• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗಡಿಯಲ್ಲಿ ಉಗ್ರರು ನುಸುಳಿದರೇ ಹೊಡೆದುರುಳಿಸಲು ಭಾರತೀಯ ಸ್ನಿಪರ್ ಪಡೆ

TNN Correspondent Posted On June 19, 2018


  • Share On Facebook
  • Tweet It

ದೆಹಲಿ: ಜಮ್ಮು ಕಾಶ್ಮೀರದ ಗಡಿಯಲ್ಲಿ ನಿರಂತರವಾಗಿ ಅಕ್ರಮವಾಗಿ ನುಸುಳುವ ಮೂಲಕ ಕಿತಾಪತಿ ನಡೆಸುವ ಪಾಕಿ ಭಯೋತ್ಪಾದಕರಿಗೆ ತಕ್ಕ ಉತ್ತರ ನೀಡಲು ಭಾರತೀಯ ಸೇನೆ ಸಜ್ಜಾಗಿದ್ದು, ಗಡಿ ನುಸುಳುವ ಉಗ್ರರನ್ನು ಅದೇ ಸ್ಥಳದಲ್ಲೇ ಹೊಡೆದುರುಳಿಸಲು ಭರ್ಜರಿ ಪ್ಲಾನ್ ರೂಪಿಸಿದೆ. ಉಗ್ರರನ್ನು ಪ್ರವೇಶದ ಸ್ಥಳದಲ್ಲೇ ಉಡೀಸ್ ಮಾಡಲು ಸೇನೆ ಗಡಿಯಲ್ಲಿ ಸ್ನಿಪರ್ ಪಡೆಯನ್ನು ಹೆಚ್ಚಿಸಲು ನಿರ್ಧರಿಸಿದೆ. ಈ ಮೂಲಕ ಕಣಿವೆ ರಾಜ್ಯದಲ್ಲಿ ವಿಶೇಷವಾಗಿ ಅಮರನಾಥ ಯಾತ್ರೆ ವೇಳೆ ದಾಳಿ ನಡೆಸಲು ಉದ್ದೇಶಿಸಿರುವ ಉಗ್ರರ ಷಡ್ಯಂತ್ರ ತಡೆಯಲು ಸೇನೆ ಮುಂದಾಗಿದೆ.

ಗಡಿಯಲ್ಲಿ ಅರಣ್ಯ, ಮಂಜಿನ ಗುಡ್ಡಗಳು ಸೇರಿ ಆಯಾ ವಾತಾವರಣಕ್ಕೆ ತಕ್ಕಂತೆ ಸೈನಿಕರಿಗೆ ವೇಷಭೂಷಣಗಳನ್ನು ಸಿದ್ಧಪಡಿಸಿ, ಆ ವಾತಾವರಣದಲ್ಲಿ ಸೈನಿಕರನ್ನು ವಿಲೀನಗೊಳಿಸಿ, ಶತ್ರುಗಳ ವಿರುದ್ಧ ಹೋರಾಡುವುದೇ ಸ್ನಿಪರ್ ಪಡೆಯಾಗಿದೆ. ಈ ಪಡೆಯ ಸೈನಿಕರಿಗೆ ಮಧ್ಯಪ್ರದೇಶದ ಇಂದೋರ್ ನಲ್ಲಿ ಇರುವ ಸೆಂಟ್ರಲ್ ಸ್ಕೂಲ್ ಆಫ್ ವೆಪನ್ ಆ್ಯಂಡ್ ಟ್ಯಾಕ್ಟಿಕ್ಸ್ ಕೇಂದ್ರದಲ್ಲಿ ಕಠಿಣ ತರಬೇತಿ ನೀಡಲಾಗುತ್ತದೆ. ತರಬೇತಿಯಲ್ಲಿ ಭಾಗಿಯಾದ ನೂರು ಯೋಧರಲ್ಲಿ ಒಬ್ಬರನ್ನು ಸ್ನಪರ್ ಪಡೆಗೆ ಆಯ್ಕೆ ಮಾಡಲಾಗುತ್ತದೆ. ಅವರಿಗೆ ಪುನಃ 60 ದಿನಗಳ ಕಠಿಣ ತರಬೇತಿ ನೀಡುವ ಮೂಲಕ ಸ್ನಿಪರ್ ಗಳನ್ನಾಗಿ ಸಿದ್ಧಪಡಿಸಲಾಗುತ್ತದೆ. ಇವರು ಗಡಿಯಲ್ಲಿ ಆಯಾ ವಾತಾವರಣಕ್ಕೆ ತಕ್ಕಂತೆ ವೇಷಭೂಷಣ ತೊಟ್ಟುಕೊಂಡು, ಹೋರಾಟ ಮಾಡುತ್ತಾರೆ.

ಎಂಥಹುದ್ದೇ ವಾತಾವರಣದಲ್ಲೂ ಕಾರ್ಯನಿರ್ವಹಿಸುವ ಸ್ನಿಪರ್ ಪಡೆಯು ಹಿಮಚ್ಛಾದಿತ ಪ್ರದೇಶದಿಂದ ಹಿಡಿದು ದುರ್ಗಮವಾದ ಅರಣ್ಯ, ಗುಡ್ಡ ಕಾಡುಗಳಲ್ಲೂ ಕಾರ್ಯ ನಿರ್ವಹಿಸುವ ಕ್ಷಮತೆಯನ್ನು ಹೊಂದಿರುತ್ತದೆ. ಭಯೋತ್ಪಾದಕರು ಒಳನುಸುಳುವ ಪ್ರದೇಶವನ್ನು ಮೊದಲು ಗುರುತಿಸಿ, ಆ ಪ್ರದೇಶದ ಮೇಲೆ ನಿಗಾ ಇಡಲು ಅದರ ಸಮೀಪದಲ್ಲಿ ಇನ್ನೊಂದು ಸ್ಥಳವನ್ನು ಗುರುತಿಸಿ, ಅಲ್ಲಿಯೇ ಅಡಗಿ ಕುಳಿತು ಕಾರ್ಯಾಚರಣೆ ನಡೆಸಲಾಗುತ್ತದೆ. ಈ ಪಡೆಯು ಅಗತ್ಯಬಿದ್ದರೇ ಶತ್ರು ರಾಷ್ಟ್ರವನ್ನು ಪ್ರವೇಶಿಸಿ ವಿಶೇಷ ಕಾರ್ಯಾಚರಣೆಯನ್ನು ನಡೆಸುತ್ತದೆ.

  • Share On Facebook
  • Tweet It


- Advertisement -


Trending Now
#ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
Tulunadu News December 2, 2023
ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
Tulunadu News December 2, 2023
Leave A Reply

  • Recent Posts

    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
    • ಪಂಚಾಯತ್ ಮೂಲಕ ಅಂಗಡಿ ಪಡೆದಿದ್ದ ಆತ!
    • ಚೋಪ್ರಾ ಆಗಲ್ಲ ಎಂದದ್ದಕ್ಕೆ ರಶ್ಮಿಕಾ ಆದ್ಲು ರಣಬೀರ್ ಜೋಡಿ!
    • ಇನ್ನೊಬ್ಬ ಉಗ್ರ ಸಿದ್ದೀಕ್ ಅನಾಮಧೇಯ ಶೂಟರ್ ಗಳಿಂದ ಹತ್ಯೆ!
    • ಮಿಸ್ ಪಾಂಡಿಚೇರಿ ಈಗ ಮಿಸ್ ಆಫ್ರಿಕಾ ಗೋಲ್ಡನ್ ಸ್ಪರ್ಧೆಗೆ ರೆಡಿ!
  • Popular Posts

    • 1
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • 2
      ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • 3
      ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • 4
      ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • 5
      ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search