• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತೀಯ ವಾಯುಪಡೆ ಸೇರಿದ ಕರ್ನಾಟಕದ ಮೊದಲ ಮಹಿಳೆ ಎಂಬ ಖ್ಯಾತಿಗೆ ಮೇಘನಾ ಭಾಜನ!

TNN Correspondent Posted On June 17, 2018
0


0
Shares
  • Share On Facebook
  • Tweet It

ಬೆಂಗಳೂರು: ದೇಶದಲ್ಲಿ ದಿನೇದಿನೆ ಮಹಿಳೆಯರ ಸಾಧನೆ ಸಂಖ್ಯೆ ಜಾಸ್ತಿಯಾಗುತ್ತಿದೆ. ಕ್ರೀಡೆ, ವಿಮಾನ, ರಾಜಕೀಯ, ಆಟೋಮೊಬೈಲ್, ಎಂಜಿನಿಯರಿಂಗ್ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಅಗಾಧ ಪ್ರತಿಭೆ ಮೆರೆಯುತ್ತಿದ್ದಾರೆ. ಮಹಿಳೆ ಎಂದರೆ ಅಡುಗೆ ಮನೆಗೆ ಸೀಮಿತವಲ್ಲ, ಆಕೆಯೂ ಯಾವ ಸಾಧನೆ ಬೇಕಾದರೂ ಮಾಡಬಲ್ಲಳು ಎಂಬುದನ್ನು ಸಾಬೀತುಪಡಿಸುತ್ತಿದ್ದಾಳೆ.

ಈಗ ಇಂಥಾದ್ದೇ ಸಾಧನೆಯೊಂದನ್ನು ಕರ್ನಾಟಕದ ಹೆಮ್ಮೆಯ ಯುವತಿಯೊಬ್ಬಳು ಮಾಡುವ ಮೂಲಕ ಪ್ರತಿ ಕನ್ನಡಿಗನೂ ಹೆಮ್ಮೆಪಡುವಂತೆ ಮಾಡಿದ್ದಾರೆ. ಹೌದು, ಚಿಕ್ಕಮಗಳೂರಿನ ಮೇಘನಾ ಭಾಗವಾತ್ ವಾಯುಪಡೆಗೆ ಸೇರುವ ಮೂಲಕ, ವಾಯುಪಡೆ ಸೇರಿದ ಕರ್ನಾಟಕದ ಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನಳಾಗಿದ್ದಾಳೆ.

2017ರಲ್ಲಿ ವಾಯುಪಡೆ ಅಕಾಡೆಮಿ ಸೇರಿದ್ದ ಮೇಘನಾ ಭಾಗವತ, ಶನಿವಾರವಷ್ಟೇ ಯುದ್ಧವಿಮಾನಗಳ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಯುದ್ಧ ವಿಮಾನಗಳ ಪೈಲಟ್ ಆಗಿ ಆಯ್ಕೆಯಾದ 113 ಮಹಿಳೆಯರಲ್ಲಿ ಮೇಘನಾ ಸಹ ಒಬ್ಬಳು ಹಾಗೂ ಇವರೇ ಕರ್ನಾಟಕದಿಂದ ಮೊದಲ ಬಾರಿಗೆ ವಾಯುಪಡೆಗೆ ಆಯ್ಕೆಯಾದವರು ಎಂಬ ಕೀರ್ತಿ ಲಭಿಸಿದೆ.

ಚಿಕ್ಕಮಗಳೂರಿನಲ್ಲಿ ಜನಿಸಿದ ಮೇಘನಾ ಕುಟುಂಬದಲ್ಲಿ ನ್ಯಾಯವಾದಿಗಳೇ ಜಾಸ್ತಿ ಇದ್ದಾರೆ. ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂಬ ದಿಸೆಯಿಂದ 2015ರಲ್ಲಿ ಮೈಸೂರಿನ ಜಯ ಚಾಮರಾಜೇಂದ್ರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮಾಹಿತಿ ವಿಜ್ಞಾನ ಹಾಗೂ ಎಂಜಿನಿಯರಿಂಗ್ ನಲ್ಲಿ ಪದವಿ ಪಡೆದಿದ್ದರು. ಬಳಿಕ ವಾಯುಪಡೆ ಸೇರಿ ಈಗ ಅಮೋಘ ಸಾಧನೆ ಮೆರೆದಿದ್ದಾರೆ.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search