• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಡಿಯಲ್ಲಿ ಉಗ್ರರು ನುಸುಳಿದರೇ ಹೊಡೆದುರುಳಿಸಲು ಭಾರತೀಯ ಸ್ನಿಪರ್ ಪಡೆ

TNN Correspondent Posted On June 19, 2018
0


0
Shares
  • Share On Facebook
  • Tweet It

ದೆಹಲಿ: ಜಮ್ಮು ಕಾಶ್ಮೀರದ ಗಡಿಯಲ್ಲಿ ನಿರಂತರವಾಗಿ ಅಕ್ರಮವಾಗಿ ನುಸುಳುವ ಮೂಲಕ ಕಿತಾಪತಿ ನಡೆಸುವ ಪಾಕಿ ಭಯೋತ್ಪಾದಕರಿಗೆ ತಕ್ಕ ಉತ್ತರ ನೀಡಲು ಭಾರತೀಯ ಸೇನೆ ಸಜ್ಜಾಗಿದ್ದು, ಗಡಿ ನುಸುಳುವ ಉಗ್ರರನ್ನು ಅದೇ ಸ್ಥಳದಲ್ಲೇ ಹೊಡೆದುರುಳಿಸಲು ಭರ್ಜರಿ ಪ್ಲಾನ್ ರೂಪಿಸಿದೆ. ಉಗ್ರರನ್ನು ಪ್ರವೇಶದ ಸ್ಥಳದಲ್ಲೇ ಉಡೀಸ್ ಮಾಡಲು ಸೇನೆ ಗಡಿಯಲ್ಲಿ ಸ್ನಿಪರ್ ಪಡೆಯನ್ನು ಹೆಚ್ಚಿಸಲು ನಿರ್ಧರಿಸಿದೆ. ಈ ಮೂಲಕ ಕಣಿವೆ ರಾಜ್ಯದಲ್ಲಿ ವಿಶೇಷವಾಗಿ ಅಮರನಾಥ ಯಾತ್ರೆ ವೇಳೆ ದಾಳಿ ನಡೆಸಲು ಉದ್ದೇಶಿಸಿರುವ ಉಗ್ರರ ಷಡ್ಯಂತ್ರ ತಡೆಯಲು ಸೇನೆ ಮುಂದಾಗಿದೆ.

ಗಡಿಯಲ್ಲಿ ಅರಣ್ಯ, ಮಂಜಿನ ಗುಡ್ಡಗಳು ಸೇರಿ ಆಯಾ ವಾತಾವರಣಕ್ಕೆ ತಕ್ಕಂತೆ ಸೈನಿಕರಿಗೆ ವೇಷಭೂಷಣಗಳನ್ನು ಸಿದ್ಧಪಡಿಸಿ, ಆ ವಾತಾವರಣದಲ್ಲಿ ಸೈನಿಕರನ್ನು ವಿಲೀನಗೊಳಿಸಿ, ಶತ್ರುಗಳ ವಿರುದ್ಧ ಹೋರಾಡುವುದೇ ಸ್ನಿಪರ್ ಪಡೆಯಾಗಿದೆ. ಈ ಪಡೆಯ ಸೈನಿಕರಿಗೆ ಮಧ್ಯಪ್ರದೇಶದ ಇಂದೋರ್ ನಲ್ಲಿ ಇರುವ ಸೆಂಟ್ರಲ್ ಸ್ಕೂಲ್ ಆಫ್ ವೆಪನ್ ಆ್ಯಂಡ್ ಟ್ಯಾಕ್ಟಿಕ್ಸ್ ಕೇಂದ್ರದಲ್ಲಿ ಕಠಿಣ ತರಬೇತಿ ನೀಡಲಾಗುತ್ತದೆ. ತರಬೇತಿಯಲ್ಲಿ ಭಾಗಿಯಾದ ನೂರು ಯೋಧರಲ್ಲಿ ಒಬ್ಬರನ್ನು ಸ್ನಪರ್ ಪಡೆಗೆ ಆಯ್ಕೆ ಮಾಡಲಾಗುತ್ತದೆ. ಅವರಿಗೆ ಪುನಃ 60 ದಿನಗಳ ಕಠಿಣ ತರಬೇತಿ ನೀಡುವ ಮೂಲಕ ಸ್ನಿಪರ್ ಗಳನ್ನಾಗಿ ಸಿದ್ಧಪಡಿಸಲಾಗುತ್ತದೆ. ಇವರು ಗಡಿಯಲ್ಲಿ ಆಯಾ ವಾತಾವರಣಕ್ಕೆ ತಕ್ಕಂತೆ ವೇಷಭೂಷಣ ತೊಟ್ಟುಕೊಂಡು, ಹೋರಾಟ ಮಾಡುತ್ತಾರೆ.

ಎಂಥಹುದ್ದೇ ವಾತಾವರಣದಲ್ಲೂ ಕಾರ್ಯನಿರ್ವಹಿಸುವ ಸ್ನಿಪರ್ ಪಡೆಯು ಹಿಮಚ್ಛಾದಿತ ಪ್ರದೇಶದಿಂದ ಹಿಡಿದು ದುರ್ಗಮವಾದ ಅರಣ್ಯ, ಗುಡ್ಡ ಕಾಡುಗಳಲ್ಲೂ ಕಾರ್ಯ ನಿರ್ವಹಿಸುವ ಕ್ಷಮತೆಯನ್ನು ಹೊಂದಿರುತ್ತದೆ. ಭಯೋತ್ಪಾದಕರು ಒಳನುಸುಳುವ ಪ್ರದೇಶವನ್ನು ಮೊದಲು ಗುರುತಿಸಿ, ಆ ಪ್ರದೇಶದ ಮೇಲೆ ನಿಗಾ ಇಡಲು ಅದರ ಸಮೀಪದಲ್ಲಿ ಇನ್ನೊಂದು ಸ್ಥಳವನ್ನು ಗುರುತಿಸಿ, ಅಲ್ಲಿಯೇ ಅಡಗಿ ಕುಳಿತು ಕಾರ್ಯಾಚರಣೆ ನಡೆಸಲಾಗುತ್ತದೆ. ಈ ಪಡೆಯು ಅಗತ್ಯಬಿದ್ದರೇ ಶತ್ರು ರಾಷ್ಟ್ರವನ್ನು ಪ್ರವೇಶಿಸಿ ವಿಶೇಷ ಕಾರ್ಯಾಚರಣೆಯನ್ನು ನಡೆಸುತ್ತದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!

  • Privacy Policy
  • Contact
© Tulunadu Infomedia.

Press enter/return to begin your search