• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೋಹಿತ್ ವೇಮುಲ ಕುಟುಂಬಕ್ಕೆ ಮನೆ ಕಟ್ಟಿಸಿಕೊಡುತ್ತೇವೆ ಎಂದಿದ್ದ ಮುಸ್ಲಿಂ ಲೀಗ್ ಇನ್ನೂ ಪತ್ತೆಯಿಲ್ಲವಂತೆ!

TNN Correspondent Posted On June 19, 2018
0


0
Shares
  • Share On Facebook
  • Tweet It

ಎರಡು ವರ್ಷಗಳ ಹಿಂದೆ, 2016ರಲ್ಲಿ ರೋಹಿತ್ ವೇಮುಲ ದೆಹಲಿ ಜವಾಹರ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಾಗ ಇಡೀ ದೇಶದಲ್ಲಿ ದೊಡ್ಡ ನಾಟಕ ನಡೆಯಿತು. ರಾಷ್ಟ್ರದಲ್ಲಿ ಅಸಹಿಷ್ಣುತೆ ಮನೆಮಾಡಿದೆ ಎಂದು ಬೊಬ್ಬೆ ಹಾಕಲಾಯಿತು. ಅಲ್ಲಿ ರೋಹಿತ್ ವೇಮುಲ ಏಕೆ ಆತ್ಮಹತ್ಯೆ ಮಾಡಿಕೊಂಡರು, ಇದು ಕೊಲೆಯಾ ಎಂಬುದು ಯಾರಿಗೂ ಬೇಕಾಗಿರಲಿಲ್ಲ. ಎಲ್ಲರದ್ದೂ ಒಂದೇ ಉದ್ದೇಶ, ಅದು ನರೇಂದ್ರ ಮೋದಿ ಅವರನ್ನು ತೆಗಳುವುದು!

ಹೀಗೆ ದೇಶದಲ್ಲಿ ಹಲವರು ಮೋದಿ ಅವರ ವಿರುದ್ಧ ಮಾತನಾಡುತ್ತಿರುವಾಗಲೇ, ದೊಡ್ಡದಾಗಿ ಮಧ್ಯಸ್ಥಿಕೆ ವಹಿಸಿದ್ದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಪಕ್ಷ, ರೋಹಿತ್ ವೇಮುಲ ಬಡವನಾಗಿದ್ದು, ಆತನೇ ಕುಟುಂಬಕ್ಕೆ ಆಧಾರನಾಗಿದ್ದ. ಹಾಗಾಗಿ ನಾವು ಕುಟುಂಬಸ್ಥರಿಗೆ ಮನೆಯೊಂದನ್ನು ಕಟ್ಟಿಸಿಕೊಡುತ್ತೇವೆ ಎಂದು ಹೇಳಿದ್ದರು.

ಆದರೆ ಭರವಸೆ ನೀಡಿ ಎರಡು ವರ್ಷವಾಗಿದೆ. ಕುಟುಂಬಸ್ಥರು ಇಷ್ಟೊತ್ತಿಗಾಗಲೇ ಮುಸ್ಲಿಂ ಲೀಗ್ ಕಟ್ಟಿಸಿದ ಮನೆಯಲ್ಲಿ ವಾಸಿಸಬೇಕಿತ್ತು. ಆದರೆ ಇದುವರೆಗೆ ಮನೆ ಕಟ್ಟಿಸುವ ಜಾಗವಾಗಲಿ, ಮನೆಯ ಕಾಮಗಾರಿಯಾಗಲಿ ನಡೆದಿಲ್ಲ. ಖುದ್ದು ಈ ಕುರಿತು ರೋಹಿತ್ ವೇಮುಲ ತಾಯಿ ರಾಧಿಕಾ ಅವರೇ ಪ್ರತಿಕ್ರಿಯಿಸಿದ್ದು, ಮುಸ್ಲಿಂ ಲೀಗ್ ಇದುವರೆಗೂ ಯಾವುದೇ ಮನೆ ಕಟ್ಟಿಸಿಕೊಟ್ಟಿಲ್ಲ ಎಂದು ಹೇಳಿದ್ದಾರೆ.

ವೇಮುಲ ಆತ್ಮಹತ್ಯೆ ಮಾಡಿಕೊಂಡ ಬಳಿಕ ಮುಸ್ಲಿಂ ಲೀಗ್ ಪಕ್ಷದವರು ಆಗಮಿಸಿ ನಮಗೆ ಮನೆ ಕಟ್ಟಿಸಿಕೊಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಇದುವರೆಗೂ ಯಾರೂ ಪತ್ತೆ ಇಲ್ಲ. ನಾವು ಇಂದಿಗೂ ಬಾಡಿಗೆ ಮನೆಯಲ್ಲಿಯೇ ವಾಸಿಸುತ್ತಿದ್ದು, ರಾಜಕೀಯ ಲಾಭಕ್ಕೋಸ್ಕರ್ ಮುಸ್ಲಿಂ ಲೀಗ್ ಹೀಗೆ ಮಾಡಿದೆ ಎಂದು ದೂರಿದ್ದಾರೆ.

ಇನ್ನು ರೋಹಿತ್ ವೇಮುಲ ಸತ್ತ ಬಳಿಕ ಕರ್ನಾಟಕದಲ್ಲಿ ಆತ ನನ್ನ ಮಗ ಎಂದರು, ಸಹೋದರ ಎಂದರು. ದೇಶಾದ್ಯಂತ ವೇಮುಲನನ್ನು ಬೆಂಬಲಿಸಿ ಪ್ರತಿಭಟನೆಗಳು ನಡೆದವು. ಆತ ದಲಿತ ಎಂಬ ಕಾರಣಕ್ಕಾಗಿ ಇನ್ನಿಲ್ಲದ ಆರೋಪ ಮಾಡಿದರು. ಆದರೆ ಈಗ ರೋಹಿತ್ ವೇಮುಲ ತಾಯಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೂ ಯಾವ ಬಾಡಿಗೆ ಹೋರಾಟಗಾರನೂ ಬೆಂಬಲಕ್ಕೆ ನಿಂತಿಲ್ಲ ಎಂಬುದು ದುರಂತ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search