• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೋಹಿತ್ ವೇಮುಲ ಕುಟುಂಬಕ್ಕೆ ಮನೆ ಕಟ್ಟಿಸಿಕೊಡುತ್ತೇವೆ ಎಂದಿದ್ದ ಮುಸ್ಲಿಂ ಲೀಗ್ ಇನ್ನೂ ಪತ್ತೆಯಿಲ್ಲವಂತೆ!

TNN Correspondent Posted On June 19, 2018
0


0
Shares
  • Share On Facebook
  • Tweet It

ಎರಡು ವರ್ಷಗಳ ಹಿಂದೆ, 2016ರಲ್ಲಿ ರೋಹಿತ್ ವೇಮುಲ ದೆಹಲಿ ಜವಾಹರ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಾಗ ಇಡೀ ದೇಶದಲ್ಲಿ ದೊಡ್ಡ ನಾಟಕ ನಡೆಯಿತು. ರಾಷ್ಟ್ರದಲ್ಲಿ ಅಸಹಿಷ್ಣುತೆ ಮನೆಮಾಡಿದೆ ಎಂದು ಬೊಬ್ಬೆ ಹಾಕಲಾಯಿತು. ಅಲ್ಲಿ ರೋಹಿತ್ ವೇಮುಲ ಏಕೆ ಆತ್ಮಹತ್ಯೆ ಮಾಡಿಕೊಂಡರು, ಇದು ಕೊಲೆಯಾ ಎಂಬುದು ಯಾರಿಗೂ ಬೇಕಾಗಿರಲಿಲ್ಲ. ಎಲ್ಲರದ್ದೂ ಒಂದೇ ಉದ್ದೇಶ, ಅದು ನರೇಂದ್ರ ಮೋದಿ ಅವರನ್ನು ತೆಗಳುವುದು!

ಹೀಗೆ ದೇಶದಲ್ಲಿ ಹಲವರು ಮೋದಿ ಅವರ ವಿರುದ್ಧ ಮಾತನಾಡುತ್ತಿರುವಾಗಲೇ, ದೊಡ್ಡದಾಗಿ ಮಧ್ಯಸ್ಥಿಕೆ ವಹಿಸಿದ್ದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಪಕ್ಷ, ರೋಹಿತ್ ವೇಮುಲ ಬಡವನಾಗಿದ್ದು, ಆತನೇ ಕುಟುಂಬಕ್ಕೆ ಆಧಾರನಾಗಿದ್ದ. ಹಾಗಾಗಿ ನಾವು ಕುಟುಂಬಸ್ಥರಿಗೆ ಮನೆಯೊಂದನ್ನು ಕಟ್ಟಿಸಿಕೊಡುತ್ತೇವೆ ಎಂದು ಹೇಳಿದ್ದರು.

ಆದರೆ ಭರವಸೆ ನೀಡಿ ಎರಡು ವರ್ಷವಾಗಿದೆ. ಕುಟುಂಬಸ್ಥರು ಇಷ್ಟೊತ್ತಿಗಾಗಲೇ ಮುಸ್ಲಿಂ ಲೀಗ್ ಕಟ್ಟಿಸಿದ ಮನೆಯಲ್ಲಿ ವಾಸಿಸಬೇಕಿತ್ತು. ಆದರೆ ಇದುವರೆಗೆ ಮನೆ ಕಟ್ಟಿಸುವ ಜಾಗವಾಗಲಿ, ಮನೆಯ ಕಾಮಗಾರಿಯಾಗಲಿ ನಡೆದಿಲ್ಲ. ಖುದ್ದು ಈ ಕುರಿತು ರೋಹಿತ್ ವೇಮುಲ ತಾಯಿ ರಾಧಿಕಾ ಅವರೇ ಪ್ರತಿಕ್ರಿಯಿಸಿದ್ದು, ಮುಸ್ಲಿಂ ಲೀಗ್ ಇದುವರೆಗೂ ಯಾವುದೇ ಮನೆ ಕಟ್ಟಿಸಿಕೊಟ್ಟಿಲ್ಲ ಎಂದು ಹೇಳಿದ್ದಾರೆ.

ವೇಮುಲ ಆತ್ಮಹತ್ಯೆ ಮಾಡಿಕೊಂಡ ಬಳಿಕ ಮುಸ್ಲಿಂ ಲೀಗ್ ಪಕ್ಷದವರು ಆಗಮಿಸಿ ನಮಗೆ ಮನೆ ಕಟ್ಟಿಸಿಕೊಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಇದುವರೆಗೂ ಯಾರೂ ಪತ್ತೆ ಇಲ್ಲ. ನಾವು ಇಂದಿಗೂ ಬಾಡಿಗೆ ಮನೆಯಲ್ಲಿಯೇ ವಾಸಿಸುತ್ತಿದ್ದು, ರಾಜಕೀಯ ಲಾಭಕ್ಕೋಸ್ಕರ್ ಮುಸ್ಲಿಂ ಲೀಗ್ ಹೀಗೆ ಮಾಡಿದೆ ಎಂದು ದೂರಿದ್ದಾರೆ.

ಇನ್ನು ರೋಹಿತ್ ವೇಮುಲ ಸತ್ತ ಬಳಿಕ ಕರ್ನಾಟಕದಲ್ಲಿ ಆತ ನನ್ನ ಮಗ ಎಂದರು, ಸಹೋದರ ಎಂದರು. ದೇಶಾದ್ಯಂತ ವೇಮುಲನನ್ನು ಬೆಂಬಲಿಸಿ ಪ್ರತಿಭಟನೆಗಳು ನಡೆದವು. ಆತ ದಲಿತ ಎಂಬ ಕಾರಣಕ್ಕಾಗಿ ಇನ್ನಿಲ್ಲದ ಆರೋಪ ಮಾಡಿದರು. ಆದರೆ ಈಗ ರೋಹಿತ್ ವೇಮುಲ ತಾಯಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೂ ಯಾವ ಬಾಡಿಗೆ ಹೋರಾಟಗಾರನೂ ಬೆಂಬಲಕ್ಕೆ ನಿಂತಿಲ್ಲ ಎಂಬುದು ದುರಂತ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search