆ ಮೆರೆಯುತ್ತಿದ್ದಾರೆ. ಮಹಿಳೆ ಎಂದರೆ ಅಡುಗೆ ಮನೆಗೆ ಸೀಮಿತವಲ್ಲ, ಆಕೆಯೂ ಯಾವ ಸಾಧನೆ ಬೇಕಾದರೂ ಮಾಡಬಲ್ಲಳು ಎಂಬುದನ್ನು ಸಾಬೀತುಪಡಿಸುತ್ತಿದ್ದಾಳೆ.

ಈಗ ಇಂಥಾದ್ದೇ ಸಾಧನೆಯೊಂದನ್ನು ಕರ್ನಾಟಕದ ಹೆಮ್ಮೆಯ ಯುವತಿಯೊಬ್ಬಳು ಮಾಡುವ ಮೂಲಕ ಪ್ರತಿ ಕನ್ನಡಿಗನೂ ಹೆಮ್ಮೆಪಡುವಂತೆ ಮಾಡಿದ್ದಾರೆ. ಹೌದು, ಚಿಕ್ಕಮಗಳೂರಿನ ಮೇಘನಾ ಭಾಗವಾತ್ ವಾಯುಪಡೆಗೆ ಸೇರುವ ಮೂಲಕ, ವಾಯುಪಡೆ ಸೇರಿದ ಕರ್ನಾಟಕದ ಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನಳಾಗಿದ್ದಾಳೆ.

2017ರಲ್ಲಿ ವಾಯುಪಡೆ ಅಕಾಡೆಮಿ ಸೇರಿದ್ದ ಮೇಘನಾ ಭಾಗವತ, ಶನಿವಾರವಷ್ಟೇ ಯುದ್ಧವಿಮಾನಗಳ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಯುದ್ಧ ವಿಮಾನಗಳ ಪೈಲಟ್ ಆಗಿ ಆಯ್ಕೆಯಾದ 113 ಮಹಿಳೆಯರಲ್ಲಿ ಮೇಘನಾ ಸಹ ಒಬ್ಬಳು ಹಾಗೂ ಇವರೇ ಕರ್ನಾಟಕದಿಂದ ಮೊದಲ ಬಾರಿಗೆ ವಾಯುಪಡೆಗೆ ಆಯ್ಕೆಯಾದವರು ಎಂಬ ಕೀರ್ತಿ ಲಭಿಸಿದೆ.

ಚಿಕ್ಕಮಗಳೂರಿನಲ್ಲಿ ಜನಿಸಿದ ಮೇಘನಾ ಕುಟುಂಬದಲ್ಲಿ ನ್ಯಾಯವಾದಿಗಳೇ ಜಾಸ್ತಿ ಇದ್ದಾರೆ. ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂಬ ದಿಸೆಯಿಂದ 2015ರಲ್ಲಿ ಮೈಸೂರಿನ ಜಯ ಚಾಮರಾಜೇಂದ್ರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮಾಹಿತಿ ವಿಜ್ಞಾನ ಹಾಗೂ ಎಂಜಿನಿಯರಿಂಗ್ ನಲ್ಲಿ ಪದವಿ ಪಡೆದಿದ್ದರು. ಬಳಿಕ ವಾಯುಪಡೆ ಸೇರಿ ಈಗ ಅಮೋಘ ಸಾಧನೆ ಮೆರೆದಿದ್ದಾರೆ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search