• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಡಿಯಲ್ಲಿ ಉಗ್ರರು ನುಸುಳಿದರೇ ಹೊಡೆದುರುಳಿಸಲು ಭಾರತೀಯ ಸ್ನಿಪರ್ ಪಡೆ

TNN Correspondent Posted On June 19, 2018
0


0
Shares
  • Share On Facebook
  • Tweet It

ದೆಹಲಿ: ಜಮ್ಮು ಕಾಶ್ಮೀರದ ಗಡಿಯಲ್ಲಿ ನಿರಂತರವಾಗಿ ಅಕ್ರಮವಾಗಿ ನುಸುಳುವ ಮೂಲಕ ಕಿತಾಪತಿ ನಡೆಸುವ ಪಾಕಿ ಭಯೋತ್ಪಾದಕರಿಗೆ ತಕ್ಕ ಉತ್ತರ ನೀಡಲು ಭಾರತೀಯ ಸೇನೆ ಸಜ್ಜಾಗಿದ್ದು, ಗಡಿ ನುಸುಳುವ ಉಗ್ರರನ್ನು ಅದೇ ಸ್ಥಳದಲ್ಲೇ ಹೊಡೆದುರುಳಿಸಲು ಭರ್ಜರಿ ಪ್ಲಾನ್ ರೂಪಿಸಿದೆ. ಉಗ್ರರನ್ನು ಪ್ರವೇಶದ ಸ್ಥಳದಲ್ಲೇ ಉಡೀಸ್ ಮಾಡಲು ಸೇನೆ ಗಡಿಯಲ್ಲಿ ಸ್ನಿಪರ್ ಪಡೆಯನ್ನು ಹೆಚ್ಚಿಸಲು ನಿರ್ಧರಿಸಿದೆ. ಈ ಮೂಲಕ ಕಣಿವೆ ರಾಜ್ಯದಲ್ಲಿ ವಿಶೇಷವಾಗಿ ಅಮರನಾಥ ಯಾತ್ರೆ ವೇಳೆ ದಾಳಿ ನಡೆಸಲು ಉದ್ದೇಶಿಸಿರುವ ಉಗ್ರರ ಷಡ್ಯಂತ್ರ ತಡೆಯಲು ಸೇನೆ ಮುಂದಾಗಿದೆ.

ಗಡಿಯಲ್ಲಿ ಅರಣ್ಯ, ಮಂಜಿನ ಗುಡ್ಡಗಳು ಸೇರಿ ಆಯಾ ವಾತಾವರಣಕ್ಕೆ ತಕ್ಕಂತೆ ಸೈನಿಕರಿಗೆ ವೇಷಭೂಷಣಗಳನ್ನು ಸಿದ್ಧಪಡಿಸಿ, ಆ ವಾತಾವರಣದಲ್ಲಿ ಸೈನಿಕರನ್ನು ವಿಲೀನಗೊಳಿಸಿ, ಶತ್ರುಗಳ ವಿರುದ್ಧ ಹೋರಾಡುವುದೇ ಸ್ನಿಪರ್ ಪಡೆಯಾಗಿದೆ. ಈ ಪಡೆಯ ಸೈನಿಕರಿಗೆ ಮಧ್ಯಪ್ರದೇಶದ ಇಂದೋರ್ ನಲ್ಲಿ ಇರುವ ಸೆಂಟ್ರಲ್ ಸ್ಕೂಲ್ ಆಫ್ ವೆಪನ್ ಆ್ಯಂಡ್ ಟ್ಯಾಕ್ಟಿಕ್ಸ್ ಕೇಂದ್ರದಲ್ಲಿ ಕಠಿಣ ತರಬೇತಿ ನೀಡಲಾಗುತ್ತದೆ. ತರಬೇತಿಯಲ್ಲಿ ಭಾಗಿಯಾದ ನೂರು ಯೋಧರಲ್ಲಿ ಒಬ್ಬರನ್ನು ಸ್ನಪರ್ ಪಡೆಗೆ ಆಯ್ಕೆ ಮಾಡಲಾಗುತ್ತದೆ. ಅವರಿಗೆ ಪುನಃ 60 ದಿನಗಳ ಕಠಿಣ ತರಬೇತಿ ನೀಡುವ ಮೂಲಕ ಸ್ನಿಪರ್ ಗಳನ್ನಾಗಿ ಸಿದ್ಧಪಡಿಸಲಾಗುತ್ತದೆ. ಇವರು ಗಡಿಯಲ್ಲಿ ಆಯಾ ವಾತಾವರಣಕ್ಕೆ ತಕ್ಕಂತೆ ವೇಷಭೂಷಣ ತೊಟ್ಟುಕೊಂಡು, ಹೋರಾಟ ಮಾಡುತ್ತಾರೆ.

ಎಂಥಹುದ್ದೇ ವಾತಾವರಣದಲ್ಲೂ ಕಾರ್ಯನಿರ್ವಹಿಸುವ ಸ್ನಿಪರ್ ಪಡೆಯು ಹಿಮಚ್ಛಾದಿತ ಪ್ರದೇಶದಿಂದ ಹಿಡಿದು ದುರ್ಗಮವಾದ ಅರಣ್ಯ, ಗುಡ್ಡ ಕಾಡುಗಳಲ್ಲೂ ಕಾರ್ಯ ನಿರ್ವಹಿಸುವ ಕ್ಷಮತೆಯನ್ನು ಹೊಂದಿರುತ್ತದೆ. ಭಯೋತ್ಪಾದಕರು ಒಳನುಸುಳುವ ಪ್ರದೇಶವನ್ನು ಮೊದಲು ಗುರುತಿಸಿ, ಆ ಪ್ರದೇಶದ ಮೇಲೆ ನಿಗಾ ಇಡಲು ಅದರ ಸಮೀಪದಲ್ಲಿ ಇನ್ನೊಂದು ಸ್ಥಳವನ್ನು ಗುರುತಿಸಿ, ಅಲ್ಲಿಯೇ ಅಡಗಿ ಕುಳಿತು ಕಾರ್ಯಾಚರಣೆ ನಡೆಸಲಾಗುತ್ತದೆ. ಈ ಪಡೆಯು ಅಗತ್ಯಬಿದ್ದರೇ ಶತ್ರು ರಾಷ್ಟ್ರವನ್ನು ಪ್ರವೇಶಿಸಿ ವಿಶೇಷ ಕಾರ್ಯಾಚರಣೆಯನ್ನು ನಡೆಸುತ್ತದೆ.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search