• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನೋಟು ನಿಷೇಧ ವಿರೋಧಿಸಿದವರು ಓದಲೇಬೇಕಾದ ಸುದ್ದಿ ಇದು!

TNN Correspondent Posted On June 17, 2018


  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿರುವ ಕಪ್ಪುಹಣ ಹಾಗೂ ಕಪ್ಪು ಕುಳಗಳನ್ನು ಹೊರತೆಗೆಯಲು 2016ರ ನವೆಂಬರ್ 8ರಂದು ನೋಟು ನಿಷೇಧ ಮಾಡಿದಾಗ ತುಂಬ ಜನ ವಿರೋಧಿಸಿದರು. ಅದರಲ್ಲೂ ಇವರೆಲ್ಲ ಮೋದಿ ವಿರೋಧಿಗಳೇ ಆಗಿರುವುದರಿಂದ ಸುಖಾಸುಮ್ಮನೆ ಟೀಕಿಸಿದರು.

ಆದರೆ ಹೀಗೆ ವಿರೋಧಿಗಳ ಲೆಕ್ಕಾಚಾರವೆಲ್ಲವನ್ನೂ ಸುಳ್ಳು ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿಸ್ಸೀಮರು. ಹಾಗಾಗಿ ನೋಟು ನಿಷೇಧದ ಬಳಿಕ ದೇಶದಲ್ಲಿ ಕಪ್ಪು ಕುಳಗಳ ಉಪಟಳ ಕಡಿಮೆಯಾಗಿದೆ. ಕಪ್ಪು ಹಣ ಬ್ಯಾಂಕು ಸೇರಿದೆ. ಇಂತಹ ನೋಟು ನಿಷೇಧ ನಿರ್ಧಾರಕ್ಕೆ ಈಗ ಮತ್ತೊಂದು ಗರಿ ಸಿಕ್ಕಿದೆ.

ಹೌದು, ಆದಾಯ ಬಹಿರಂಗಪಡಿಸದ ಸುಮಾರು 10,767 ಕೋಟಿ ರೂಪಾಯಿಗಳನ್ನು ಆದಾಯ ಮತ್ತು ತೆರಿಗೆ ಇಲಾಖೆ ಪತ್ತೆಹಚ್ಚಿದ್ದು, ಇದು ಕಳೆದ ಬಾರಿ ಪತ್ತೆ ಹಚ್ಚಿದ್ದಕ್ಕಿಂತ ಶೇ.20ರಷ್ಟು ಜಾಸ್ತಿಯಾಗಿದೆ ಎಂದು ತಿಳಿದುಬಂದಿದೆ.

2017-18ನೇ ಸಾಲಿನಲ್ಲಿ ಆದಾಯ ಬಹಿರಂಗಪಡಿಸದ ಹಾಗೂ ತೆರಿಗೆ ಪಾವತಿಸದ ಇಷ್ಟು ಮೊತ್ತವನ್ನು ಆದಾಯ ತೆರಿಗೆ ಇಲಾಖೆಯ ಮಹಾ ನಿರ್ದೇಶಕ ಪತ್ತೆ ಹಚ್ಚಿದ್ದು, ಹೆಚ್ಚಿನ ತನಿಖೆ ಮಾಡುತ್ತಿದ್ದಾರೆ. 2016-17ರಲ್ಲಿ ಐಟಿ ಇಲಾಖೆ, ಹೀಗೆ ಆದಾಯ ಬಹಿರಂಗಪಡಿಸದ 9,051 ಕೋಟಿ ರೂಪಾಯಿ ಪತ್ತೆ ಹಚ್ಚಿತ್ತು.

ಪ್ಯಾನ್ ಕಾರ್ಡ್ ಹೊಂದಿರದೆ ಅತಿ ಹೆಚ್ಚು ಹಣ ಇರುವ ಬ್ಯಾಂಕ್ ಖಾತೆಗಳು, ವಿದೇಶಿ ಖಾತೆ ತೆರಿಗೆ ಅನುಸರಣೆ ಕಾಯ್ದೆ, ಸ್ವಯಂಕೃತವಾಗಿ ಮಾಹಿತಿ ವಿನಿಮಯ, ಸಾಮಾನ್ಯ ವಿನಿಮಯ ಮಾಪನದ ಅನ್ವಯ ಐಟಿ ಇಲಾಖೆ ಈ ಹಣ ಪತ್ತೆ ಹಚ್ಚಿದೆ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ನೋಟು ನಿಷೇಧದಿಂದ ದೇಶದಲ್ಲಿ ಕಪ್ಪು ಹಣ ಪತ್ತೆಯಾಗುತ್ತಿರುವುದು ಶ್ಲಾಘನೀಯವಾಗಿದೆ.

  • Share On Facebook
  • Tweet It


- Advertisement -


Trending Now
ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
Tulunadu News March 22, 2023
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
Leave A Reply

  • Recent Posts

    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
  • Popular Posts

    • 1
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 2
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 3
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 4
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 5
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search